AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋರೂಂ ಒಪನ್ ಮಾಡಲು ಸುದೀಪ್​ಗೆ 50 ಲಕ್ಷ ರೂಪಾಯಿ ಆಫರ್

ಕಿಚ್ಚ ಸುದೀಪ್ ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಗೂ ಬ್ಯುಸಿ ನಟ. ಶೋರೂಂ ಉದ್ಘಾಟನೆಗೆ 50 ಲಕ್ಷ ರೂ. ಆಫರ್ ಬಂದರೂ, ಸುದೀಪ್ ಹಣಕ್ಕಿಂತ ಮಾನವೀಯ ಸಂಬಂಧಗಳಿಗೆ ಹೆಚ್ಚು ಬೆಲೆ ನೀಡುತ್ತಾರೆ. ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹೊಸ ಸಿನಿ ತಂಡಗಳಿಗೆ ಬೆಂಬಲ ನೀಡಿ, ಪ್ರೋತ್ಸಾಹಿಸುತ್ತಾರೆ. ಅವರ ಈ ಸರಳತೆ ಮತ್ತು ಸಹಾಯ ಮನೋಭಾವ ಜನರಿಗೆ ಇಷ್ಟವಾಗಿದೆ.

ಶೋರೂಂ ಒಪನ್ ಮಾಡಲು ಸುದೀಪ್​ಗೆ 50 ಲಕ್ಷ ರೂಪಾಯಿ ಆಫರ್
Sudeep
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 25, 2025 | 11:56 AM

Share

ಕಿಚ್ಚ ಸುದೀಪ್ (Sudeep) ಅವರು ಸ್ಯಾಂಡಲ್​ವುಡ್​ನ ಬ್ಯುಸಿ ಹೀರೋ. ಅವರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ಚಿರಪರಿಚಿತರು. ಹಿಂದಿ, ತೆಲುಗಿನಲ್ಲಿ ಅವರು ಸಿನಿಮಾ ಮಾಡಿದ್ದಾರೆ. ‘ಈಗ’ ಚಿತ್ರವಂತೂ ವಿಲನ್ ಆಗಿ ಸುದಿಪ್ ತುಂಬಾನೇ ಇಷ್ಟ ಆದರು. ಅವರಿಗೆ ಶೋರೂಂ ಉದ್ಘಾಟನೆ ಮಾಡಲು ಕೆಲವರು 50 ಲಕ್ಷ ರೂಪಾಯಿ ಕೊಡಲು ಕೂಡ ರೆಡಿ ಇದ್ದಾರೆ. ಆದರೆ, ಇದಕ್ಕೆ ಸುದೀಪ್ ಸೊಪ್ಪು ಹಾಕೋದಿಲ್ಲ.

ಸುದೀಪ್ ಅವರು ಹೊಸ ಸಿನಿಮಾ ತಂಡಗಳ ಪೋಸ್ಟರ್ ಹಾಗೂ ಟ್ರೇಲರ್​ಗಳನ್ನು ರಿಲೀಸ್ ಮಾಡುತ್ತಾರೆ. ತಮ್ಮ  ಬ್ಯುಸಿಯಾದ ಶೆಡ್ಯೂಲ್ ಮಧ್ಯೆಯೂ ಸಮಯ ಮಾಡಿಕೊಂಡು ಅವರು ಬರುತ್ತಾರೆ ಮತ್ತು ತಂಡಕ್ಕೆ ವಿಶ್ ಮಾಡಿ ಹೋಗುತ್ತಾರೆ. ಈಗ ಸುದೀಪ್ ಅವರು ಒಂದು ಕಾರ್ ಶೋರೂಂ ಉದ್ಘಾಟನೆಗೆ ಹೋದರೆ 50 ಲಕ್ಷ ಕೊಡಲು ಕೆಲವರು ರೆಡಿ ಇದ್ದಾರಂತೆ.

ಸುದೀಪ್ ಅವರು ತಮ್ಮ ಮನಸ್ಸಿಗೆ ಯಾವುದು ಸರಿ ಎನಿಸಿತೋ ಅದನ್ನು ಮಾಡುತ್ತಾರೆ. ಅವರು ಹಣಕ್ಕಾಗಿ ಎಲ್ಲವನ್ನೂ ಮಾಡುವವರಲ್ಲ. ಆಪ್ತರು ಎನಿಸಿದರೆ ಅವರು ಫ್ರೀ ಆಗಿ ಬೇಕಿದ್ದರೂ ಕೆಲಸ ಮಾಡಿಕೊಡುತ್ತಾರೆ. ಈ ಬಗ್ಗೆ ವಿಷ್ಣುವರ್ಧನ್ ಅಭಿಮಾನಿಯಲ್ಲಿ ಒಬ್ಬರಾದ ವೀರಕಪುತ್ರ ಶ್ರೀನಿವಾಸ್ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ
Image
‘ದೈಹಿಕ ವಿಚಾರದಲ್ಲಿ ವಂಚನೆ ಮಾಡೋದು ದೊಡ್ಡದಲ್ಲ’; ಅಕ್ಷಯ್ ಪತ್ನಿ ಟ್ವಿಂಕಲ್
Image
ಭುವನ್ ಗೌಡ ಮದುವೆಯಲ್ಲಿ ಹ್ಯಾಂಡ್ಸಮ್ ಹಂಕ್ ರೀತಿ ಕಾಣಿಸಿಕೊಂಡ ಯಶ್
Image
‘ನಿನ್ನ ಪಂಚೆ ಎಳೆಯೋಕೆ ಬರುತ್ತೆ, ಥೂ’; ಕೀಳು ಮಟ್ಟಕ್ಕೆ ಇಳಿದ ಅಶ್ವಿನಿ
Image
‘ಸೀತಾ ರಾಮ’ ಮುಗಿದ ಬಳಿಕ ಏನು ಮಾಡ್ತಿದ್ದಾಳೆ ಸಿಹಿ? ಇಲ್ಲಿದೆ ವಿವರ

ಸುದೀಪ್ ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗೆ ಚಂದನ್ ಸಿನಿಮಾಗೆ ವಿಶ್ ಮಾಡಿದರು. ಆ ಬಳಿಕ ರಾಜೇಂದ್ರ ಸಿಂಗ್ ಬಾಬು ಅವರ ಚಿತ್ರರಂಗದಲ್ಲಿ 5 ದಶಕ ಕಳೆದ ಸಂಭ್ರಮ ಆಚರಿಸುವಲ್ಲಿ ಭಾಗಿ ಆದರು.

ಇದನ್ನೂ ಓದಿ: ‘ಅಶ್ವಿನಿ ಗೌಡಗೆ ಕಿಚ್ಚ ಸುದೀಪ್ ಇನ್ನೂ ಸ್ವಲ್ಪ ಕ್ಲಾಸ್ ತಗೋಬೇಕು’: ವಾರಂತ್ಯಕ್ಕೆ ಕಾದ ವೀಕ್ಷಕರು

‘ಕಳೆದ ಒಂದು ವಾರದಲ್ಲಿ 8 ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಮನೆಯ ಯಜಮಾನನಂತೆ ನಿಂತು ಕೆಲಸ ಮಾಡಿಕೊಟ್ಟಿದ್ದಾರೆ. ಎಲ್ಲರಿಗೂ ನಾನಿದ್ದೇನೆ ಎಂಬ ಭರವಸೆ ಮೂಡಿಸುತ್ತಿದ್ದಾರೆ. ಸುದೀಪ್​ನ ಶೋರೂಂ ಇನಾಗರೇಷನ್ ಮಾಡಲು ಕರೆಸಿ. ನಾನು 50 ಲಕ್ಷ ರೂಪಾಯಿ ಕೊಡ್ತೀನಿ ಅಂತಾರೆ. ಸುದೀಪ್ ಬಳಿ ಹಣದ ಬಗ್ಗೆ ಮಾತನಾಡುವಂತಿಲ್ಲ’ ಎಂದು ಅವರು ಹೇಳಿದ್ದಾರೆ. ಇದು ಸುದೀಪ್ ಅವರ ದೊಡ್ಡ ಗುಣ ತೋರಿಸುತ್ತದೆ. ಸುದೀಪ್ ಅವರು ಸದ್ಯ ‘ಮಾರ್ಕ್’ ಚಿತ್ರದ ಶೂಟ್ ಪೂರ್ಣಗೊಳಿಸಿದ್ದಾರೆ. ಹೊಸ ಸಿನಿಮಾ ಸಂತೋಷ್ ಆನಂದ್​ರಾಮ್ ಜೊತೆ ಆಗಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ