AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಶ್ ಮದುವೆಗೆ ಬರ್ತಾರಾ ಪ್ರಧಾನಿ ಮೋದಿ?

Abishek-Aviva Marriage: ಅಂಬರಿಶ್ ಪುತ್ರ ಅಭಿಷೇಕ್ ಅಂಬರಿಶ್ ಹಾಗೂ ಅವಿವಾ ಬಿಡಪ ವಿವಾಹ ಕೆಲವೇ ದಿನಗಳಲ್ಲಿ ನಡೆಯಲಿದ್ದು ಆಹ್ವಾನ ಪತ್ರಿಕೆಯನ್ನು ನರೇಂದ್ರ ಮೋದಿಯವರಿಗೆ ನೀಡಲಾಗಿದೆ. ಪ್ರಧಾನಿಗಳು ಮದುವೆಗೆ ಬರುತ್ತಾರೆಯೇ?

ಅಭಿಷೇಕ್ ಅಂಬರೀಶ್ ಮದುವೆಗೆ ಬರ್ತಾರಾ ಪ್ರಧಾನಿ ಮೋದಿ?
ಅಭಿ-ಅವಿವಾ
ಮಂಜುನಾಥ ಸಿ.
|

Updated on:May 29, 2023 | 6:12 PM

Share

ಸ್ಯಾಂಡಲ್​ವುಡ್ (Sandalwood) ಮತ್ತೊಂದು ಅದ್ಧೂರಿ ಮದುವೆಗೆ ತಯಾರಾಗುತ್ತಿದೆ. ಅಂಬರೀಶ್ (Ambareesh) ಪುತ್ರ ಅಭಿಷೇಕ್ ಅಂಬರೀಶ್ (Abhishek Ambareesh), ಅವಿವಾ ಬಿಡಪ (Aviva Bidappa) ಜೊತೆ ವಿವಾಹ ನಿಶ್ಚಯವಾಗಿದ್ದು, ಸಿನಿಮಾ ಸೆಲೆಬ್ರಿಟಿಗಳು ಹಾಗೂ ಕೇಂದ್ರ ಹಾಗೂ ರಾಜ್ಯದ ಪ್ರಮುಖ ರಾಜಕಾರಣಿಗಳಿಗೆ ವಿವಾಹ ಆಮಂತ್ರಣ ಪತ್ರಿಕೆ ವಿತರಣೆ ಮಾಡಲಾಗಿದೆ. ಸಂಸದೆಯಾಗಿರುವ ಸುಮಲತಾ ಅಂಬರೀಶ್, ಇತ್ತೀಚೆಗಷ್ಟೆ ಬಿಜೆಪಿಗೆ ಬೆಂಬಲ ಘೋಷಿಸಿರುವ ಸುಮಲತಾ, ಮಗನ ಮದುವೆಗೆ ಬಿಜೆಪಿ ಪ್ರಮುಖರಾದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಇನ್ನು ಹಲವರನ್ನು ಆಹ್ವಾನಿಸಿದ್ದಾರೆ.

ಇಂದು (ಮೇ 29) ಅಂಬರಿಶ್ ಜನ್ಮದಿನವಾಗಿದ್ದು ಅಭಿಷೇಕ್ ಅಂಬರಿಶ್ ಹಾಗೂ ಸುಮಲತಾ ಅವರು ಅಂಬಿ ಸಮಾಧಿಗೆ ಭೇಟಿ ನೀಡಿ ಪೂಜೆ ಮಾಡಿದರು. ಅಭಿಮಾನಿಗಳೊಟ್ಟಿಗೆ ಕೇಕ್ ಕತ್ತರಿಸಿ ಖುಷಿ ಪಟ್ಟರು. ಈ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸುಮಲತಾ ಹಾಗೂ ಅಭಿಷೇಕ್ ಅಂಬರೀಶ್ ಮದುವೆಗೆ ಪ್ರಧಾನಿ ಮೋದಿಯವರು ಬರುತ್ತಾರಾ ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

”ದೇಶದ ಪ್ರಧಾನಿಗಳಾಗಿದ್ದರೂ ಸಹ ನಮಗೆ ಅವರು ಸಮಯಕೊಟ್ಟರು. ಐದು ನಿಮಿಷಗಳ ಕಾಲ ನಮ್ಮೊಟ್ಟಿಗೆ ಮಾತನಾಡಿದರು. ಹಲವು ವಿಚಾರ ವಿನಿಮಯ ಮಾಡಿದರು. ಮದುವೆ ಆಹ್ವಾನ ಪತ್ರಿಕೆ ನೀಡಿದಾಗ, ಮದುವೆಗೆ ಬರಲು ಪ್ರಯತ್ನ ಮಾಡುತ್ತೇನೆ ಎಂದು ಹಿಂದಿಯಲ್ಲಿ ಹೇಳಿದರು. ಅವರನ್ನು ಭೇಟಿಯಾದ ಎರಡೇ ನಿಮಿಷದಲ್ಲಿ ಗೊತ್ತಾಯಿತು, ಅವರ ಕನ್ನಡ ಹೇಗೋ ನನ್ನ ಹಿಂದಿ ಹಾಗೆಯೇ ಇದೆ ಎಂದು. ಆದರೂ ಹೇಗೋ ಅಡ್ಜಸ್ಟ್ ಮಾಡಿಕೊಂಡು ಪರಸ್ಪರ ಮಾತನಾಡಿದೆವು” ಎಂದರು ಅಭಿಷೇಕ್ ಅಂಬರಿಶ್.

ಮಗನ ಮದುವೆ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಶ್, ”ನನಗೆ ತುಸು ಸಮಯ ಸಿಕ್ಕಿರುವುದು ಕಳೆದ ಎರಡು ವಾರಗಳಿಂದ ಮಾತ್ರವೇ. ಚುನಾವಣೆ ಇನ್ನಿತರೆ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದೆ. ಆದರೆ ನಮ್ಮ ಸಂಬಂಧಿಗಳು, ಆತ್ಮೀಯರು ಮದುವೆ ಕಾರ್ಯದಲ್ಲಿ ಜೊತೆಯಾಗಿದ್ದಾರೆ. ಮನೆಯಲ್ಲಿ ಕೆಲಸಕ್ಕೆ ಸಹಾಯ ಮಾಡುತ್ತಿದ್ದಾರೆ. ಇನ್ನು ಮದುವೆ ಆಮಂತ್ರಣ ಪತ್ರಿಕೆಯನ್ನು ಬಹುತೇಕ ಎಲ್ಲರಿಗೂ ಈಗಾಗಲೇ ನೀಡಿದ್ದೇವೆ. ಅಂಬರೀಶ್ ಅವರದ್ದು ದೊಡ್ಡ ಬಳಗ ಹಾಗಾಗಿ ಎಲ್ಲರಿಗೂ ಆಹ್ವಾನ ಪತ್ರಿಕೆ ನೀಡುತ್ತಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿ:Aviva-Abhishek: ನವಜೋಡಿ ಅವಿವಾ ಬಿದ್ದಪ್ಪ-ಅಭಿಷೇಕ್ ಅಂಬರೀಶ್​ರ ಹೊಸ ಕ್ಯೂಟ್ ಚಿತ್ರಗಳು

ಮೋದಿ ಅವರನ್ನು ಮದುವೆಗೆ ಆಹ್ವಾನಿಸಿರುವ ಬಗ್ಗೆ ಮಾತನಾಡಿದ ಸುಮಲತಾ, ”ಮೋದಿ ಅವರನ್ನು ಆಹ್ವಾನಿಸಿರುವುದು ಖುಷಿ ಇದೆ. ಆಹ್ವಾನ ಸ್ವೀಕರಿಸಿದ್ದಕ್ಕ ಅವರು ಸಂತಸ ವ್ಯಕ್ತಪಡಿಸಿ, ನನ್ನ ಆಶೀರ್ವಾದ ಸದಾ ಇರಲಿದೆ ಎಂದಿದ್ದಾರೆ. ಅವರು ಮದುವೆಗೆ ಬರುತ್ತಾರೋ ಇಲ್ಲವೊ ಎಂಬ ಬಗ್ಗೆ ನಮಗೆ ಇನ್ನೂ ಮಾಹಿತಿ ಇಲ್ಲ” ಎಂದಿದ್ದಾರೆ. ಜೂನ್ 5ರಂದು ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ ಅವರ ವಿವಾಹ ನಡೆಯಲಿದೆ. ಆ ಬಳಿಕ ಜೂನ್ 7 ರಂದು ಅದ್ಧೂರಿ ಆರತಕ್ಷತೆ ಕಾರ್ಯ ಸಹ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Mon, 29 May 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!