AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಲ್ಲಿ ತಮಿಳು ಚಿತ್ರದಿಂದ 36 ಕೋಟಿ ರೂ. ಲಾಭ ಪಡೆದ ವಿತರಕರು ಕಾವೇರಿ ಹೋರಾಟದಲ್ಲಿ ಯಾಕಿಲ್ಲ?’: ದರ್ಶನ್​ ಪ್ರಶ್ನೆ

‘ಇತ್ತೀಚೆಗಷ್ಟೇ ಒಂದು ತಮಿಳು ಸಿನಿಮಾ ಬಿಡುಗಡೆ ಆಯಿತು. ಅದನ್ನು ಒಬ್ಬ ವಿತರಕ 6 ಕೋಟಿ ರೂಪಾಯಿಗೆ ತೆಗೆದುಕೊಂಡ. ಕರ್ನಾಟಕದಲ್ಲಿ 36ರಿಂದ 37 ಕೋಟಿ ರೂಪಾಯಿ ಲಾಭ ಮಾಡಿಕೊಂಡ. ಅದನ್ನು ಬರೀ ತಮಿಳರು ನೋಡಿದ್ರಾ? ಕಾವೇರಿ ಬಗ್ಗೆ ಆ ವಿತರಕನ ಬಳಿ ನೀವು ಯಾಕೆ ಕೇಳಲಿಲ್ಲ’ ಎಂದು ದರ್ಶನ್​ ಪ್ರಶ್ನಿಸಿದ್ದಾರೆ.

‘ಇಲ್ಲಿ ತಮಿಳು ಚಿತ್ರದಿಂದ 36 ಕೋಟಿ ರೂ. ಲಾಭ ಪಡೆದ ವಿತರಕರು ಕಾವೇರಿ ಹೋರಾಟದಲ್ಲಿ ಯಾಕಿಲ್ಲ?’: ದರ್ಶನ್​ ಪ್ರಶ್ನೆ
ದರ್ಶನ್​
ಮದನ್​ ಕುಮಾರ್​
|

Updated on: Sep 25, 2023 | 3:41 PM

Share

ಕಾವೇರಿ ನದಿ ನೀರು (Cauvery Water) ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದ್ದು, ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ಪರ ಹೋರಾಟದಲ್ಲಿ ಕನ್ನಡ ಚಿತ್ರರಂಗದ (Kannada Film Industry) ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ಆರಂಭದಲ್ಲಿ ಈ ಹೋರಾಟಕ್ಕೆ ಸ್ಯಾಂಡಲ್​ವುಡ್​ನ ಪ್ರಮುಖ ಕಲಾವಿದರು ಬಂದಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿತ್ತು. ಕೇವಲ ಕಲಾವಿದರನ್ನು ಪ್ರಶ್ನೆ ಮಾಡಲಾಗಿತ್ತು. ಕರ್ನಾಟಕದಲ್ಲಿ ತಮಿಳು ಸಿನಿಮಾಗಳ ವಿತರಣೆಯಿಂದ ಲಾಭ ಮಾಡಿಕೊಂಡ ವಿತರಕರನ್ನು ಯಾಕೆ ಪ್ರಶ್ನೆ ಮಾಡುವುದಿಲ್ಲ ಎಂದು ನಟ ದರ್ಶನ್​ (Darshan) ಕೇಳಿದ್ದಾರೆ. ಟಿ. ನರಸೀಪುರದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗಿಯಾದ ದರ್ಶನ್​ ಅವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಆ ತಮಿಳು ಸಿನಿಮಾ ಯಾವುದು? ವಿತರಕರು ಯಾರು ಎಂಬುದನ್ನು ಅವರು ಪ್ರಸ್ತಾಪಿಸಿಲ್ಲ.

‘ಮೊದಲು ವಿವಾದದ ಬಗ್ಗೆ ಮಾತಾಡೋಣ. ಬೇರೆಯವರು ಹೇಳೋದಕ್ಕಿಂತ ಮುಂಚೆ ನಾವೇ ಹೇಳಿದರೆ ಉತ್ತಮ. ಕಲಾವಿದರು ಹೋರಾಟಕ್ಕೆ ಬರಲಿಲ್ಲ ಎಂದು ಕೆಲವರು ಒಂದಷ್ಟು ದಿನಗಳಿಂದ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೇ ಒಂದು ತಮಿಳು ಸಿನಿಮಾ ಬಿಡುಗಡೆ ಆಯಿತು. ಅದನ್ನು ಒಬ್ಬ ವಿತರಕ 6 ಕೋಟಿ ರೂಪಾಯಿಗೆ ತೆಗೆದುಕೊಂಡ. ಕರ್ನಾಟಕದಲ್ಲಿ 36ರಿಂದ 37 ಕೋಟಿ ರೂಪಾಯಿ ಲಾಭ ಮಾಡಿಕೊಂಡ. ಅದನ್ನು ಬರೀ ತಮಿಳರು ನೋಡಿದ್ರಾ? ಕಾವೇರಿ ಬಗ್ಗೆ ಆ ವಿತರಕನ ಬಳಿ ನೀವು ಯಾಕೆ ಕೇಳಲಿಲ್ಲ’ ಎಂದು ದರ್ಶನ್​ ಪ್ರಶ್ನಿಸಿದ್ದಾರೆ.

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ಗೆ ಪ್ರೀತಿಯಿಂದ ತಾತ ಎಂದು ಕರೆಯುವ ದರ್ಶನ್​

‘ದರ್ಶನ್​, ಸುದೀಪ್​, ಶಿವರಾಜ್​ಕುಮಾರ್​, ಯಶ್​, ಅಭಿಷೇಕ್​ ಅಂಬರೀಷ್​ ಮಾತ್ರ ಕಾಣಿಸೋದಾ? ತಮಿಳು ಸಿನಿಮಾ ಪ್ರದರ್ಶಿಸಿ 36 ಕೋಟಿ ರೂಪಾಯಿ ಪಡೆದುಕೊಂಡ ಆ ವಿತರಕರು ಕಾಣಿಸೋದಿಲ್ವಾ? ಇವತ್ತು ನಾವು ಗುದ್ದಾಡುತ್ತಿರುವುದು ಯಾಕೆ? ಎಲ್ಲರೂ ಸುಮ್ಮನಾಗಿದ್ದೀರಿ. ನಾನು ಮಾತನಾಡಿದರೆ ಸ್ವಲ್ಪ ಹಾರ್ಶ್​ ಆಗಿರುತ್ತದೆ’ ಎಂದಿದ್ದಾರೆ ದರ್ಶನ್​. ಕನ್ನಡ ಚಿತ್ರರಂಗದ ಅನೇಕ ಕಲಾವಿದರು ಕಾವೇರಿ ನೀರಿಗಾಗಿ ಕರುನಾಡಿನ ಪರ ಧ್ವನಿ ಎತ್ತಿದ್ದಾರೆ. ಸೆ.26ರಂದು ಬೆಂಗಳೂರು ಬಂದ್​ಗೆ ಚಿತ್ರರಂಗ ಸಾಥ್​ ನೀಡುತ್ತಿದೆ.

ಕಾವೇರಿ ಬಗ್ಗೆ ದರ್ಶನ್​ ಪೋಸ್ಟ್:

‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರನ್ನು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದುಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲ ಅಂಕಿಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತೆ ಆಗಲಿ’ ಎಂದು ಸೆ.20ರಂದು ದರ್ಶನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!