AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್​ ಜೊತೆ ನಟಿಸ್ತಾರಾ ನಯನತಾರಾ?

‘ಟಾಕ್ಸಿಕ್​’ ಸಿನಿಮಾಗೆ ಸಂಬಂಧಿಸಿದಂತೆ ಇಷ್ಟು ದಿನ ನಟಿ ಕರೀನಾ ಕಪೂರ್ ಖಾನ್​ ಹೆಸರು ಕೇಳಿಬರುತ್ತಿತ್ತು. ಆದರೆ ಈಗ ನಯನತಾರಾ ಬಗ್ಗೆ ಹೊಸ ಗಾಸಿಪ್​ ಹಬ್ಬಿದೆ. ‘ಟಾಕ್ಸಿಕ್​’ ಚಿತ್ರದಲ್ಲಿ ಯಶ್​ ಜೊತೆ ನಟಿಸಲು ನಯನತಾರಾ ಆಸಕ್ತಿ ತೋರಿಸಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದೆ. ಆದರೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್​ ಜೊತೆ ನಟಿಸ್ತಾರಾ ನಯನತಾರಾ?
ಯಶ್​, ನಯನತಾರಾ
Follow us
ಮದನ್​ ಕುಮಾರ್​
|

Updated on: May 06, 2024 | 9:42 PM

ಬಹುನಿರೀಕ್ಷಿತ ‘ಟಾಕ್ಸಿಕ್​’ (Toxic) ಸಿನಿಮಾದ ಬಗ್ಗೆ ಕೇಳಿಬರುತ್ತಿರುವ ಅಂತೆ-ಕಂತೆಗಳು ಒಂದೆರಡಲ್ಲ. ನಟ ಯಶ್​ ಅವರು ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ. ಯಶ್​ (Yash) ಜೊತೆ ಬೇರೆ ಯಾರೆಲ್ಲ ನಟಿಸುತ್ತಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಆದರೂ ಕೂಡ ಕೆಲವು ನಟಿಯರ ಹೆಸರಗಳು ಪದೇ ಪದೇ ಕೇಳಿಬರುತ್ತಿವೆ. ಇಷ್ಟು ದಿನ ಕರೀನಾ ಕಪೂರ್​ ಖಾನ್​ ಬಗ್ಗೆ ಸುದ್ದಿ ಆಗುತ್ತಿತ್ತು. ಈಗ ನಯನತಾರಾ (Nayanthara) ಬಗ್ಗೆ ಗುಸುಗುಸು ಕೇಳಿಬರಲು ಆರಂಭಿಸಿದೆ. ಈ ಕುರಿತು ಇಲ್ಲಿದೆ ಮಾಹಿತಿ..

ಮಲಯಾಳಂ ನಟಿ ಗೀತು ಮೋಹನ್​ದಾಸ್​ ಅವರು ‘ಟಾಕ್ಸಿಕ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರ ಜೊತೆ ಯಶ್​ ಕೈ ಜೋಡಿಸಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ಸಿನಿಮಾದಲ್ಲಿ ಕಥಾನಾಯಕನ ಸಹೋದರಿ ಪಾತ್ರ ಕೂಡ ತುಂಬ ಪ್ರಮುಖವಾಗಿ ಇರಲಿದ್ದು, ಆ ಪಾತ್ರಕ್ಕೆ ನಟಿಯ ಆಯ್ಕೆ ಪ್ರಕ್ರಿಯೆ ಜಾಲ್ತಿಯಲ್ಲಿದೆ. ನಯನತಾರಾ ಅವರಿಗೆ ಆಫರ್​ ನೀಡಲಾಗಿದೆ ಎಂಬ ಗಾಸಿಪ್​ ಹಬ್ಬಿದೆ.

ಕರೀನಾ ಕಪೂರ್​ ಅವರಿಗೆ ‘ಟಾಕ್ಸಿಕ್​’ ಸಿನಿಮಾದಲ್ಲಿ ನಟಿಸುವ ಆಸಕ್ತಿ ಇತ್ತು. ಆದರೆ ಡೇಟ್ಸ್​ ಸಮಸ್ಯೆಯಿಂದ ಅವರು ಈ ಚಿತ್ರದ ಭಾಗವಾಗಲು ಸಾಧ್ಯವಾಗಿಲ್ಲವಂತೆ. ಹಾಗಾಗಿ ಅವರು ಚಿತ್ರತಂಡದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಕರೀನಾ ಕಪೂರ್​ ಅವರ ಬದಲಿಗೆ ಈಗ ನಯನತಾರಾ ಅವರಿಗೆ ಮಣೆ ಹಾಕಲಾಗುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದ ನಾಯಕಿಯರ ಬಗ್ಗೆ ಮುಂದುವರಿದಿದೆ ಗೊಂದಲ

‘ಕೆವಿಎನ್ ಪ್ರೊಡಕ್ಷನ್ಸ್​’ ಮೂಲಕ ‘ಟಾಕ್ಸಿಕ್​’ ಸಿನಿಮಾ ನಿರ್ಮಾಣ ಆಗುತ್ತಿದೆ. ‘ಕೆಜಿಎಫ್​ 2’ ಬಳಿಕ ಯಶ್​ ಒಪ್ಪಿಕೊಂಡ ಸಿನಿಮಾ ಆದ್ದರಿಂದ ಜನರ ನಿರೀಕ್ಷೆ ಜೋರಾಗಿದೆ. ಸಾಕಷ್ಟು ಸಮಯ ತೆಗೆದುಕೊಂಡು ಈ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ. ಈವರೆಗೂ ಬಂದಿರುವುದು ಟೈಟಲ್​ ಟೀಸರ್​ ಮಾತ್ರ. ಹಾಗಿದ್ದರೂ ಕೂಡ ಪ್ರತಿ ದಿನ ಈ ಸಿನಿಮಾ ಬಗ್ಗೆ ಒಂದಲ್ಲಾ ಒಂದು ಸುದ್ದಿ ಕೇಳಿಬರುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್