AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹೇಳಿದ ಆ ಒಂದು ಮಾತಿನಿಂದ ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಯಶ್

ಯಶ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ಮಂಜುನಾಥನ ದರ್ಶನ ಪಡೆದು ಬಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ತಂದೆ ಈ ಮೊದಲು ನೀಡಿದ ಹೇಳಿಕೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಯಶ್ ಫ್ಯಾನ್ಸ್ ಇದನ್ನು ವೈರಲ್ ಮಾಡಿದ್ದಾರೆ.

ತಂದೆ ಹೇಳಿದ ಆ ಒಂದು ಮಾತಿನಿಂದ ಧರ್ಮಸ್ಥಳಕ್ಕೆ ಭೇಟಿ ಕೊಟ್ಟ ಯಶ್
ಯಶ್
ಸುರೇಶ ನಾಯಕ
| Edited By: |

Updated on: Aug 07, 2024 | 8:14 AM

Share

ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಂದ ವಿಡಿಯೋ ಹಾಗೂ ಫೋಟೋಗಳು ಎಲ್ಲಡೆ ವೈರಲ್ ಆಗುತ್ತಿವೆ. ಪತ್ನಿ ರಾಧಿಕಾ ಪಂಡಿತ್, ನಿರ್ಮಾಪಕ ವೆಂಕಟ್​ ನಾರಾಯಣ್ ಮೊದಲಾದವರು ಯಶ್​ಗೆ ಜೊತೆಯಾಗಿದ್ದಾರೆ. ಯಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಲು ಒಂದು ಪ್ರಮುಖ ಕಾರಣ ಇದೆ ಎನ್ನಲಾಗಿದೆ. ಆ ಕಾರಣ ಏನು ಎಂಬುದನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಉತ್ತರ ಇದೆ.

ಯಶ್ ಅವರು ‘ಕೆಜಿಎಫ್ 2’ ಚಿತ್ರದ ಮೂಲಕ ಯಶಸ್ಸು ಕಂಡರು. ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಈಗ ಯಶ್ ಅವರ ಸಂಪೂರ್ಣ ಗಮನ ‘ಟಾಕ್ಸಿಕ್’ ಚಿತ್ರದ ಮೇಲೆ ಇದೆ. ಈ ಸಿನಿಮಾದ ಶೂಟಿಂಗ್ ಆಗಸ್ಟ್ 8ರಂದು ಆರಂಭ ಆಗಲಿದೆ ಎಂದು ವರದಿ ಆಗಿದೆ. ಅದಕ್ಕೂ ಮೊದಲು ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಅಷ್ಟೇ ಅಲ್ಲ, ಅಲ್ಲಿ ಪ್ರಸಾದ ರೂಪದಲ್ಲಿ ನೀಡುವ ಊಟವನ್ನು ಮಾಡಿ ಬಂದಿದ್ದಾರೆ. ಸಿನಿಮಾ ಕೆಲಸಗಳು ಆರಂಭ ಆಗುವ ಸನಿಹದಲ್ಲಿ ಇರುವ ಕಾರಣದಿಂದಲೇ ಯಶ್ ಅವರು ಅಲ್ಲಿಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಯಶ್ ಅವರು ಧರ್ಮಸ್ಥಳಕ್ಕೆ ಸಾಕಷ್ಟು ಬಾರಿ ತೆರಳಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರು ತಂದೆ ನೀಡಿದ ಹೇಳಿಕೆ ಎಂದು ಹೇಳಲಾಗುತ್ತಿದೆ. ಯಶ್ ಅವರು ಈ ಮೊದಲು ನೀಡಿದ್ದ ಹೇಳಿಕೆಯನ್ನು ಯಶ್ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಯಶ್ ಅವರು ಅಂದು ಹೇಳಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

‘ನಮ್ಮ ಅಪ್ಪ ಯಾವಾಗಲೂ ಹೇಳುತ್ತಾ ಇರುತ್ತಾರೆ. ಧರ್ಮಸ್ಥಳ ಮಂಜುನಾಥನ ಬೇಡಿಕೋ ಎಲ್ಲದೂ ಆಗುತ್ತದೆ. ಆ ನಂಬಿಕೆಯಲ್ಲಿ ಬೆಳೆದು ಬಂದವರು ನಾವು. ಸಂಪೂರ್ಣ ಕರ್ನಾಟಕ ಆ ನಂಬಿಕೆಯಲ್ಲಿ ಬದುಕುತ್ತಾ ಇದೆ. ನನಗೆ ಇದ್ದಿದ್ದು ಒಂದೇ ನಂಬಿಕೆ ಎಂದರೆ ಮಂಜುನಾಥ ಸ್ವಾಮಿ ಕೈ ಬಿಡಲ್ಲ ಎಂದು’ ಎಂದು ಯಶ್ ಅವರು ಈ ಮೊದಲು ಹೇಳಿಕೊಂಡಿದ್ದರು. ಈಗ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭ ಆಗುತ್ತಿರುವುದರಿಂದ ಅವರು ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್​ ಇದನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಮುಂದಿನ ವರ್ಷ ರಿಲೀಸ್ ಆಗುವ ನಿರೀಕ್ಷೆ ಇದೆ. ಆದರೆ, ಈ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ