AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ವಾರವಾದರೂ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ ಏಕೆ? ಇಲ್ಲಿದೆ ಕಾರಣ

Darshan Thoogudeepa: ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್​ನಿಂದ ಮಧ್ಯಂತರ ಜಾಮೀನನನ್ನು ದರ್ಶನ್ ಪಡೆದುಕೊಂಡಿದ್ದಾರೆ. ಜಾಮೀನು ಪಡೆದು ಮೂರು ವಾರವಾಗಿದ್ದರೂ ದರ್ಶನ್​ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ ಏಕೆ? ಕಾರಣ ಇಲ್ಲಿದೆ.

ಮೂರು ವಾರವಾದರೂ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ ಏಕೆ? ಇಲ್ಲಿದೆ ಕಾರಣ
ಮಂಜುನಾಥ ಸಿ.
|

Updated on:Nov 22, 2024 | 12:16 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಐದು ತಿಂಗಳ ಕಾಲ ಜೈಲಿನಲ್ಲಿದ್ದರು. ಮೂರು ವಾರಗಳ ಹಿಂದೆ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟು ಆರು ವಾರಗಳ ಮಧ್ಯಂತರ ಜಾಮೀನನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಆರು ವಾರದಲ್ಲಿ ಮೂರು ವಾರ ಕಳೆದು ಹೋಗಿದೆ, ಆದರೆ ಈ ವರೆಗೆ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲಾಗಿಲ್ಲ. ಅಲ್ಲದೆ ನ್ಯಾಯಾಲಯಕ್ಕೆ ಇದರ ವರದಿಯನ್ನೂ ಸಲ್ಲಿಸಿರಲಿಲ್ಲ.

ನಿನ್ನೆ ಹೈಕೋರ್ಟ್​ನಲ್ಲಿ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ನ್ಯಾಯಾಲಯದ ನಿರ್ದೇಶನದಂತೆ ದರ್ಶನ್​ರ ಚಿಕಿತ್ಸೆಯ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ ಎಂದರು. ಆಗ ಸಿವಿ ನಾಗೇಶ್ ಅವರು ಮಾಹಿತಿಯನ್ನು ಹೈಕೋರ್ಟ್​ಗೆ ಸಲ್ಲಿಕೆ ಮಾಡಿದರು. ಅದರಲ್ಲಿ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡುವುದು ತಡವಾಗಿರುತ್ತಿರುವುದಕ್ಕೆ ಕಾರಣ ವಿವರಿಸಲಾಗಿದೆ.

ದರ್ಶನ್ ಗೆ ಶಸ್ತ್ರ ಚಿಕಿತ್ಸೆ ಮಾಡೋದಕ್ಕೆ ತಯಾರಿ ಮಾಡಲಾಗ್ತಾ ಇದೆ. ಶಸ್ತ್ರಚಿಕಿತ್ಸೆಗಾಗಿ ದರ್ಶನ್ ಅನ್ನು ಅಣಿಮಾಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ದರ್ಶನ್​ಗೆ ಅತಿಯಾದ ರಕ್ತದೊತ್ತಡ ಸಮಸ್ಯೆ ಎದುರಾಗಿದೆ, ಆಪರೇಷನ್ ಮಾಡಬೇಕು ಎಂದರೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ವ್ಯಕ್ತಿಯ ರಕ್ತದೊತ್ತಡದ ಸಮತೋಲನದಲ್ಲಿರಬೇಕು, ಆದರೆ ದರ್ಶನ್​ರ ರಕ್ತದೊತ್ತಡ ಸಮತೋಲನದಲ್ಲಿ ಇಲ್ಲದೇ ಇರುವ ಕಾರಣ ಶಸ್ತ್ರಿಚಿಕಿತ್ಸೆ ತಡವಾಗುತ್ತಿದೆ. ಅಲ್ಲದೆ ದರ್ಶನ್ ಶಸ್ತ್ರ ಚಿಕಿತ್ಸೆಗೆ ಮಾನಸಿಕವಾಗಿ ಸಿದ್ದರಾಗಬೇಕಿದೆ, ಕನ್ಸರ್ವೇಟಿವ್ ಟ್ರೀಟ್ಮೆಂಟ್ ಮುಂದುವರೆದಿದೆ, ಪಿಸಿಯೋಥೆರ ಮತ್ತು ಔಷಧಗಳಿಂದ ಸಮಸ್ಸೆ ನಿಯಂತ್ರಣದಲ್ಲಿ ಇಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ ಅವ್ಯವಸ್ಥೆ: ದರ್ಶನ್ ಅಭಿಮಾನಿಗಳ ಆಕ್ರೋಶ

ದರ್ಶನ್​ ಜೈಲಿನಲ್ಲಿದ್ದಾಗ ಬೆನ್ನು ನೋವಿನ ಸಮಸ್ಯೆ ಎದುರಿಸಿದ್ದರು. ದರ್ಶನ್​ರ ಬೆನ್ನು ಮೂಳೆಯ ಎಲ್​1 ಹಾಗೂ ಎಲ್​5 ಭಾಗದಲ್ಲಿ ಸಮಸ್ಯೆ ಎದುರಾಗಿತ್ತು. ದರ್ಶನ್​ಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಕಾರಣ ನೀಡಿ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ದರ್ಶನ್​ಗೆ 45 ದಿನಗಳ ಮಧ್ಯಂತರ ಜಾಮೀನನ್ನು ಅಕ್ಟೋಬರ್ 30ರಂದು ನೀಡಿತ್ತು. ನಟ ದರ್ಶನ್ ರಾಜ ರಾಜೇಶ್ವರಿ ನಗರದ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯವರ ಹೊರತಾಗಿ ಇನ್ಯಾರಿಗೂ ದರ್ಶನ್ ಭೇಟಿಯನ್ನು ನಿರಾಕರಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 22 November 24

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ