AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋರೂಂ ಒಪನ್ ಮಾಡಲು ಸುದೀಪ್​ಗೆ 50 ಲಕ್ಷ ರೂಪಾಯಿ ಆಫರ್

ಕಿಚ್ಚ ಸುದೀಪ್ ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಗೂ ಬ್ಯುಸಿ ನಟ. ಶೋರೂಂ ಉದ್ಘಾಟನೆಗೆ 50 ಲಕ್ಷ ರೂ. ಆಫರ್ ಬಂದರೂ, ಸುದೀಪ್ ಹಣಕ್ಕಿಂತ ಮಾನವೀಯ ಸಂಬಂಧಗಳಿಗೆ ಹೆಚ್ಚು ಬೆಲೆ ನೀಡುತ್ತಾರೆ. ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹೊಸ ಸಿನಿ ತಂಡಗಳಿಗೆ ಬೆಂಬಲ ನೀಡಿ, ಪ್ರೋತ್ಸಾಹಿಸುತ್ತಾರೆ. ಅವರ ಈ ಸರಳತೆ ಮತ್ತು ಸಹಾಯ ಮನೋಭಾವ ಜನರಿಗೆ ಇಷ್ಟವಾಗಿದೆ.

ಶೋರೂಂ ಒಪನ್ ಮಾಡಲು ಸುದೀಪ್​ಗೆ 50 ಲಕ್ಷ ರೂಪಾಯಿ ಆಫರ್
Sudeep
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 25, 2025 | 11:56 AM

Share

ಕಿಚ್ಚ ಸುದೀಪ್ (Sudeep) ಅವರು ಸ್ಯಾಂಡಲ್​ವುಡ್​ನ ಬ್ಯುಸಿ ಹೀರೋ. ಅವರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ಚಿರಪರಿಚಿತರು. ಹಿಂದಿ, ತೆಲುಗಿನಲ್ಲಿ ಅವರು ಸಿನಿಮಾ ಮಾಡಿದ್ದಾರೆ. ‘ಈಗ’ ಚಿತ್ರವಂತೂ ವಿಲನ್ ಆಗಿ ಸುದಿಪ್ ತುಂಬಾನೇ ಇಷ್ಟ ಆದರು. ಅವರಿಗೆ ಶೋರೂಂ ಉದ್ಘಾಟನೆ ಮಾಡಲು ಕೆಲವರು 50 ಲಕ್ಷ ರೂಪಾಯಿ ಕೊಡಲು ಕೂಡ ರೆಡಿ ಇದ್ದಾರೆ. ಆದರೆ, ಇದಕ್ಕೆ ಸುದೀಪ್ ಸೊಪ್ಪು ಹಾಕೋದಿಲ್ಲ.

ಸುದೀಪ್ ಅವರು ಹೊಸ ಸಿನಿಮಾ ತಂಡಗಳ ಪೋಸ್ಟರ್ ಹಾಗೂ ಟ್ರೇಲರ್​ಗಳನ್ನು ರಿಲೀಸ್ ಮಾಡುತ್ತಾರೆ. ತಮ್ಮ  ಬ್ಯುಸಿಯಾದ ಶೆಡ್ಯೂಲ್ ಮಧ್ಯೆಯೂ ಸಮಯ ಮಾಡಿಕೊಂಡು ಅವರು ಬರುತ್ತಾರೆ ಮತ್ತು ತಂಡಕ್ಕೆ ವಿಶ್ ಮಾಡಿ ಹೋಗುತ್ತಾರೆ. ಈಗ ಸುದೀಪ್ ಅವರು ಒಂದು ಕಾರ್ ಶೋರೂಂ ಉದ್ಘಾಟನೆಗೆ ಹೋದರೆ 50 ಲಕ್ಷ ಕೊಡಲು ಕೆಲವರು ರೆಡಿ ಇದ್ದಾರಂತೆ.

ಸುದೀಪ್ ಅವರು ತಮ್ಮ ಮನಸ್ಸಿಗೆ ಯಾವುದು ಸರಿ ಎನಿಸಿತೋ ಅದನ್ನು ಮಾಡುತ್ತಾರೆ. ಅವರು ಹಣಕ್ಕಾಗಿ ಎಲ್ಲವನ್ನೂ ಮಾಡುವವರಲ್ಲ. ಆಪ್ತರು ಎನಿಸಿದರೆ ಅವರು ಫ್ರೀ ಆಗಿ ಬೇಕಿದ್ದರೂ ಕೆಲಸ ಮಾಡಿಕೊಡುತ್ತಾರೆ. ಈ ಬಗ್ಗೆ ವಿಷ್ಣುವರ್ಧನ್ ಅಭಿಮಾನಿಯಲ್ಲಿ ಒಬ್ಬರಾದ ವೀರಕಪುತ್ರ ಶ್ರೀನಿವಾಸ್ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ
Image
‘ದೈಹಿಕ ವಿಚಾರದಲ್ಲಿ ವಂಚನೆ ಮಾಡೋದು ದೊಡ್ಡದಲ್ಲ’; ಅಕ್ಷಯ್ ಪತ್ನಿ ಟ್ವಿಂಕಲ್
Image
ಭುವನ್ ಗೌಡ ಮದುವೆಯಲ್ಲಿ ಹ್ಯಾಂಡ್ಸಮ್ ಹಂಕ್ ರೀತಿ ಕಾಣಿಸಿಕೊಂಡ ಯಶ್
Image
‘ನಿನ್ನ ಪಂಚೆ ಎಳೆಯೋಕೆ ಬರುತ್ತೆ, ಥೂ’; ಕೀಳು ಮಟ್ಟಕ್ಕೆ ಇಳಿದ ಅಶ್ವಿನಿ
Image
‘ಸೀತಾ ರಾಮ’ ಮುಗಿದ ಬಳಿಕ ಏನು ಮಾಡ್ತಿದ್ದಾಳೆ ಸಿಹಿ? ಇಲ್ಲಿದೆ ವಿವರ

ಸುದೀಪ್ ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗೆ ಚಂದನ್ ಸಿನಿಮಾಗೆ ವಿಶ್ ಮಾಡಿದರು. ಆ ಬಳಿಕ ರಾಜೇಂದ್ರ ಸಿಂಗ್ ಬಾಬು ಅವರ ಚಿತ್ರರಂಗದಲ್ಲಿ 5 ದಶಕ ಕಳೆದ ಸಂಭ್ರಮ ಆಚರಿಸುವಲ್ಲಿ ಭಾಗಿ ಆದರು.

ಇದನ್ನೂ ಓದಿ: ‘ಅಶ್ವಿನಿ ಗೌಡಗೆ ಕಿಚ್ಚ ಸುದೀಪ್ ಇನ್ನೂ ಸ್ವಲ್ಪ ಕ್ಲಾಸ್ ತಗೋಬೇಕು’: ವಾರಂತ್ಯಕ್ಕೆ ಕಾದ ವೀಕ್ಷಕರು

‘ಕಳೆದ ಒಂದು ವಾರದಲ್ಲಿ 8 ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಮನೆಯ ಯಜಮಾನನಂತೆ ನಿಂತು ಕೆಲಸ ಮಾಡಿಕೊಟ್ಟಿದ್ದಾರೆ. ಎಲ್ಲರಿಗೂ ನಾನಿದ್ದೇನೆ ಎಂಬ ಭರವಸೆ ಮೂಡಿಸುತ್ತಿದ್ದಾರೆ. ಸುದೀಪ್​ನ ಶೋರೂಂ ಇನಾಗರೇಷನ್ ಮಾಡಲು ಕರೆಸಿ. ನಾನು 50 ಲಕ್ಷ ರೂಪಾಯಿ ಕೊಡ್ತೀನಿ ಅಂತಾರೆ. ಸುದೀಪ್ ಬಳಿ ಹಣದ ಬಗ್ಗೆ ಮಾತನಾಡುವಂತಿಲ್ಲ’ ಎಂದು ಅವರು ಹೇಳಿದ್ದಾರೆ. ಇದು ಸುದೀಪ್ ಅವರ ದೊಡ್ಡ ಗುಣ ತೋರಿಸುತ್ತದೆ. ಸುದೀಪ್ ಅವರು ಸದ್ಯ ‘ಮಾರ್ಕ್’ ಚಿತ್ರದ ಶೂಟ್ ಪೂರ್ಣಗೊಳಿಸಿದ್ದಾರೆ. ಹೊಸ ಸಿನಿಮಾ ಸಂತೋಷ್ ಆನಂದ್​ರಾಮ್ ಜೊತೆ ಆಗಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!