AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಂಕಿ’ ಎದುರು ‘ಸಲಾರ್’ ಬಿಡುಗಡೆ ಏಕೆ, ಶಾರುಖ್ ಮೇಲೆ ಹೊಂಬಾಳೆಗೆ ಏಕೀ ಸಿಟ್ಟು? ವಿಜಯ್ ಕಿರಗಂದೂರು ಹೇಳಿದ್ದು ಹೀಗೆ

Salaar vs Dunki: ಪ್ರಭಾಸ್ ನಟನೆಯ ‘ಸಲಾರ್’ ಮತ್ತು ಶಾರುಖ್ ಖಾನ್ ನಟನೆಯ ‘ಡಂಕಿ’ ಜೊತೆಗೆ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ನಿರ್ಮಾಪಕ ವಿಜಯ್ ಕಿರಗಂದೂರು ಮಾತನಾಡಿದ್ದಾರೆ.

‘ಡಂಕಿ’ ಎದುರು ‘ಸಲಾರ್’ ಬಿಡುಗಡೆ ಏಕೆ, ಶಾರುಖ್ ಮೇಲೆ ಹೊಂಬಾಳೆಗೆ ಏಕೀ ಸಿಟ್ಟು? ವಿಜಯ್ ಕಿರಗಂದೂರು ಹೇಳಿದ್ದು ಹೀಗೆ
ವಿಜಯ್ ಕಿರಗಂದೂರು
ಮಂಜುನಾಥ ಸಿ.
|

Updated on:Dec 12, 2023 | 2:42 PM

Share

ಹೊಂಬಾಳೆ ಫಿಲ್ಮ್ಸ್ (Hombale fims) ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ‘ಸಲಾರ್’ (Salaar) ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ‘ಸಲಾರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಎರಡೂ ಸಹ ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಾಗಿದ್ದು ಎರಡರ ನಡುವೆ ದೊಡ್ಡ ಬಾಕ್ಸ್ ಆಫೀಸ್ ಫೈಟ್ ನಿರೀಕ್ಷಿಸಲಾಗಿದೆ. ಈ ನಡುವೆ ಹೊಂಬಾಳೆ ಏಕೆ ಶಾರುಖ್ ಖಾನ್ ಹಿಂದೆ ಬಿದ್ದಿದೆ ಎಂಬ ಅನುಮಾನವೂ ಎದ್ದಿದೆ. ‘ಕೆಜಿಎಫ್’ ಸಿನಿಮಾ ಸಹ ಶಾರುಖ್ ಖಾನ್​ರ ‘ಝೀರೋ’ ಸಿನಿಮಾ ಬಿಡುಗಡೆ ಆದಾಗಲೇ ಬಿಡುಗಡೆ ಆಗಿ ಸೂಪರ್ ಡೂಪರ್ ಹಿಟ್ ಆಗಿತ್ತು, ‘ಝೀರೋ’ ಸಿನಿಮಾ ಮಖಾಡೆ ಮಲಗಿತ್ತು.

‘ಕೆಜಿಎಫ್’ ಸಿನಿಮಾ 2018ರ ಡಿಸೆಂಬರ್ 21 ಕ್ಕೆ ಬಿಡುಗಡೆ ಆಗಿತ್ತು. ಶಾರುಖ್ ಖಾನ್ ನಟನೆಯ ‘ಝೀರೋ’ ಸಿನಿಮಾ ಸಹ ಅದೇ ದಿನ ಬಿಡುಗಡೆ ಆಗಿ ಸೋತಿತ್ತು. ಈಗ ‘ಸಲಾರ್’ ಸಿನಿಮಾ ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿದೆ. ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾ ಡಿಸೆಂಬರ್ 21ಕ್ಕೆ ತೆರೆಗೆ ಬರುತ್ತಿದೆ. ಈ ಬಾರಿ ಯಾರು ಗೆಲ್ಲಲಿದ್ದಾರೆ ಎಂಬುದು ಕುತೂಹಲ ಹುಟ್ಟಿಸಿದೆ. ಆದರೆ ಹೊಂಬಾಳೆ ಏಕೆ ಶಾರುಖ್ ಖಾನ್ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿಯೇ ತಮ್ಮ ಬಹು ನಿರೀಕ್ಷಿತ ಸಿನಿಮಾವನ್ನು ಶಾರುಖ್​ಗೆ ಎದುರಾಗಿ ಬಿಡುಗಡೆ ಮಾಡುತ್ತದೆ? ಈ ಬಗ್ಗೆ ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರು ಮಾತನಾಡಿದ್ದಾರೆ.

ಬಾಲಿವುಡ್​ನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ವಿಜಯ್ ಕಿರಗಂದೂರು, ‘‘ಶಾರುಖ್ ಖಾನ್ ಎದುರು ಸಿನಿಮಾ ಬಿಡುಗಡೆ ಮಾಡಬೇಕು ಎಂಬ ಯಾವ ಉದ್ದೇಶವೂ ನಮಗೆ ಇಲ್ಲ. ಅಸಲಿಗೆ ‘ಸಲಾರ್’ ಸಿನಿಮಾ ಇನ್ನೂ ಬೇಗ ಬಿಡುಗಡೆ ಆಗಬೇಕಿತ್ತು. ವಿಎಫ್​ಎಕ್ಸ್ ಹಾಗೂ ಇನ್ನೂ ಕೆಲವು ಕೆಲಸಗಳು ತಡವಾದ್ದರಿಂದ ಡಿಸೆಂಬರ್ 22ಕ್ಕೆ ಬಿಡುಗಡೆ ಆಗುತ್ತಿವೆ. ನಾವು ಕಳೆದ ಹಲವು ವರ್ಷಗಳಿಂದಲೂ ನಮ್ಮ ನಂಬಿಕೆಗಳಿಗೆ ತಕ್ಕಂತೆ ಸಿನಿಮಾ ಬಿಡುಗಡೆ ಮಾಡಿಕೊಂಡು ಬಂದಿದ್ದೇವೆ. ಈ ಬಾರಿಯೂ ಸಹ ಅದೇ ನಂಬಿಕೆ ಆಧಾರದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿ:‘ಸಲಾರ್​’ ವರ್ಸಸ್​ ‘ಡಂಕಿ’ ಟ್ರೇಲರ್ ಪೈಪೋಟಿ; ಹಿಂದಿಯಲ್ಲಿ ಶಾರುಖ್​ ಖಾನ್​ ಮೇಲುಗೈ

ಹೊಂಬಾಳೆಯ ವಿಜಯ್ ಕಿರಗಂದೂರು, ಜ್ಯೋತಿಷ್ಯವನ್ನು ಬಹುವಾಗಿ ನಂಬುತ್ತಾರೆ. ಸಿನಿಮಾದ ಬಿಡುಗಡೆ, ಟ್ರೈಲರ್ ಬಿಡುಗಡೆ ಇತ್ಯಾದಿಗಳನ್ನು ಜ್ಯೋತಿಷಿಗಳನ್ನು ಕೇಳಿ ಅವರು ನೀಡಿದ ದಿನಾಂಕ ಸಮಯಕ್ಕೆ ಬಿಡುಗಡೆ ಮಾಡುತ್ತಾರೆ. ಹಾಗಾಗಿ ಈಗಲೂ ಸಹ ಡಿಸೆಂಬರ್ 22ಕ್ಕೆ ಜ್ಯೋತಿಷಿಗಳು ನೀಡಿದ ದಿನಾಂಕದ ಆಧಾರದಲ್ಲಿಯೇ ಬಿಡುಗಡೆ ಮಾಡುತ್ತಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿರುವ ವಿಜಯ್, ‘‘ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಆಲೋಚನೆಯೂ ಇತ್ತು. ಆದರೆ ಆ ಸಮಯದಲ್ಲಿ ತೆಲುಗು ಹಾಗೂ ತಮಿಳಿನ ಹಲವು ಸ್ಟಾರ್ ನಟರ ಸಿನಿಮಾಗಳು ಬಿಡುಗಡೆ ಆಗಲಿವೆ. ಹಾಗಾಗಿ ನಮ್ಮ ಸಿನಿಮಾವನ್ನು ಸ್ವಲ್ಪ ಮುಂದಕ್ಕೆ ಹಾಕಿಕೊಂಡೆವು. ಅಲ್ಲದೆ ಕ್ರಿಸ್​ಮಸ್ ಸಮಯದಲ್ಲಿ ಹತ್ತು ದಿನ ರಜೆ ಇರುತ್ತದೆ ಈ ವೇಳೆ ಜನ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಾರೆ ಎಂಬ ನಂಬಿಕೆಯಿಂದ ನಾವು ಈ ಸಮಯದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ’’ ಎಂದಿದ್ದಾರೆ.

‘ಸಲಾರ್’ ಮತ್ತು ‘ಡಂಕಿ’ಯ ಬಾಕ್ಸ್ ಆಫೀಸ್ ಲೆಕ್ಕಾಚಾರದ ಬಗ್ಗೆ ಮಾತನಾಡಿರುವ ವಿಜಯ್ ಕಿರಗಂದೂರು, ‘‘ಸಲಾರ್ ಮತ್ತು ಡಂಕಿಗೆ ಸಮಾನ ಪ್ರಮಾಣದ ಸ್ಕ್ರೀನ್​ಗಳು ಸಿಗುವ ಸಾಧ್ಯತೆ ಇದೆ. ಇಷ್ಟು ಸ್ಕ್ರೀನ್​ಗಳು ಸಿಕ್ಕರೂ ಸಹ ದೊಡ್ಡ ಮಟ್ಟದ ಸಾಧನೆ ಮಾಡಬಹುದು. ಎರಡೂ ಸಿನಿಮಾಗಳು ಚೆನ್ನಾಗಿ ಪ್ರದರ್ಶನ ಕಾಣುವ ವಿಶ್ವಾಸವಿದೆ’’ ಎಂದಿದ್ದಾರೆ ವಿಜಯ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 12 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ