AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಪ್ರಚಾರಕ್ಕೆ ಬರ್ತಾರಾ ಸುದೀಪ್: ಅವರೇ ಕೊಟ್ಟರು ಉತ್ತರ

Kichcha Sudeep: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದ ಸುದೀಪ್, ಲೋಕಸಭೆ ಚುನಾವಣೆಯಲ್ಲಿ ಯಾರ ಪರ ಪ್ರಚಾರ ಮಾಡಲಿದ್ದಾರೆ? ಅವರೇ ಉತ್ತರ ನೀಡಿದ್ದಾರೆ.

ಈ ಬಾರಿ ಪ್ರಚಾರಕ್ಕೆ ಬರ್ತಾರಾ ಸುದೀಪ್: ಅವರೇ ಕೊಟ್ಟರು ಉತ್ತರ
ಮಂಜುನಾಥ ಸಿ.
|

Updated on: Mar 23, 2024 | 2:42 PM

Share

ಕಿಚ್ಚ ಸುದೀಪ್ (Kichcha Sudeep) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಬ್ಬರದ ಪ್ರಚಾರ ಮಾಡಿದ್ದರು. ಸುದೀಪ್, ಬಿಜೆಪಿ ಪರವಾಗಿ ಅಖಾಡಕ್ಕೆ ಇಳಿದಿದ್ದು ರಾಷ್ಟ್ರೀಯ ಸುದ್ದಿಯಾಗಿತ್ತು. ಆದರೆ ಆಡಳಿತ ವಿರೋಧಿ ಅಲೆ ಎದುರಿಸಿದ್ದ ಬಿಜೆಪಿಗೆ ಕಿಚ್ಚ ಸುದೀಪ್ ಪ್ರಚಾರ ಹೆಚ್ಚಿನ ಸಹಾಯ ಮಾಡಲಿಲ್ಲ. ಇದೀಗ ಲೋಕಸಭೆ ಚುನಾವಣೆ ಬಂದಿದ್ದು, ಈ ಬಾರಿ ಸುದೀಪ್ ಯಾವ ಅಭ್ಯರ್ಥಿ ಪರ ಅಥವಾ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ಮಾಡಲಿದ್ದಾರೆ ಎಂಬ ಕುತೂಹಲ ಇದೆ. ಕ್ರಿಕೆಟ್ ಟೀಂ ಮೇಟ್, ನಟ, ಕಿರಿಯ ಮಿತ್ರ ಚಂದನ್​ರ ಹೊಸ ಹೋಟೆಲ್ ಉದ್ಘಾಟನೆಗೆ ಆಗಮಿಸಿದ್ದ ಸುದೀಪ್, ಈ ಬಗ್ಗೆ ಮಾತನಾಡಿದ್ದಾರೆ.

‘ಕಳೆದ ಬಾರಿ ಯಾರಿಗಾಗಿ, ಯಾವ ಕಾರಣಕ್ಕಾಗಿ ಪ್ರಚಾರಕ್ಕೆ ಹೋಗಿದ್ದೆ ಎಂಬುದನ್ನು ನಾನು ಸ್ಪಷ್ಟಪಡಿಸಿದ್ದೆ. ಈ ಬಾರಿ ಇನ್ನೂ ಸಹ ಯಾರೂ ನನ್ನನ್ನು ಪ್ರಚಾರಕ್ಕಾಗಿ ಕೇಳಿಲ್ಲ. ಕೇಳಿದಾಗ ಆ ಬಗ್ಗೆ ನಿರ್ಣಯ ಮಾಡುತ್ತೇನೆ’ ಎಂದಿದ್ದಾರೆ. ಮುಂದುವರೆದು, ‘ಸಿನಿಮಾ ಬಿಟ್ಟು ಕ್ರಿಕೆಟ್​ನಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಈಗಾಗಲೇ ಅಭಿಮಾನಿಗಳು, ಗೆಳೆಯರು ಗಲಾಟೆ ಮಾಡುತ್ತಿದ್ದಾರೆ. ಇಂಥಹಾ ಹೊತ್ತಿನಲ್ಲಿ. ಶೂಟಿಂಗ್ ಬಿಟ್ಟು ರಾಜಕೀಯ ಪ್ರಚಾರಕ್ಕೆ ಹೋದರೆ ಇನ್ನಷ್ಟು ಗಲಾಟೆಗಳಾಗುತ್ತವೆಯೋ ಏನೋ’ ಎಂದು ತಮಾಷೆ ಮಾಡಿದರು.

ಸುದೀಪ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ? ಎಂಬ ಪ್ರಶ್ನೆಗೆ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ ಸುದೀಪ್, ‘ನೋಡಿ ಈಗ ನಾನು ಹೋಟೆಲ್​ ಉದ್ಘಾಟನೆಗೆ ಬರಲ್ಲ ಅಂದುಕೊಂಡಿದ್ದರು ಆದರೆ ಬಂದಿದ್ದೇನೆ. ಹಾಗೆಯೇ ರಾಜಕೀಯದ್ದು ಏನಾಗುತ್ತದೆಯೋ ನೋಡೋಣ. ಎಲ್ಲರೂ ಬರೊಲ್ಲ ಅಂದುಕೊಂಡಿದ್ದಾರೆ, ಬಂದಾಗ ಗೊತ್ತಾಗುತ್ತದೆ. ಒಂದೊಮ್ಮೆ ಬರಲಿಲ್ಲ ಎಂದರೆ ಬರಲಿಲ್ಲ ಅಷ್ಟೆ’ ಎಂದರು ಸುದೀಪ್.

ಇದನ್ನೂ ಓದಿ:‘ಕೆರೆ ಬೇಟೆ’ ಚಿತ್ರತಂಡಕ್ಕೆ ಕ್ಷಮೆ ಕೇಳಿದ ಕಿಚ್ಚ ಸುದೀಪ್

ಹೋಟೆಲ್​ ಕುರಿತು ಮಾತನಾಡಿದ ಸುದೀಪ್, ‘ನಮ್ಮ ತಂದೆಯವರು ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಅವರಿಗೆ ಆ ಬಗ್ಗೆ ಬಹಳ ಆಸಕ್ತಿಯಿತ್ತು, ಜವಾಬ್ದಾರಿಯಿಂದ ಆ ಕೆಲಸ ಮಾಡುತ್ತಿದ್ದರು. ನನ್ನ ಗೆಳೆಯರು ಕೆಲವರು ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದರು. ‘ನೀವು ಯಾವಾಗ ಹೋಟೆಲ್ ಆರಂಭಿಸುತ್ತೀರಿ?’ ಎಂಬ ಪ್ರಶ್ನೆಗೆ, ‘ನಮ್ಮ ತಂದೆಯವರು ಬಹಳ ಚೆನ್ನಾಗಿ ಆ ಉದ್ಯಮ ಮಾಡಿದ್ದರು. ಆ ಉದ್ಯಮವನ್ನು ಮುಂದುವರೆಸಲು ಅದಕ್ಕೆ ಒಂದು ಅರ್ಹತೆ, ಯೋಗ್ಯತೆ ಬೇಕು. ನಮ್ಮ ತಂದೆಯವರು ಹೋಟೆಲ್ ಉದ್ಯಮ ಮಾಡಿ ಹೊಟ್ಟೆ ತುಂಬ ಊಟ ಹಾಕಿದರು. ಆ ಕೆಲಸವನ್ನು ನಾನು ಮನೆಯಲ್ಲಿದ್ದುಕೊಂಡು ಮಾಡುತ್ತಿದ್ದೇನೆ’ ಎಂದರು.

ಚಂದನ್ ಬಗ್ಗೆ ಮಾತನಾಡಿ, ‘ಚಂದನ್ ನಮ್ಮ ಕುಟುಂಬದ ಸದಸ್ಯ ಇದ್ದಂತೆ, ಅವರಿಗೆ ಈ ಉದ್ಯಮದ ಬಗ್ಗೆ ಅತೀವ ಆಸಕ್ತಿ ಇದೆ. ಚಂದನ್ ಚೆನ್ನಾಗಿ ಸಹ ಮಾಡುತ್ತಾರೆ. ಚೆನ್ನಾಗಿ ಬ್ಯುಸಿನೆಸ್ ಮಾಡುತ್ತಿದ್ದಾರೆ. ಅವರ ಹೋಟೆಲ್​ಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ’ ಎಂದು ಹಾರೈಸಿದರು. ಚಂದನ್​ರ ಕೆಲವು ಚಿತ್ರರಂಗದ ಗೆಳೆಯರು, ಕಿರುತೆರೆ ಗೆಳೆಯರು ಹೋಟೆಲ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಚಂದನ್ ಈಗಾಗಲೇ ಕೆಲವು ಹೋಟೆಲ್​ಗಳನ್ನು ತೆರೆದಿದ್ದಾರೆ. ಇದೀಗ ಹೊಸ ಹೋಟೆಲ್ ಅನ್ನು ಚಂದನ್ ಪ್ರಾರಂಭಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ