AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ವಾರವಾದರೂ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ ಏಕೆ? ಇಲ್ಲಿದೆ ಕಾರಣ

Darshan Thoogudeepa: ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನನನ್ನು ದರ್ಶನ್ ಪಡೆದುಕೊಂಡಿದ್ದಾರೆ. ಜಾಮೀನು ಪಡೆದು ಮೂರು ವಾರವಾಗಿದ್ದರೂ ದರ್ಶನ್​ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಏಕೆ? ಕಾರಣ ಇಲ್ಲಿದೆ.

ಮೂರು ವಾರವಾದರೂ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ ಏಕೆ? ಇಲ್ಲಿದೆ ಕಾರಣ
ಮಂಜುನಾಥ ಸಿ.
|

Updated on:Nov 22, 2024 | 12:16 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಐದು ತಿಂಗಳ ಕಾಲ ಜೈಲಿನಲ್ಲಿದ್ದರು. ಮೂರು ವಾರಗಳ ಹಿಂದೆ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟು ಆರು ವಾರಗಳ ಮಧ್ಯಂತರ ಜಾಮೀನನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಆರು ವಾರದಲ್ಲಿ ಮೂರು ವಾರ ಕಳೆದು ಹೋಗಿದೆ, ಆದರೆ ಈ ವರೆಗೆ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ. ಅಲ್ಲದೆ ನ್ಯಾಯಾಲಯಕ್ಕೆ ಇದರ ವರದಿಯನ್ನೂ ಸಲ್ಲಿಸಿರಲಿಲ್ಲ.

ನಿನ್ನೆ ಹೈಕೋರ್ಟ್​ನಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ನ್ಯಾಯಾಲಯದ ನಿರ್ದೇಶನದಂತೆ ದರ್ಶನ್​ರ ಚಿಕಿತ್ಸೆಯ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ ಎಂದರು. ಆಗ ಸಿವಿ ನಾಗೇಶ್ ಅವರು ಮಾಹಿತಿಯನ್ನು ಹೈಕೋರ್ಟ್​ಗೆ ಸಲ್ಲಿಕೆ ಮಾಡಿದರು. ಅದರಲ್ಲಿ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡುವುದು ತಡವಾಗಿರುತ್ತಿರುವುದಕ್ಕೆ ಕಾರಣ ವಿವರಿಸಲಾಗಿದೆ.

ದರ್ಶನ್ ಗೆ ಶಸ್ತ್ರ ಚಿಕಿತ್ಸೆ ಮಾಡೋದಕ್ಕೆ ತಯಾರಿ ಮಾಡಲಾಗ್ತಾ ಇದೆ. ಶಸ್ತ್ರಚಿಕಿತ್ಸೆಗಾಗಿ ದರ್ಶನ್ ಅನ್ನು ಅಣಿಮಾಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ದರ್ಶನ್​ಗೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ, ಆಪರೇಷನ್ ಮಾಡಬೇಕು ಎಂದರೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ವ್ಯಕ್ತಿಯ ರಕ್ತದೊತ್ತಡದ ಸಮತೋಲನದಲ್ಲಿರಬೇಕು, ಆದರೆ ದರ್ಶನ್​ರ ರಕ್ತದೊತ್ತಡ ಸಮತೋಲನದಲ್ಲಿ ಇಲ್ಲದೇ ಇರುವ ಕಾರಣ ಶಸ್ತ್ರಿಚಿಕಿತ್ಸೆ ತಡವಾಗುತ್ತಿದೆ. ಅಲ್ಲದೆ ದರ್ಶನ್ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ, ಕನ್ಸರ್ವೇಟಿವ್ ಟ್ರೀಟ್ಮೆಂಟ್ ಮುಂದುವರೆದಿದೆ, ಪಿಸಿಯೋಥೆರ ಮತ್ತು ಔಷಧಗಳಿಂದ ಸಮಸ್ಸೆ ನಿಯಂತ್ರಣದಲ್ಲಿ ಇಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ ಅವ್ಯವಸ್ಥೆ: ದರ್ಶನ್ ಅಭಿಮಾನಿಗಳ ಆಕ್ರೋಶ

ದರ್ಶನ್​ ಜೈಲಿನಲ್ಲಿದ್ದಾಗ ಬೆನ್ನು ನೋವಿನ ಸಮಸ್ಯೆ ಎದುರಿಸಿದ್ದರು. ದರ್ಶನ್​ರ ಬೆನ್ನು ಮೂಳೆಯ ಎಲ್​1 ಹಾಗೂ ಎಲ್​5 ಭಾಗದಲ್ಲಿ ಸಮಸ್ಯೆ ಎದುರಾಗಿತ್ತು. ದರ್ಶನ್​ಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಕಾರಣ ನೀಡಿ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ದರ್ಶನ್​ಗೆ 45 ದಿನಗಳ ಮಧ್ಯಂತರ ಜಾಮೀನನ್ನು ಅಕ್ಟೋಬರ್ 30ರಂದು ನೀಡಿತ್ತು. ನಟ ದರ್ಶನ್ ರಾಜ ರಾಜೇಶ್ವರಿ ನಗರದ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯವರ ಹೊರತಾಗಿ ಇನ್ಯಾರಿಗೂ ದರ್ಶನ್ ಭೇಟಿಯನ್ನು ನಿರಾಕರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 22 November 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ