AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ-ಉಪ್ಪಿ-ರಾಜ್ ನಟನೆಯ ‘45’ ಸಿನಿಮಾ ಬಿಡುಗಡೆ ವಿಳಂಬಕ್ಕೆ ಕಾರಣ ಇದೆ

45 Kannada Movie: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಸಿನಿಮಾ ಬಿಡುಗಡೆ ಆಗಲಿಲ್ಲ. ನಿಗದಿತ ದಿನಾಂಕದಂದು ಸಿನಿಮಾ ಬಿಡುಗಡೆ ಆಗದೇ ಇರುವುದಕ್ಕೆ ಕಾರಣ ಇದೀಗ ಬಹಿರಂಗವಾಗಿದೆ.

ಶಿವಣ್ಣ-ಉಪ್ಪಿ-ರಾಜ್ ನಟನೆಯ ‘45’ ಸಿನಿಮಾ ಬಿಡುಗಡೆ ವಿಳಂಬಕ್ಕೆ ಕಾರಣ ಇದೆ
Raj B Shetty
ಮಂಜುನಾಥ ಸಿ.
|

Updated on: Aug 20, 2025 | 12:05 PM

Share

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಅಚಾನಕ್ಕಾಗಿ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಯ್ತು. ಆದರೆ ಇದಕ್ಕೆ ಕಾರಣ ತಿಳಿದು ಬಂದಿರಲಿಲ್ಲ. ‘ಕೂಲಿ’, ‘ವಾರ್ 2’ ಸಿನಿಮಾ ಬಿಡುಗಡೆ ಆಗುತ್ತಿರುವುದರಿಂದ ‘45’ ಸಿನಿಮಾ ಬಿಡುಗಡೆ ಮುಂದೂಡಲಾಗುತ್ತಿದೆ ಎನ್ನಲಾಯ್ತು. ಆದರೆ ಇದೀಗ ಸಿನಿಮಾ ಬಿಡುಗಡೆ ಮುಂದೂಡಲು ನಿಜವಾದ ಕಾರಣ ಬಹಿರಂಗವಾಗಿದೆ.

‘45’ ಸಿನಿಮಾ ಅನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅರ್ಜುನ್ ಜನ್ಯ, ತಮ್ಮ ಮೊದಲ ಸಿನಿಮಾ ರಿಚ್ ಆಗಿ, ಅತ್ಯುತ್ತಮ ಗುಣಮಟ್ಟದಿಂದ ಮೂಡಿಬರಲೆಂದು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದು, ಕೆಲ ಹಾಲಿವುಡ್ ತಂತ್ರಜ್ಞರ ನೆರವನ್ನು ಪಡೆದುಕೊಂಡಿದ್ದಾರೆ. ಸಿನಿಮಾನಲ್ಲಿ ಸಾಕಷ್ಟು ವಿಎಫ್​ಎಕ್ಸ್ ಇದ್ದು, ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ಆಗಸ್ಟ್ 15 ರಂದು ಮಾಡಲಾಗಲಿಲ್ಲವಂತೆ.

‘45’ ಸಿನಿಮಾಕ್ಕೆ ಖ್ಯಾತ ಹಾಲಿವುಡ್ ವಿಎಫ್​ಎಕ್ಸ್ ಡಿಸೈನ್ ಸಂಸ್ಥೆಯಾದ ಮಾರ್ಜ್ (MARZ) ಮಾಡುತ್ತಿದೆ. ಮಾರ್ವೆಲ್ ಸಿನಿಮಾಗಳಾದ ‘ಸ್ಪೈಡರ್ಮಯಾನ್: ಫಾರ್ ಫ್ರಂ ಹೋಮ್’, ‘ಆಂಟ್​ಮ್ಯಾನ್’, ‘ಮೂನ್​​ಲೈಟ್’, ‘ವಾಂಡಾ ವಿಷನ್’ ಸೇರಿದಂತೆ, ‘ವೆಡ್​ನಸ್ ಡೇ’, ‘ಪೆರ್ಸಿ ಜಾಕ್ಸನ್’, ‘ದಿ ಕ್ರಿಯೇಟರ್’, ‘ಸ್ಟ್ರೇಂಜರ್ ಥಿಂಗ್ಸ್ 4’ ಇನ್ನೂ ಹಲವು ಜನಪ್ರಿಯ ಹಾಲಿವುಡ್ ಸಿನಿಮಾಗಳಿಗೆ ಮಾರ್ಜ್ ಸಂಸ್ಥೆ ವಿಎಫ್​ಎಕ್ಸ್ ಮಾಡಿದೆ.

ಇದನ್ನೂ ಓದಿ: ಮಲಯಾಳಂ ಜನತೆಗೆ ಧನ್ಯವಾದ ಹೇಳಿದ ರಾಜ್ ಬಿ ಶೆಟ್ಟಿ

ಇದೀಗ ಇದೇ ಸಂಸ್ಥೆ ‘45’ ಸಿನಿಮಾಕ್ಕೂ ವಿಎಫ್​ಎಕ್ಸ್ ಮಾಡುತ್ತಿದ್ದು, ಸಿನಿಮಾನಲ್ಲಿ ಗ್ರಾಫಿಕ್ಸ್ ಮತ್ತು ವಿಎಫ್​ಎಕ್ಸ್​ ಪ್ರಮುಖವಾಗಿದ್ದು ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ಆಗಸ್ಟ್ 15 ರಂದು ಆಗಲಿಲ್ಲವಂತೆ. ಮಾರ್ಜ್ ಸಂಸ್ಥೆ ಕೆನಡಾ ಮೂಲದ್ದಾಗಿದ್ದು ಈ ಸಂಸ್ಥೆಯ ಮುಖ್ಯ ತಂತ್ರಜ್ಞ ಯಶ್ ಗೌಡ ಸಹ ಈ ಬಗ್ಗೆ ಮಾತನಾಡಿದ್ದು, ‘45’ ನಮ್ಮ ಸಂಸ್ಥೆ ವಿಎಫ್​ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಸಿನಿಮಾ ಆಗಿದೆ. ಕತೆಯಲ್ಲಿ ವಿಎಫ್​ಎಕ್ಸ್​ಗೆ ಮಹತ್ವದ ಪಾತ್ರ ಇರುವ ಕಾರಣದಿಂದಾಗಿ ಹೆಚ್ಚಿನ ಜಾಗೃತೆಯಿಂದ ಕೆಲಸ ನಡೆಯುತ್ತಿದೆ. ಸೆಪ್ಟೆಂಬರ್ 16ರ ಒಳಗೆ ಸಿನಿಮಾದ ಎಲ್ಲ ವಿಎಫ್​ಎಕ್ಸ್ ಕಾರ್ಯ ಪೂರ್ಣಗೊಳ್ಳಲಿದೆ, ಅದಾದ ಒಂದು ತಿಂಗಳಲ್ಲಿ ಇನ್ನೊಂದಿಷ್ಟು ಕೆಲಸಗಳು ಇರಲಿವೆ. ಸಿನಿಮಾದ ಬಿಡುಗಡೆ ತಡವಾದರೂ ಸಿನಿಮಾದ ಗುಣಮಟ್ಟ ಅತ್ಯದ್ಭುತವಾಗಿರಲಿದೆ’ ಎಂದಿದ್ದಾರೆ.

ಅದರಂತೆ ಸಿನಿಮಾದ ಬಿಡುಗಡೆ ಬಹುಷಃ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಆಗುವ ಸಾಧ್ಯತೆ ಇದೆ. ಸಿನಿಮಾನಲ್ಲಿ ಶಿವಣ್ಣ, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿದ್ದಾರೆ. ಸಿನಿಮಾದ ಹಾಡುಗಳು, ಡಬ್ಬಿಂಗ್ ಎಲ್ಲವೂ ಪೂರ್ಣಗೊಂಡಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ