ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ವಿಕಿಪೀಡಿಯಾ ಪೇಜ್; ದರ್ಶನ್​ ಬಗ್ಗೆಯೂ ಮಾಹಿತಿ

|

Updated on: Jun 27, 2024 | 6:03 PM

ಭೀಕರವಾಗಿ ಕೊಲೆಯಾದ ರೇಣುಕಾ ಸ್ವಾಮಿ ಬಗ್ಗೆ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಈ ಕೊಲೆ ಕೇಸ್​ ಕುರಿತಂತೆ ಒಂದು ವಿಕಿಪೀಡಿಯಾ ಪುಟ ಓಪನ್​ ಆಗಿದೆ. ಇದರಲ್ಲಿ ಸಂಪೂರ್ಣ ವಿವರ ಇದೆ. ದರ್ಶನ್​ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ರೇಣುಕಾ ಸ್ವಾಮಿಯ ಕುಟುಂಬ ಮತ್ತು ಹಿನ್ನೆಲೆ ಬಗ್ಗೆ ವಿವರಗಳು ಇವೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ವಿಕಿಪೀಡಿಯಾ ಪೇಜ್; ದರ್ಶನ್​ ಬಗ್ಗೆಯೂ ಮಾಹಿತಿ
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ವಿಕಿಪೀಡಿಯಾ ಪೇಜ್
Follow us on

2024ರ ಜೂನ್​ ತಿಂಗಳಲ್ಲಿ ಅತಿ ಹೆಚ್ಚು ಚರ್ಚೆ ಆದ ಟಾಪಿಕ್​ ಎಂದರೆ ಅದು ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸ್​. ಜೂನ್​ 8ರಂದು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಬೆಳಕಿಗೆ ಬಂತು. ಅಂದಿನಿಂದ ಇಂದಿನ ತನಕ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಈ ಕೇಸ್​ ಮುಂದುವರಿಯುತ್ತಿದೆ. ಬೆಂಗಳೂರು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನಟ ದರ್ಶನ್​, ನಟಿ ಪವಿತ್ರಾ ಗೌಡ (Pavithra Gowda) ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. ಈ ಎಲ್ಲ ಘಟನೆಗಳಿಗೆ ಸಂಬಂಧಪಟ್ಟಂತೆ ಈಗ (Murder of Renukaswamy) ವಿಕಿಪೀಡಿಯಾ ಪುಟ ಓಪನ್​ ಆಗಿದೆ. ಇದರಲ್ಲಿ ಘಟನೆಯ ವಿವರಗಳನ್ನು ನೀಡಲಾಗಿದೆ.

ಪ್ರತಿ ದಿನ ನೂರಾರು ಕೊಲೆ ಪ್ರಕರಣಗಳು ವರದಿ ಆಗುತ್ತವೆ. ಆ ಎಲ್ಲ ಕೇಸ್​ಗಳಿಗೆ ವಿಕಿಪೀಡಿಯಾ ಪುಟ ಇರುವುದಿಲ್ಲ. ಆದರೆ ರೇಣುಕಾ ಸ್ವಾಮಿ ಕೊಲೆಯಲ್ಲಿ ಹೈಪ್ರೊಫೈಲ್​ ವ್ಯಕ್ತಿಗಳ ಹೆಸರು ಕೇಳಿಬಂದಿರುವ ಕಾರಣದಿಂದ ಇದು ಹೆಚ್ಚು ಸುದ್ದಿ ಆಗಿದೆ. ದರ್ಶನ್​, ಪವಿತ್ರಾ ಗೌಡ ಹಾಗೂ ಅವರ ಸಹಚರರು ಈ ಕೇಸ್​ನಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಅವರೆಲ್ಲರ ಬಗ್ಗೆ ‘Murder of Renukaswamy’ ವಿಕಿಪೀಡಿಯಾ ಪೇಜ್​ನಲ್ಲಿ ಮಾಹಿತಿ ನೀಡಲಾಗಿದೆ.

ರೇಣುಕಾ ಸ್ವಾಮಿ ಕೊಲೆ ನಡೆದ ದಿನಾಂಕ, ಮೃತದೇಹ ಪತ್ತೆ ಆದ ಸ್ಥಳ, ಆತನ ಪತ್ನಿಯ ಹೆಸರು, ಮದುವೆ ಆದ ವರ್ಷ, ತಂದೆ-ತಾಯಿ ಹೆಸರು, ಕೊಲೆಗೆ ಕಾರಣ ಸೇರಿದಂತೆ ಅನೇಕ ವಿವರಗಳನ್ನು ಕಲೆಹಾಕಿ ಈ ವಿಕಿಪೀಡಿಯಾ ಪುಟ ತೆರೆಯಲಾಗಿದೆ. ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ ನಂತರ ಏನೆಲ್ಲ ಆಯಿತು? ಕೊಲೆಗೂ ಮೊದಲು ನಡೆದ ಘಟನೆಗಳು ಏನು? ರೇಣುಕಾ ಸ್ವಾಮಿಯ ಮರಣೋತ್ತರ ಪರೀಕ್ಷೆಯಲ್ಲಿ ಇರುವ ವಿವರಗಳೇನು ಎಂಬುದನ್ನು ಈ ಪುಟದಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಸಹೋದರ, ತಾಯಿಯಿಂದ ದರ್ಶನ್ ತೂಗುದೀಪ​ ದೂರ ಇರೋದು ಯಾಕೆ? ಸತ್ಯ ತೆರೆದಿಟ್ಟ ನಿರ್ದೇಶಕ

ದರ್ಶನ್​ ಮತ್ತು ಪವಿತ್ರಾ ಗೌಡ ಅವರ ಸಂಬಂಧದದ ಬಗ್ಗೆಯೂ ಈ ವಿಕಿಪೀಡಿಯಾ ಪುಟದಲ್ಲಿ ಉಲ್ಲೇಖಿಸಿದ್ದಾರೆ. ‘ದರ್ಶನ್​ ಅವರ ಬಹುಕಾಲದ ಪಾರ್ಟ್ನರ್​ ಪವಿತ್ರಾ ಗೌಡ’ ಎಂದು ಬರೆಯಲಾಗಿದೆ. ಈ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾರೆ. ದರ್ಶನ್​ ಅವರು ಎ2 ಆಗಿದ್ದಾರೆ. ಕೊಲೆ ಆರೋಪದಲ್ಲಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿರುವ ದರ್ಶನ್​ ಪರವಾಗಿ ಪತ್ನಿ ವಿಜಯಲಕ್ಷ್ಮೀ ಹೋರಾಟ ನಡೆಸುತ್ತಿದ್ದಾರೆ. ಅಭಿಮಾನಿಗಳಿಗೆ ಈ ಪ್ರಕರಣದಿಂದ ತೀವ್ರ ಬೇಸರ ಆಗಿದೆ. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೃತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.