AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಎರಡು ಭಾಗಗಳಲ್ಲಿ ಮಾಡಿದ್ದೇಕೆ: ರಕ್ಷಿತ್ ಶೆಟ್ಟಿ ಕೊಟ್ಟರು ಉತ್ತರ

Sapta Sagaradaache Ello: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಎರಡನೇ ಭಾಗ ಇಂದು (ನವೆಂಬರ್ 17) ಬಿಡುಗಡೆ ಆಗಿದೆ. ಮೊದಲ ಶೋ ನೋಡಿದ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ, ಈ ಸಿನಿಮಾವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಎರಡು ಭಾಗಗಳಲ್ಲಿ ಮಾಡಿದ್ದೇಕೆ: ರಕ್ಷಿತ್ ಶೆಟ್ಟಿ ಕೊಟ್ಟರು ಉತ್ತರ
ಸಪ್ತ ಸಾಗರದಾಚೆ ಎಲ್ಲೋ
ಮಂಜುನಾಥ ಸಿ.
|

Updated on:Nov 17, 2023 | 7:41 PM

Share

ರಕ್ಷಿತ್ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್ (Rukmini Vasanth), ಚೈತ್ರಾ ಆಚಾರ್ ಪ್ರಧಾನ ಪಾತ್ರಗಳಲ್ಲಿ ನಟಿಸಿ, ಹೇಮಂತ್ ರಾವ್ ನಿರ್ದೇಶಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾ ಇಂದು (ನವೆಂಬರ್ 17) ತೆರೆಗೆ ಬಂದಿದೆ. ಮೊದಲ ದಿನ ಸಿನಿಮಾದ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಇದೇ ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 1ರಂದು ಬಿಡುಗಡೆ ಆಗಿತ್ತು. ಆ ಸಿನಿಮಾ ಸಹ ಹಿಟ್ ಎನಿಸಿಕೊಂಡಿತ್ತು. ಈಗ ಸೈಡ್ ಬಿ ಸಹ ಹಿಟ್ ಆಗುವ ಸೂಚನೆಯನ್ನು ಮೊದಲ ದಿನವೇ ತೋರಿಸಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನೋಡಿದ ಕೆಲವರು ಈ ಸಿನಿಮಾವನ್ನು ಎರಡು ಭಾಗಗಳನ್ನಾಗಿ ಮಾಡದೆ ಒಂದೇ ಭಾಗ ಮಾಡಿದ್ದರೆ ಚೆನ್ನಾಗಿರುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕತೆಯನ್ನು ಅಲ್ಲಲ್ಲಿ ಎಳೆದಾಡಿದ ಭಾವ ಮೂಡುವುದನ್ನು ತಪ್ಪಿಸಬಹುದಿತ್ತು ಎಂಬ ಅಭಿಪ್ರಾಯ ಸಹ ನೀಡಿದ್ದಾರೆ. ಅಂದಹಾಗೆ ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಪ್ರಾರಂಭಿಸಿದಾಗ ಎರಡು ಭಾಗದಲ್ಲಿ ಬಿಡುಗಡೆ ಮಾಡುವ ಆಲೋಚನೆ ಇರಲಿಲ್ಲ, ಆದರೆ ಈ ಸಿನಿಮಾವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಿದ್ದೇಕೆ ಎಂಬುದರ ಬಗ್ಗೆ ರಕ್ಷಿತ್ ಶೆಟ್ಟಿ ಇದೀಗ ಮಾತನಾಡಿದ್ದಾರೆ.

ತಾವೇ ನಟಿಸಿ, ನಿರ್ಮಾಣ ಸಹ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾದ ಮೊದಲ ದಿನದ ಮೊದಲ ಶೋ ವೀಕ್ಷಿಸಿ ಖುಷಿಯಿಂದ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ರಕ್ಷಿತ್ ಶೆಟ್ಟಿ, ಈ ಸಿನಿಮಾವನ್ನು ಎರಡು ಭಾಗಗಳನ್ನಾಗಿ ಮಾಡಿದ ನಿರ್ಣಯ ಮಾಡಿದ್ದು ಹೇಗೆ ಎಂಬುದನ್ನು ವಿವರಿಸಿದರು. ”ಸಿನಿಮಾ ಪ್ರಾರಂಭ ಮಾಡಿದಾಗ ಇದು ಒಂದು ಭಾಗದ ಸಿನಿಮಾ ಅಷ್ಟೇ ಆಗಿತ್ತು. ಸಿನಿಮಾದ ಮೊದಲ ಭಾಗವನ್ನು ನೋಡಿದ ಪರಮವಃ ತಂಡದವರು ಇದು ಅಪೂರ್ಣ ಅನ್ನಿಸುತ್ತಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ನನಗೂ ಸಹ ಸಿನಿಮಾದ ಮೊದಲ ಭಾಗ ನೋಡಿದಾಗ ಹಾಗೆಯೇ ಆಗಿತ್ತು” ಎಂದಿದ್ದಾರೆ.

ಇದನ್ನೂ ಓದಿ:Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ

”ಮೊದಲ ಭಾಗದಲ್ಲಿಯೇ ಕತೆಗೆ ಸರಿಯಾದ ಸಂಪೂರ್ಣತೆ ಕೊಟ್ಟು ಮುಗಿಸುವ ಚರ್ಚೆಗಳು ನಡೆದವು ಆದರೆ ನಿರ್ದೇಶಕ ಹೇಮಂತ್ ರಾವ್​ಗೆ ಅದು ಇಷ್ಟವಿರಲಿಲ್ಲ. ಅವರು ಸಿನಿಮಾವನ್ನು ಎರಡು ಭಾಗಗಳನ್ನಾಗಿ ಮಾಡುವ ಆಲೋಚನೆ ಮುಂದಿಟ್ಟರು. ನಾನು ಸದಾ ನಿರ್ದೇಶಕನ ಆಲೋಚನೆಗಳನ್ನು ಗೌರವಿಸುತ್ತೇನೆ. ಸಿನಿಮಾದೊಟ್ಟಿಗೆ, ಕತೆಯೊಟ್ಟಿಗೆ ನಿಜವಾಗಿಯೂ ಹತ್ತಿರವಾಗಿರುವುದು ನಿರ್ದೇಶಕ ಮಾತ್ರ. ಹಾಗಾಗಿ ನಾನು ಹೇಮಂತ್ ಮಾತನ್ನು ಒಪ್ಪಿ, ಎರಡು ಭಾಗಗಳಲ್ಲಿ ಸಿನಿಮಾವನ್ನು ಮಾಡಲು ಒಪ್ಪಿಗೆ ಸೂಚಿಸಿದೆ” ಎಂದಿದ್ದಾರೆ ರಕ್ಷಿತ್.

”ಸಿನಿಮಾದ ಸೈಡ್ ಬಿ ಅನ್ನು ನೋಡುವಾಗ ನನಗೇ ಅನ್ನಿಸಿತು ಇದು ಖಂಡಿತವಾಗಿ ಎರಡು ಭಾಗಗಳಲ್ಲಿಯೇ ಬರಬೇಕಾಗಿದ್ದ ಸಿನಿಮಾ. ಅದರಲ್ಲಿಯೂ ಇಂದು ಸಿನಿಮಾ ಬಿಡುಗಡೆ ಆದಾಗ ನೋಡಿದಾಗಲಂತೂ ನನಗೆ ಹೆಚ್ಚು ಹೆಚ್ಚು ಅರ್ಥವಾಯಿತು ಈ ಸಿನಿಮಾ ಎರಡು ಭಾಗದಲ್ಲಿ ಆಗಲೇ ಬೇಕಿತ್ತು. ಎರಡು ಭಾಗಗಳಲ್ಲಿ ಸಿನಿಮಾ ಬಿಡುಗಡೆ ಮಾಡಿದ್ದಕ್ಕೆ ಖುಷಿಯೂ ಇದೆ. ಜೊತೆಗೆ ಹೇಮಂತ್ ರಾವ್ ಮೇಲಿನ ನಂಬಿಕೆ ಇನ್ನಷ್ಟು ಹೆಚ್ಚಾಯ್ತು. ಆತ ಒಬ್ಬ ಅದ್ಭುತವಾದ ನಿರ್ದೇಶಕ, ಹೇಮಂತ್ ರಾವ್ ಅಂಥಹಾ ನಿರ್ದೇಶಕರು ಕನ್ನಡ ಚಿತ್ರರಂಗಕ್ಕೆ ಹೆಚ್ಚು-ಹೆಚ್ಚು ಬೇಕು. ಎಷ್ಟು ಸಣ್ಣ-ಸಣ್ಣ ಡೀಟೇಲ್​ಗಳನ್ನು ಸಹ ಅದ್ಭುತವಾಗಿ ಅವರು ತೋರಿಸಿದ್ದಾರೆ” ಎಂದಿದ್ದಾರೆ ರಕ್ಷಿತ್ ಶೆಟ್ಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Fri, 17 November 23

ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ