AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಬರುತ್ತಾರಾ ದರ್ಶನ್? ಕೊಟ್ಟಿರುವ ಸುಳಿವು ಏನು?

Darshan Thoogudeepa: ದರ್ಶನ್ ತೂಗುದೀಪ ನಟನೆಯ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ದರ್ಶನ್, ರಾಜಕೀಯಕ್ಕೆ ಎಂಟ್ರಿ ಕೊಡುವ ಇಂಗಿತವನ್ನು ‘ಡೆವಿಲ್’ ಸಿನಿಮಾ ಮೂಲಕ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ನಿಜಕ್ಕೂ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆಯೇ? ಅವರ ಸಹೋದರ ಹೇಳಿದ್ದೇನು? ಅಭಿಮಾನಿಗಳು ಹೇಳುತ್ತಿರುವುದೇನು?

ರಾಜಕೀಯಕ್ಕೆ ಬರುತ್ತಾರಾ ದರ್ಶನ್? ಕೊಟ್ಟಿರುವ ಸುಳಿವು ಏನು?
Darshan Cm
ಮಂಜುನಾಥ ಸಿ.
|

Updated on: Dec 11, 2025 | 11:22 AM

Share

ಮುಂದಿನ ಸಿಎಂ ಯಾರು? ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಚಾಲ್ತಿಯಲ್ಲಿದೆ. ಸಿಎಂ ಸಿದ್ದರಾಮಯ್ಯ, ಕುರ್ಚಿಗೆ ಭದ್ರವಾಗಿ ಅಂಟಿಕೊಂಡಿದ್ದಾರೆ. ಇನ್ನು ಡಿಕೆ ಶಿವಕುಮಾರ್, ಕುರ್ಚಿ ತಮಗೆ ಬೇಕೆಂದು ಸತತ ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದರ ನಡುವೆ ಈಗ ‘ದರ್ಶನ್ ಮುಂದಿನ ಸಿಎಂ’ ಎಂದು ಅಭಿಮಾನಿಗಳು ಹೊಸ ಆರ್ಭಟ ಎಬ್ಬಿಸಿದ್ದಾರೆ. ಇದಕ್ಕೆ ಕಾರಣ ‘ಡೆವಿಲ್’ (Devil) ಸಿನಿಮಾ. ಇಂದು (ಡಿಸೆಂಬರ್ 11) ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ದರ್ಶನ್ ಜೈಲಿನಲ್ಲಿರುವಾಗ ಬಿಡುಗಡೆ ಆಗುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ದರ್ಶನ್ ಅವರು, ತಾವು ರಾಜಕೀಯಕ್ಕೆ ಬರುವ ಸುಳಿವನ್ನು ನೀಡಿದ್ದಾರೆ. ಇದು ಅಭಿಮಾನಿಗಳ ಉತ್ಸಾಹಕ್ಕೆ ಕಾರಣವಾಗಿದೆ.

‘ಡೆವಿಲ್’ ಸಿನಿಮಾನಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕತೆ ಇದೆ. ‘ಡೆವಿಲ್’ ಸಿನಿಮಾನಲ್ಲಿ ದರ್ಶನ್ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರೆಂಬುದು ಗುಟ್ಟೇನೂ ಅಲ್ಲ. ಆದರೆ ಸಿನಿಮಾನಲ್ಲಿ ಅವರು ರಾಜಕಾರಣಿಯಾಗಿಯೂ ಕಾಣಿಸಿಕೊಂಡಿದ್ದಾರೆ. ಚುನಾವಣೆಗೆ ಸ್ಪರ್ಧಿಸಿ ಕರ್ನಾಟಕದ ಸಿಎಂ ಸಹ ಆಗಿಬಿಟ್ಟಿದ್ದಾರೆ. ಸಿನಿಮಾ ಮೂಲಕ ಮನದಾಸೆಯನ್ನು ದರ್ಶನ್, ಅಭಿಮಾನಿಗಳ ಹಾಗೂ ರಾಜ್ಯದ ಜನರ ಮುಂದಿಟ್ಟಿದ್ದಾರೆ ಎಂಬ ಅನುಮಾನ ಮೂಡಿದೆ.

ತಮಿಳುನಾಡಿನಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಟ ವಿಜಯ್ ಅವರ ಹೆಜ್ಜೆಯನ್ನೇ ದರ್ಶನ್ ಅನುಸರಿಸಿದ್ದಾರೆ. ವಿಜಯ್ ಸಹ ರಾಜಕೀಯಕ್ಕೆ ಎಂಟ್ರಿ ನೀಡುವ ಮೊದಲು ರಾಜಕೀಯ ವಿಷಯಗಳುಳ್ಳ ಸಿನಿಮಾಗಳಲ್ಲಿ ನಟಿಸಿದ್ದರು. ‘ಮರ್ಸೆಲ್’ ಇನ್ನಿತರೆ ಕೆಲವು ಸಿನಿಮಾಗಳಲ್ಲಿ ರಾಜಕೀಯ ಭಾಷಣಗಳನ್ನು ಸೇರಿಸಿದ್ದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಟೀಕೆ ಮಾಡಿದ್ದರು. ತಮ್ಮ ರಾಜಕೀಯ ಅಜೆಂಡಾವನ್ನು ಸಿನಿಮಾಗಳಲ್ಲಿ ಸೇರಿಸಿದ್ದರು. ಆ ಮೂಲಕ ತಮ್ಮ ರಾಜಕೀಯ ಪ್ರವೇಶದ ಇಂಗಿತವನ್ನು ವ್ಯಕ್ತಪಡಿಸಿ ಬಳಿಕ ಒಮ್ಮೆಲೆ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ದರ್ಶನ್ ಸಹ ಅದೇ ಹಾದಿಯಲ್ಲಿ ಇದ್ದಂತೆ ತೋರುತ್ತಿದೆ.

ಇದನ್ನೂ ಓದಿ:ಮುಂದಿನ ಸಿಎಂ ನಮ್ಮ ಬಾಸ್: ದರ್ಶನ್ ಅಭಿಮಾನಿಗಳ ಆರ್ಭಟ

‘ಡೆವಿಲ್’ ಸಿನಿಮಾನಲ್ಲಿ ದರ್ಶನ್ ಪಾತ್ರ ಸಿಎಂ ಆಗಿರುವ ಬಗ್ಗೆ, ಅದರ ಹಿಂದಿನ ಅರ್ಥದ ಬಗ್ಗೆ ಟಿವಿ9 ಕೇಳಿದ ಪ್ರಶ್ನೆಗೆ ಉತ್ತರಿಸಿರುವ ದರ್ಶನ್ ಅವರ ಸಹೋದರ ದಿನಕರ್, ದರ್ಶನ್ ರಾಜಕೀಯಕ್ಕೆ ಬರಬಹುದು ಎಂಬರ್ಥದ ಉತ್ತರವನ್ನೇ ಪರೋಕ್ಷವಾಗಿ ನೀಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ದಿನಕರ್ ತೂಗುದೀಪ, ‘ಅಭಿಮಾನಿಗಳು ಕೇಳಿದರೆ ಖಂಡಿತ ದರ್ಶನ್ ರಾಜಕೀಯಕ್ಕೆ ಬರುತ್ತಾರೆ’ ಎಂದಿದ್ದಾರೆ. ದರ್ಶನ್ ರಾಜಕೀಯಕ್ಕೆ ಬರುವುದು ಬೇಡ ಎಂದು ಅತ್ಯುತ್ಸಾಹಿ ಅಭಿಮಾನಿ ದಂಡು ಹೇಳುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ.

ದರ್ಶನ್ ಪ್ರಸ್ತುತ ಜೈಲಿನಲ್ಲಿದ್ದಾರೆ. ಅವರು ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿರುವುದು ಕೊಲೆ ಮತ್ತು ಅಪಹರಣ ಪ್ರಕರಣದಲ್ಲಿ ಇಂಥಹಾ ಗುರುತರ ಆರೋಪದ ಮೇಲೆ. ಇಂಥಹಾ ಗಂಭೀರ ಆರೋಪವುಳ್ಳ ವ್ಯಕ್ತಿ ರಾಜಕೀಯಕ್ಕೆ ಬಂದರೆ ಜನ ಅವರಿಗೆ ಮತ ನೀಡುತ್ತಾರೆಯೇ, ಕೇವಲ ಸ್ಟಾರ್ ಎಂಬ ಕಾರಣಕ್ಕೆ ಜನ ಓಟು ಹಾಕುತ್ತಾರೆಯೇ? ಕರ್ನಾಟಕದಲ್ಲಿ ಕೇವಲ ಜನಪ್ರಿಯತೆ ಆಧಾರದಲ್ಲಿ ಚುನಾವಣೆ ಗೆದ್ದ ನಟ-ನಟಿಯರು ವಿರಳದಲ್ಲಿ ವಿರಳ. ಹಿಂದಿನ ಕೆಲ ವಿಧಾನಸಭೆ ಚುನಾವಣೆಯಲ್ಲಿ ಸ್ವತಃ ದರ್ಶನ್ ಪ್ರಚಾರ ಮಾಡಿದ ಕೆಲವರು ಸೋತ ಉದಾಹರಣೆಯೂ ಇದೆ. ದರ್ಶನ್​​ಗೆ ದೊಡ್ಡ ಅಭಿಮಾನಿ ವರ್ಗ ಇದೆ. ಆದರೆ ಅದೆಲ್ಲ ಓಟಾಗಿ ಪರಿವರ್ತನೆ ಆಗುತ್ತದೆಯೇ? ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!