AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಲವಿ ಟಾಕೀಸ್​ನಲ್ಲಿ ಮೋಡಿ ಮಾಡಲು ಬಂದ ತಿಲಕ್​-ಯಜ್ಞಾ ಶೆಟ್ಟಿಗೆ ಅಜನೀಶ್​ ಲೋಕನಾಥ್​ ಸಾಥ್​

Ajaneesh Loknath: ಶೀಘ್ರದಲ್ಲೇ ಟ್ರೇಲರ್​ ಬಿಡುಗಡೆ ಮಾಡಲು ‘H/34 ಪಲ್ಲವಿ ಟಾಕೀಸ್​’ ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಜೂನ್​ ಎರಡನೇ ವಾರದ ವೇಳೆ ಓಟಿಟಿ ಪ್ಲಾಟ್​ಫಾರ್ಮ್​ ಮೂಲಕ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಪಲ್ಲವಿ ಟಾಕೀಸ್​ನಲ್ಲಿ ಮೋಡಿ ಮಾಡಲು ಬಂದ ತಿಲಕ್​-ಯಜ್ಞಾ ಶೆಟ್ಟಿಗೆ ಅಜನೀಶ್​ ಲೋಕನಾಥ್​ ಸಾಥ್​
‘H/34 ಪಲ್ಲವಿ ಟಾಕೀಸ್​’ ಸಿನಿಮಾದಲ್ಲಿ ತಿಲಕ್​ ಮತ್ತು ಯಜ್ಞಾ ಶೆಟ್ಟಿ
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: May 28, 2021 | 2:55 PM

Share

ಕೊರೊನಾ ವೈರಸ್​ ಹಾವಳಿಯಿಂದಾಗಿ ಸಿನಿಮಾ ಶೂಟಿಂಗ್​ ಮತ್ತು ಪ್ರದರ್ಶನಕ್ಕೆ ಬ್ರೇಕ್​ ಬಿದ್ದಿದೆ. ಈ ನಡುವೆ ಚಿತ್ರೋದ್ಯಮಿಗಳು ಭರವಸೆ ಕಳೆದುಕೊಂಡಿಲ್ಲ. ಮುಂಬರುವ ದಿನಗಳಲ್ಲಿ ಪ್ರೇಕ್ಷಕರನ್ನು ರಂಜಿಸುವ ವಿಶ್ವಾಸದೊಂದಿಗೆ ನಿರಂತರವಾಗಿ ಪ್ರಯತ್ನ ಮುಂದುವರಿಸಿದ್ದಾರೆ. ಓಟಿಟಿ ಪ್ಲಾಟ್​ಫಾರ್ಮ್​ಗಳ ಮೂಲಕವಾದರೂ ಸರಿ, ಜನರಿಗೆ ಮನರಂಜನೆ ನೀಡಲು ಹಲವು ಚಿತ್ರತಂಡಗಳು ಸಜ್ಜಾಗುತ್ತಿವೆ. ಕನ್ನಡದ ಖ್ಯಾತ ನಟರಾದ ತಿಲಕ್​ ಮತ್ತು ಯಜ್ಞಾ ಶೆಟ್ಟಿ ಜೊತೆಯಾಗಿ ನಟಿಸಿರುವ ಹೊಸದೊಂದು ಸಿನಿಮಾ ಕೂಡ ಸದ್ಯದಲ್ಲೇ ಬಿಡುಗಡೆ ಆಗಲಿದೆ. ‘H/34 ಪಲ್ಲವಿ ಟಾಕೀಸ್​’ ಎಂಬುದು ಈ ಸಿನಿಮಾದ ಹೆಸರು.

ಇತ್ತೀಚೆಗೆ ಈ ಸಿನಿಮಾದ ಒಂದು ಲಿರಿಕಲ್​ ವಿಡಿಯೋ ರಿಲೀಸ್​ ಆಗಿದೆ. ‘ಬರೆವೆ ಬರೆವೆ ಒಲವ ಕವನ..’ ಎಂಬ ಹಾಡನ್ನು ಆನಂದ್​ ಆಡಿಯೋ ಮೂಲಕ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸಿದ್ದಾರೆ. ಪ್ರಸ್ತುತ ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಅವರು ಪ್ರತಿ ಸಿನಿಮಾದಲ್ಲೂ ಮೆಲೋಡಿ ಗೀತೆಗಳ ಮೂಲಕ ಕೇಳುಗರ ಮನ ಗೆಲ್ಲುತ್ತಿದ್ದಾರೆ. ‘H/34 ಪಲ್ಲವಿ ಟಾಕೀಸ್​’ ಚಿತ್ರದ ‘ಬರೆವೆ ಬರೆವೆ ಒಲವ ಕವನ..’ ಸಾಂಗ್​ ಕೂಡ ಜನರಿಗೆ ಇಷ್ಟ ಆಗುತ್ತಿದೆ.

ಈ ಹಾಡಿಗೆ ಅಂತಿತ್​ ತಿವಾರಿ ಧ್ವನಿ ನೀಡಿದ್ದಾರೆ. ಸುಂದರ ಲೊಕೇಷನ್​ಗಳಲ್ಲಿ ಹಾಡನ್ನು ಚಿತ್ರಿಸಲಾಗಿದೆ. ಈ ಹಿಂದೆ ‘6ನೇ ಮೈಲಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಶ್ರೀನಿವಾಸ್​ ಚಿಕ್ಕಣ್ಣ (ಸೀನಿ) ಅವರು ‘H/34 ಪಲ್ಲವಿ ಟಾಕೀಸ್​’ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ‘ಬರೆವೆ ಬರೆವೆ ಒಲವ ಕವನ..’ ಹಾಡಿಗೆ ಶ್ರೀನಿವಾಸ್​ ಚಿಕ್ಕಣ್ಣ ಅವರೇ ಸಾಹಿತ್ಯ ಬರೆದಿದ್ದಾರೆ.

ಸಚೇಂದ್ರ ಪ್ರಸಾದ್, ಅವಿನಾಶ್, ಸುಧಾ ಬೆಳವಾಡಿ, ಅಚ್ಯುತ್​ ಕುಮಾರ್, ಪದ್ಮಜಾ ರಾವ್, ಕುರಿ ಪ್ರತಾಪ್, ವಿಶ್ವ, ಅಮೃತಾ ಮಯೂರಿ, ರಾಜೇಶ್ವರಿ, ರಾಕ್ ಲೈನ್ ಸುಧಾಕರ್, ಅಜಯ್ ರಾಜ್ ಮುಂತಾದವರು ‘H/34 ಪಲ್ಲವಿ ಟಾಕೀಸ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಲಭೈರವ ಆರ್ಟ್ಸ್ ಲಾಂಛನದಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ಮಂಜುನಾಥ್ ಕೆ. ಮತ್ತು ರವಿಕಿರಣ್ ಎಂ. ಗೌಡ ಬಂಡವಾಳ ಹೂಡಿದ್ದಾರೆ.

ಹಾರರ್​, ಸಸ್ಪೆನ್ಸ್​-ಥ್ರಿಲ್ಲರ್​ ಮಾದರಿಯಲ್ಲಿ ಈ ಚಿತ್ರ ಮೂಡಿಬಂದಿದೆ. ನಿರ್ದೇಶನದ ಜೊತೆ ಕಥೆ, ಚಿತ್ರಕತೆ ಮತ್ತು ಸಂಭಾಷಣೆಯ ಜವಾಬ್ದಾರಿಯನ್ನೂ ಶ್ರೀನಿವಾಸ್​ ಚಿಕ್ಕಣ್ಣ ಅವರೇ ನಿಭಾಯಿಸಿದ್ದಾರೆ. ಮನೋಹರ್​ ಜೋಶಿ ಛಾಯಾಗ್ರಹಣ ಹಾಗೂ ಅಕ್ಷಯ್​ ಪಿ. ರಾವ್​ ಸಂಕಲನ ಮಾಡಿದ್ದಾರೆ.

(ಲಿರಿಕಲ್​ ವಿಡಿಯೋ)

ಸದ್ಯ ಹಾಡಿಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಶೀಘ್ರದಲ್ಲೇ ಟ್ರೇಲರ್​ ಬಿಡುಗಡೆ ಮಾಡಲು ‘H/34 ಪಲ್ಲವಿ ಟಾಕೀಸ್​’ ಚಿತ್ರತಂಡ ಪ್ಲ್ಯಾನ್​ ಮಾಡಿಕೊಂಡಿದೆ. ಜೂನ್​ ಎರಡನೇ ವಾರದ ವೇಳೆ ಓಟಿಟಿ ಪ್ಲಾಟ್​ಫಾರ್ಮ್​ ಮೂಲಕ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.

ಇದನ್ನೂ ಓದಿ:

ಬಾಲಿವುಡ್​ಗೆ ರಿಮೇಕ್​ ಆಗುತ್ತಿರುವ ಕನ್ನಡದ Act 1978 ಚಿತ್ರ! ಹಿಂದಿಯಲ್ಲಿ ನಾಯಕಿ ಯಾರು?

ಟ್ವಿಟರ್​ನಲ್ಲಿ ಹೆಚ್ಚು ಫಾಲೋವರ್ಸ್​ ಹೊಂದಿರುವ ಸ್ಯಾಂಡಲ್​ವುಡ್ ಹೀರೋ ಯಾರು? ಇಲ್ಲಿದೆ ಡಿಟೇಲ್ಸ್​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!