Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೇ ಜೈಲಿನಿಂದ ಬಿಡುಗಡೆ ಆಗುತ್ತಾರೆಯೇ ದರ್ಶನ್, ಹೇಗೆ ನಡೆಯಲಿದೆ ಪ್ರಕ್ರಿಯೆ?

Darshan Thoogudeepa Bail: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ತೂಗುದೀಪಗೆ ಜಾಮೀನು ದೊರೆತಿದೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಇಂದೇ (ಅಕ್ಟೋಬರ್ 30) ಜೈಲಿನಿಂದ ಬಿಡುಗಡೆ ಹೊಂದುತ್ತಾರೆಯೇ? ಬಿಡುಗಡೆ ಪ್ರಕ್ರಿಯೆ ಹೇಗಿರಲಿದೆ? ಇಲ್ಲಿದೆ ಮಾಹಿತಿ.

ಇಂದೇ ಜೈಲಿನಿಂದ ಬಿಡುಗಡೆ ಆಗುತ್ತಾರೆಯೇ ದರ್ಶನ್, ಹೇಗೆ ನಡೆಯಲಿದೆ ಪ್ರಕ್ರಿಯೆ?
ದರ್ಶನ್
Follow us
ಮಂಜುನಾಥ ಸಿ.
|

Updated on: Oct 30, 2024 | 11:23 AM

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ಗೆ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ರಾಜ್ಯ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಳಿಗ್ಗೆ 10:45ರ ವೇಳೆಗೆ ನ್ಯಾಯಮೂರ್ತಿಗಳು ಆದೇಶ ಪ್ರಕಟಿಸಿದ್ದಾರೆ. ಕೆಲವು ಷರತ್ತುಗಳನ್ನು ಸಹ ವಿಧಿಸಲಾಗಿದ್ದು, ಜಾಮೀನು ಅವಧಿ ಆರು ವಾರಗಳ ಕಾಲ ಮಾತ್ರವೇ ಇರಲಿದೆ. ಇನ್ನು ದರ್ಶನ್ ಇಂದೇ ಜೈಲಿನಿಂದ ಬಿಡುಗಡೆ ಆಗುತ್ತಾರೆಯೇ ಎಂಬ ಅನುಮಾನ ಮೂಡಿದೆ. ಜಾಮೀನು ಸಿಕ್ಕ ನಂತರದ ಪ್ರಕ್ರಿಯೆ ಹೇಗಿರಲಿದೆ? ಇಲ್ಲಿದೆ ಮಾಹಿತಿ.

ಸಾಮಾನ್ಯ ವ್ಯಕ್ತಿಗಳ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜೈಲಿನಿಂದ ಬಿಡುಗಡೆ ಆಗಲು ಕೆಲ ದಿನಗಳ ಸಮಯ ಬೇಕಾಗುತ್ತದೆ. ಜಾಮೀನು ಆದೇಶದ ಪ್ರತಿಯನ್ನು ನ್ಯಾಯಾಲಯವು ಸಂಬಂಧಪಟ್ಟ ಜೈಲಿಗೆ ಕಳಿಸಬೇಕಾಗುತ್ತದೆ. ಅದಕ್ಕೆ ಮುನ್ನ ಜಾಮೀನುದಾರರು ಷರತ್ತುಗಳನ್ನು ಪೂರೈಸಬೇಕಿರುತ್ತದೆ. ಇದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲಿಗೆ ಜಾಮೀನು ದೊರೆತ ಮೂವರು ಆರೋಪಿಗಳು ಜಾಮೀನು ದೊರೆತ ವಾರಗಳ ಬಳಿಕ ಜೈಲಿನಿಂದ ಬಿಡುಗಡೆ ಆಗಿದ್ದರು.

ಆದರೆ ದರ್ಶನ್ ಪ್ರಕರಣದಲ್ಲಿ ಹೀಗಾಗುವುದಿಲ್ಲ. ದರ್ಶನ್​ ಬಹುತೇಕ ಇಂದೇ ಅಂದರೆ ಅಕ್ಟೋಬರ್ 30ರಂದೇ ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೆ. ನ್ಯಾಯಾಲಯದ ಆದೇಶ ಪ್ರತಿಯನ್ನು ಬೈ ಹ್ಯಾಂಡ್ ಬಳ್ಳಾರಿ ಜೈಲಿಗೆ ತಲುಪಿಸಲಾಗುತ್ತದೆ. ಆದೇಶ ಹೊರಬಿದ್ದ ಬಳಿಕ ಆದೇಶ ಪ್ರತಿಯನ್ನು ಪ್ರಿಂಟ್ ಹಾಕಿಸಿಕೊಂಡು ದರ್ಶನ್ ಪರವಾದವರು ಆದೇಶ ಪ್ರತಿಯನ್ನು ಬಳ್ಳಾರಿ ಜೈಲಿಗೆ ಹೋಗಿ ತಲುಪಿಸುತ್ತಾರೆ. ಆದೇಶ ಪ್ರತಿ ತೆಗೆದುಕೊಳ್ಳುವ ಜೈಲು ಸಿಬ್ಬಂದಿ ಅದನ್ನು ಪರಿಶೀಲಿಸಿ ದರ್ಶನ್​ ಅನ್ನು ಬಿಡುಗಡೆಗೊಳಿಸಲಿದ್ದಾರೆ.

ಇದನ್ನೂ ಓದಿ:ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

ಬೆಂಗಳೂರಿನಿಂದ ಬಳ್ಳಾರಿ ತುಸು ದೂರವೇ ಇದೆಯಾದರೂ ಸಹ ಸಂಜೆ ವೇಳೆಗೆ ದರ್ಶನ್​ರ ಜಾಮೀನು ಪ್ರತಿ ಬಳ್ಳಾರಿ ಜೈಲು ತಲುಪಲಿದೆ. ಜಾಮೀನು ಆದೇಶ ದೊರೆತಾಗ ಬಿಡುಗಡೆ ಮಾಡಬೇಕು ಎಂಬ ನಿಯಮ ಇರುವ ಕಾರಣ, ತಡವಾದರೂ ಸಹ ಬಿಡುಗಡೆ ಮಾಡಲಿದ್ದಾರೆ. ಬಿಗ್​ಬಾಸ್ ಮನೆಯಿಂದ ಬಂಧನಕ್ಕೆ ಒಳಗಾಗಿದ್ದ ವರ್ತೂರು ಸಂತೋಷ್ 14 ದಿನಗಳ ಬಳಿಕ ರಾತ್ರಿ 9 ಗಂಟೆ ಸುಮಾರಿಗೆ ಜೈಲಿನಿಂದ ಬಿಡುಗಡೆ ಆಗಿದ್ದನ್ನು ಇಲ್ಲಿ ನೆನೆಯಬಹುದು.

ಒಟ್ಟಾರೆ ದರ್ಶನ್​ರ 131 ದಿನಗಳ ಜೈಲು ವಾಸ ಇಂದಿಗೆ ಮುಕ್ತಾಯ ಆಗಲಿದೆ. ಆರು ವಾರಗಳ ಕಾಲ ಅವರು ಜೈಲಿನಿಂದ ಹೊರಗೆ ಇರಲಿದ್ದಾರೆ. ಆರು ವಾರ ಆದ ಬಳಿಕ ಮತ್ತೆ ಜೈಲು ಸೇರುವ ಸಾಧ್ಯತೆ ಇದೆ. ಒಂದೊಮ್ಮೆ ಆರು ವಾರಗಳಲ್ಲಿ ಚಿಕಿತ್ಸೆ ಪೂರ್ಣವಾಗದೇ ಇದ್ದರೆ ಜಾಮೀನು ಅವಧಿ ವಿಸ್ತರಣೆಗೊಳ್ಳುವ ಸಾಧ್ಯತೆಯೂ ಸಹ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್