ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

Rakshit Shetty | 777 Charlie Movie: ರಾಷ್ಟ್ರಮಟ್ಟದಲ್ಲಿ ‘777 ಚಾರ್ಲಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಟ್ರೇಲರ್​ ರಿಲೀಸ್​ ಆಗುತ್ತಿದ್ದಂತೆಯೇ ಇದು ಅನೇಕ ಸೆಲೆಬ್ರಿಟಿಗಳ ಗಮನ ಸೆಳೆಯುತ್ತಿದೆ.

ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?
ರಶ್ಮಿಕಾ ಮಂದಣ್ಣ, ರಕ್ಷಿತ್ ಶೆಟ್ಟಿ
Follow us
| Updated By: ಮದನ್​ ಕುಮಾರ್​

Updated on: May 16, 2022 | 2:37 PM

ನಟ ರಕ್ಷಿತ್​ ಶೆಟ್ಟಿ (Rakshit Shetty) ಅಭಿನಯದ ‘777 ಚಾರ್ಲಿ’ ಸಿನಿಮಾದ ಟ್ರೇಲರ್​ ಸಖತ್​ ಸದ್ದು ಮಾಡುತ್ತಿದೆ. ಈ ಸಿನಿಮಾ ಬಗ್ಗೆ ಪರಭಾಷೆಯ ಸ್ಟಾರ್​ ಕಲಾವಿದರೆಲ್ಲ ಮಾತನಾಡುತ್ತಿದ್ದಾರೆ. ಈ ಚಿತ್ರದ ಮೂಲಕ ರಕ್ಷಿತ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮಿಂಚುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು. ‘777 ಚಾರ್ಲಿ’ (777 Charlie Movie) ಟ್ರೇಲರ್​ ಬಿಡುಗಡೆ ಆಗಿದ್ದು, ಪ್ರೇಕ್ಷಕರನ್ನು ಸಖತ್​ ಎಮೋಷನಲ್​ ಆಗಿ ಆವರಿಸಿಕೊಂಡಿದೆ. ಜನರು ಇದರ ಬಗ್ಗೆ ಪಾಸಿಟಿವ್​ ಆಗಿ ಕಮೆಂಟ್​ ಮಾಡುತ್ತಿದ್ದಾರೆ. ಕಿರಣ್​ ರಾಜ್​ ನಿರ್ದೇಶನದ ಈ ಸಿನಿಮಾ ಖಂಡಿತವಾಗಿಯೂ ರಶ್ಮಿಕಾ ಮಂದಣ್ಣ ಅವರಿಗೆ ಇಷ್ಟ ಆಗಲಿದೆ ಎಂಬ ಅಭಿಪ್ರಾಯ ಕೂಡ ಕೆಲವರಿಂದ ಕೇಳಿಬರುತ್ತಿದೆ. ಅದಕ್ಕೆ ಕಾರಣ ಕೂಡ ಇದೆ. ಈ ಸಿನಿಮಾದಲ್ಲಿ ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕಥೆಯನ್ನು ಹೇಳಲಾಗುತ್ತಿದೆ. ರಶ್ಮಿಕಾ ಮಂದಣ್ಣ (Rashmika Mandanna) ಅವರು ಕೂಡ ಪ್ರಾಣಿಪ್ರಿಯೆ. ಔರಾ ಎಂಬ ನಾಯಿಯನ್ನು ಅವರು ಸಾಕಿದ್ದಾರೆ. ಶೂಟಿಂಗ್​ ಬಿಡುವಿನಲ್ಲಿ ಅವರು ಔರಾ ಜೊತೆ ಕಾಲ ಕಳೆಯುತ್ತಾರೆ. ಹಾಗಾಗಿ ಅವರಿಗೆ ‘777 ಚಾರ್ಲಿ’ ಸಿನಿಮಾ ಇಷ್ಟ ಆಗಲಿದೆ ಎಂಬುದು ಅಭಿಮಾನಿಗಳ ಅಭಿಪ್ರಾಯ.

ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಅವರು ಒಂದು ಕಾಲದಲ್ಲಿ ಸಖತ್​ ಆತ್ಮೀಯರಾಗಿದ್ದರು. ಅವರ ಎಂಗೇಜ್​ಮೆಂಟ್​ ಕೂಡ ಆಗಿತ್ತು. ಆದರೆ ಕಾರಣಾಂತರಗಳಿಂದ ಆ ಸಂಬಂಧ ಮುರಿದುಬಿತ್ತು. ಹಾಗಂತ ಇಬ್ಬರ ನಡುವೆ ಯಾವುದೇ ವೈಮನಸ್ಸು ಮುಂದುವರಿದಿಲ್ಲ. ಈ ಹಿಂದೆ ರಶ್ಮಿಕಾ ಅವರ ಜನ್ಮದಿನಕ್ಕೆ ರಕ್ಷಿತ್​ ಶೆಟ್ಟಿ ಅವರು ವಿಶ್​ ಮಾಡಿದ್ದರು. ಹಾಗೆಯೇ ‘ಕಿರಿಕ್​ ಪಾರ್ಟಿ’ ಸಿನಿಮಾದ ನೆನಪುಗಳನ್ನು ರಶ್ಮಿಕಾ ಮಂದಣ್ಣ ಶೇರ್​ ಮಾಡಿಕೊಂಡಿದ್ದರು.

ರಾಷ್ಟ್ರಮಟ್ಟದಲ್ಲಿ ‘777 ಚಾರ್ಲಿ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಅನೇಕ ಸೆಲೆಬ್ರಿಟಿಗಳ ಗಮನ ಸೆಳೆಯುತ್ತಿದೆ. ಹಾಗಾಗಿ ಪ್ರಾಣಿಪ್ರಿಯೆ ಆಗಿರುವ ರಶ್ಮಿಕಾ ಮಂದಣ್ಣ ಕೂಡ ಈ ಚಿತ್ರವನ್ನು ನೋಡಿದರೆ ಅಚ್ಚರಿ ಏನಿಲ್ಲ. ಒಂದು ವೇಳೆ ಅವರು ಸಿನಿಮಾ ನೋಡಿದರೆ ಹೇಗೆ ಪ್ರತಿಕ್ರಿಯೆ ನೀಡಬಹುದು ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡಿದೆ. ಕಿರಣ್​ ರಾಜ್​ ನಿರ್ದೇಶನ ಮಾಡಿರುವ ‘777 ಚಾರ್ಲಿ’ ಸಿನಿಮಾ ಜೂ.10ರಂದು ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ ಹಾಗು ಹಿಂದಿ ಭಾಷೆಗೂ ಡಬ್​ ಆಗಿ ಈ ಚಿತ್ರ ತೆರೆಕಾಣುತ್ತಿದೆ. ರಕ್ಷಿತ್​ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಠ್​ ಮುಂತಾದವರು ‘777 ಚಾರ್ಲಿ’ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ
Image
777 Charlie Trailer: ‘777 ಚಾರ್ಲಿ’ ಸಿನಿಮಾ ಟ್ರೇಲರ್​ ರಿಲೀಸ್​: ಎಮೋಷನಲ್​ ಕಥೆಯ ಸುಳಿವು ನೀಡಿದ ರಕ್ಷಿತ್​ ಶೆಟ್ಟಿ
Image
‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ
Image
ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ಸಿಕ್ತು ದೊಡ್ಡ ಬೆಂಬಲ; ರಕ್ಷಿತ್ ಫ್ಯಾನ್ಸ್​ಗೆ ಗುಡ್​ ನ್ಯೂಸ್
Image
‘777 ಚಾರ್ಲಿ’ ಚಿತ್ರ ನೋಡಿ ಮೊದಲ ವಿಮರ್ಶೆ ತಿಳಿಸಿದ ರಾಣಾ ದಗ್ಗುಬಾಟಿ; ಹೇಗಿದೆ ರಕ್ಷಿತ್​ ಶೆಟ್ಟಿ ಸಿನಿಮಾ?

ಸಾಯಿ ಪಲ್ಲವಿ ಮೆಚ್ಚಿದ ‘777 ಚಾರ್ಲಿ’:

‘777 ಚಾರ್ಲಿ’ ಸಿನಿಮಾದ ಟ್ರೇಲರ್​ ನೋಡಿ ಸಾಯಿ ಪಲ್ಲವಿ ಮೆಚ್ಚಿಕೊಂಡಿದ್ದಾರೆ. ಅವರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ‘ಇದು ತುಂಬ ಹೃದಯಸ್ಪರ್ಶಿ ಆಗಿದೆ. ನಿರ್ದೇಶಕ ಕಿರಣ್​ ರಾಜ್​, ನಟ ರಕ್ಷಿತ್​ ಶೆಟ್ಟಿ ಮತ್ತು ನನ್ನ ಹೃದಯದ ತಂತಿ ಮೀಟುತ್ತಿರುವ ಚಾರ್ಲಿಗೆ ಶುಭ ಹಾರೈಕೆಗಳು. ಪ್ರಾಣಿ ಪ್ರಿಯೆರೇ, ನಿಮಗೆಲ್ಲ ಟಿಶ್ಯೂ ಅಗತ್ಯವಿದೆ’ ಎಂದು ಸಾಯಿ ಪಲ್ಲವಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ‘777 ಚಾರ್ಲಿ’ ಚಿತ್ರ ಸಖತ್​​ ಎಮೋಷನಲ್​ ಆಗಿರಲಿದೆ ಎಂದು ಅವರು ಕೂಡ ಒತ್ತಿ ಹೇಳಿದ್ದಾರೆ.

ರಾಣಾದಗ್ಗು ಬಾಟಿಗೂ ‘777 ಚಾರ್ಲಿ’ ಸಖತ್​ ಇಷ್ಟ:

ತೆಲುಗಿನಲ್ಲಿ ‘777 ಚಾರ್ಲಿ’ ವಿತರಣೆ ಮಾಡಲು ರಾಣಾ ದಗ್ಗುಬಾಟಿ ಮುಂದೆ ಬಂದಿದ್ದಾರೆ. ಸಿನಿಮಾ ಹೇಗಿದೆ ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘777 ಚಾರ್ಲಿ ಚಿತ್ರವನ್ನು ನೋಡುವ ಅವಕಾಶ ಸಿಕ್ಕಿತು. ಎಂಥ ಅದ್ಭುತ ಟ್ರೀಟ್​ ಇದು. ಒಟ್ಟಾರೆ ಹೊಸತನದಿಂದ ಕೂಡಿದೆ. ಈ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ರಾಣಾ ದಗ್ಗುಬಾಟಿ ಟ್ವೀಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ