AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Ratna Award: ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಕುಟುಂಬ, ಫೋಟೋ ವೈರಲ್

ಪುನೀತ್ ರಾಜ್ ಕುಮಾರ್  ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರಕಾರ ಪ್ರದಾನ ಮಾಡಿದೆ. ಇನ್ನು ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದು, ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ.

Karnataka Ratna Award: ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಕುಟುಂಬ, ಫೋಟೋ ವೈರಲ್
Karnataka Ratna Award For Puneeth
TV9 Web
| Edited By: |

Updated on:Nov 01, 2022 | 7:55 PM

Share

ಅಪ್ಪು, ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ ಪುನೀತ್ ರಾಜ್​ಕುಮಾರ್​ಗೆ (Puneeth Rajkumar) ರಾಜ್ಯದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನವಾಗಿದೆ .  ಇಂದು(ನ.01) ವಿಧಾನಸಭೆ ಮುಂಬಾಗ ನಡೆದ ಸಮಾರಂಭದಲ್ಲಿ ಪುನೀತ್‌ ಪತ್ನಿ ಅಶ್ವಿನಿ ಭಾರವಾದ ಹೃದಯದಲ್ಲೇ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಿದ್ರು. ಸೂಪರ್​ ಸ್ಟಾರ್ ರಜನಿಕಾಂತ್ (Rajinikanth)​, ಹಾಗೂ ನಟ ಜೂನಿಯರ್ ಎನ್​ಟಿಆರ್​ (Jr NTR)ಮುಖ್ಯ ಅತಿಥಿಗಳಾಗಿ ಆಗಮಿಸಿ ಅಮೂಲ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು. ಇನ್ನು ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದು, ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ.

Karnataka Ratna Award 2022 ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ

ಹೌದು…9ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನವನ್ನು ಅಶ್ವನಿ ಪುನೀತ್ ರಾಜ್​ಕುಮಾರ್​ ಅವರು ವಿಧಾನಸಭೆ ಮುಂದೆ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ರು. ಬಳಿಕ ಮನೆಗೆ ಬಂದು ಅಪ್ಪು ಫೋಟೋಗೆ ಪ್ರಶಸ್ತಿಯನ್ನು ಅರ್ಪಿಸಿದರು. ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದ್ದು, ಈಗ ಈ ಚಿನ್ನದ ಪದಕವನ್ನು ಅಪ್ಪು ಫೋಟೋಗೆ ಹಾಕಿದರು.

ಅಶ್ವಿನಿ ಹಾಗು ಪುತ್ರಿ ವಂದಿತಾ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಿಡಿದು ಪುನೀತ್ ಭಾವಚಿತ್ರದ ಮುಂದೆ ನಿಂತಿದ್ದು, ಈ ಫೋಟೋ ಹಲವು ಭಾವನಾತ್ಮಕ ಭಾವನೆಗಳನ್ಜು ಹೇಳುವಂತಿವೆ. ಬಾಳಿದ್ದು ಕೆಲವೇ ವರ್ಷವಾದ್ರೂ, ಸಾಧನೆ ಮಾತ್ರ ಶಿಖರ ಮುಟ್ಟಿದೆ. ಅದೇ ಶಿಖರಕ್ಕೆ ಇವತ್ತು ಕರ್ನಾಟಕ ರತ್ನ ಪ್ರಶಸ್ತಿಯೂ ಸೇರಿಕೊಂಡಿದೆ.

ಅಪ್ಪು, ಅರಸ, ಅಭಿ ಅಂತಾ ಕರುನಾಡನ್ನೇ ಅಪ್ಪಿಕೊಂಡವರು ಪುನೀತ್‌. ಆ ವೀರಕನ್ನಡಿಗ ದೈಹಿಕವಾಗಿ ಇಲ್ಲವಾದ್ರೂ ಕನ್ನಡಿಗರ ಹೃದಯದಲ್ಲಿದ್ದಾರೆ. ಅದೇ ಹೃದಯವಂತನಿಗೆ ಇಂದು ಕರುನಾಡೇ ನಮನ ಸಲ್ಲಿಸಿದೆ. ನಟ ಪುನೀತ್‌ ರಾಜ್‌ಕುಮಾರ್‌ 2021ರ ಅಕ್ಟೋಬರ್‌ 29ರಂದು ವಿಧಿವಶರಾಗಿದ್ರು . ಪುನೀತ್‌ ಗಳಿಸಿಕೊಂಡಿದ್ದ ಪ್ರೀತಿ, ಮಾಡಿದ್ದ ಕೆಲಸ ಅಂದು ಜಗತ್ತಿಗೆ ಗೊತ್ತಾಗಿತ್ತು. ಅದೇ ಯುವರತ್ನನಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು . ರಾಜ್ಯೋತ್ಸವದ ದಿನವಾದ ಇವತ್ತು ನಾಡಿನ ಶಕ್ತಿಸೌಧದ ಮೆಟ್ಟಿಲುಗಳು ಆ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಿದ್ದವು .

Published On - 7:53 pm, Tue, 1 November 22

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್