AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Ratna Award: ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಕುಟುಂಬ, ಫೋಟೋ ವೈರಲ್

ಪುನೀತ್ ರಾಜ್ ಕುಮಾರ್  ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರಕಾರ ಪ್ರದಾನ ಮಾಡಿದೆ. ಇನ್ನು ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದು, ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ.

Karnataka Ratna Award: ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಕುಟುಂಬ, ಫೋಟೋ ವೈರಲ್
Karnataka Ratna Award For Puneeth
TV9 Web
| Edited By: |

Updated on:Nov 01, 2022 | 7:55 PM

Share

ಅಪ್ಪು, ಅಭಿ, ವೀರಕನ್ನಡಿಗನಾಗಿ ಅಭಿಮಾನಿಗಳ ಹೃಯದಲ್ಲಿ ಅಜರಾಮರಾಗಿರುವ ಪುನೀತ್ ರಾಜ್​ಕುಮಾರ್​ಗೆ (Puneeth Rajkumar) ರಾಜ್ಯದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನವಾಗಿದೆ .  ಇಂದು(ನ.01) ವಿಧಾನಸಭೆ ಮುಂಬಾಗ ನಡೆದ ಸಮಾರಂಭದಲ್ಲಿ ಪುನೀತ್‌ ಪತ್ನಿ ಅಶ್ವಿನಿ ಭಾರವಾದ ಹೃದಯದಲ್ಲೇ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಿದ್ರು. ಸೂಪರ್​ ಸ್ಟಾರ್ ರಜನಿಕಾಂತ್ (Rajinikanth)​, ಹಾಗೂ ನಟ ಜೂನಿಯರ್ ಎನ್​ಟಿಆರ್​ (Jr NTR)ಮುಖ್ಯ ಅತಿಥಿಗಳಾಗಿ ಆಗಮಿಸಿ ಅಮೂಲ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು. ಇನ್ನು ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದು, ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ.

Karnataka Ratna Award 2022 ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ

ಹೌದು…9ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನವನ್ನು ಅಶ್ವನಿ ಪುನೀತ್ ರಾಜ್​ಕುಮಾರ್​ ಅವರು ವಿಧಾನಸಭೆ ಮುಂದೆ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ರು. ಬಳಿಕ ಮನೆಗೆ ಬಂದು ಅಪ್ಪು ಫೋಟೋಗೆ ಪ್ರಶಸ್ತಿಯನ್ನು ಅರ್ಪಿಸಿದರು. ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದ್ದು, ಈಗ ಈ ಚಿನ್ನದ ಪದಕವನ್ನು ಅಪ್ಪು ಫೋಟೋಗೆ ಹಾಕಿದರು.

ಅಶ್ವಿನಿ ಹಾಗು ಪುತ್ರಿ ವಂದಿತಾ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಿಡಿದು ಪುನೀತ್ ಭಾವಚಿತ್ರದ ಮುಂದೆ ನಿಂತಿದ್ದು, ಈ ಫೋಟೋ ಹಲವು ಭಾವನಾತ್ಮಕ ಭಾವನೆಗಳನ್ಜು ಹೇಳುವಂತಿವೆ. ಬಾಳಿದ್ದು ಕೆಲವೇ ವರ್ಷವಾದ್ರೂ, ಸಾಧನೆ ಮಾತ್ರ ಶಿಖರ ಮುಟ್ಟಿದೆ. ಅದೇ ಶಿಖರಕ್ಕೆ ಇವತ್ತು ಕರ್ನಾಟಕ ರತ್ನ ಪ್ರಶಸ್ತಿಯೂ ಸೇರಿಕೊಂಡಿದೆ.

ಅಪ್ಪು, ಅರಸ, ಅಭಿ ಅಂತಾ ಕರುನಾಡನ್ನೇ ಅಪ್ಪಿಕೊಂಡವರು ಪುನೀತ್‌. ಆ ವೀರಕನ್ನಡಿಗ ದೈಹಿಕವಾಗಿ ಇಲ್ಲವಾದ್ರೂ ಕನ್ನಡಿಗರ ಹೃದಯದಲ್ಲಿದ್ದಾರೆ. ಅದೇ ಹೃದಯವಂತನಿಗೆ ಇಂದು ಕರುನಾಡೇ ನಮನ ಸಲ್ಲಿಸಿದೆ. ನಟ ಪುನೀತ್‌ ರಾಜ್‌ಕುಮಾರ್‌ 2021ರ ಅಕ್ಟೋಬರ್‌ 29ರಂದು ವಿಧಿವಶರಾಗಿದ್ರು . ಪುನೀತ್‌ ಗಳಿಸಿಕೊಂಡಿದ್ದ ಪ್ರೀತಿ, ಮಾಡಿದ್ದ ಕೆಲಸ ಅಂದು ಜಗತ್ತಿಗೆ ಗೊತ್ತಾಗಿತ್ತು. ಅದೇ ಯುವರತ್ನನಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿತ್ತು . ರಾಜ್ಯೋತ್ಸವದ ದಿನವಾದ ಇವತ್ತು ನಾಡಿನ ಶಕ್ತಿಸೌಧದ ಮೆಟ್ಟಿಲುಗಳು ಆ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಿದ್ದವು .

Published On - 7:53 pm, Tue, 1 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ