AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್

ಎಷ್ಟೇ ಪ್ರಯತ್ನಿಸಿದರೂ ಯಾಮಿ ಗೌತಮ್ ಅವರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ.

ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್
ಗಣೇಶ್​, ಯಾಮಿ ಗೌತಮ್​
Follow us
TV9 Web
| Updated By: ಮದನ್​ ಕುಮಾರ್​

Updated on: Oct 05, 2021 | 12:12 PM

ನಟಿ ಯಾಮಿ ಗೌತಮ್​ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಚಿತ್ರ ಯಶಸ್ವಿ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಇಷ್ಟೆಲ್ಲ ಫೇಮಸ್​ ಆಗಿರುವ ಅವರು ಮೊದಲು ಬಣ್ಣ ಹಚ್ಚಿದ್ದು ಕನ್ನಡದ ಸಿನಿಮಾದಲ್ಲಿ. ಗಣೇಶ್​ ನಟನೆಯ ‘ಉಲ್ಲಾಸ ಉತ್ಸಾಹ’ ಚಿತ್ರವೇ ಯಾಮಿ ಗೌತಮ್​ ನಟನೆಯ ಮೊದಲ ಸಿನಿಮಾ. ಕೆಲವೇ ದಿನಗಳ ಹಿಂದೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಯಾಮಿ ಗೌತಮ್​ ಅವರು ತಮ್ಮ ವೈಯಕ್ತಿಕ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ವಾಸಿ ಮಾಡಲು ಸಾಧ್ಯವಿಲ್ಲದಂತಹ ಚರ್ಮದ ಸಮಸ್ಯೆಯಿಂದ ತಾವು ಬಳಲುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅದಕ್ಕೆ ಫೋಟೋ ಸಾಕ್ಷಿಯನ್ನೂ ನೀಡಿದ್ದಾರೆ.

ಕೆರಟೋಸಿಸ್ ಪಿಲಾರಸ್​ (Keratosis-Pilaris) ಎಂಬ ಚರ್ಮದ ಸಮಸ್ಯೆ ಯಾಮಿ ಗೌತಮ್​ ಅವರನ್ನು ಕಾಡುತ್ತಿದೆ. ಇದೇನೂ ಗಂಭೀರ ಸಮಸ್ಯೆ ಅಲ್ಲ. ಆದರೆ ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ. ಹದಿಹರೆಯಲ್ಲಿ ಇದ್ದಾಗಲೇ ಯಾಮಿ ಗೌತಮ್​ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿತು. ಅಂದಿನಿಂದ ಇದನ್ನು ಮುಚ್ಚಿಟ್ಟುಕೊಂಡೇ ಬಂದಿದ್ದ ಅವರು ಈಗ ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ.

ನಟಿಯರು ಚರ್ಮದ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಹಾಗಾಗಿ ಅವರು ಸ್ವಸ್ಥವಾದ ಚರ್ಮ ಹೊಂದಬೇಕಾಗಿರುವುದು ಅನಿವಾರ್ಯ. ಹಾಗಾಗಿ ಕೆರಟೋಸಿಸ್ ಪಿಲಾರಸ್​ ಸಮಸ್ಯೆಯಿಂದ ಮುಕ್ತಿ ಪಡೆಯಲು ಯಾಮಿ ಗೌತಮ್​ ಸಾಕಷ್ಟು ಪ್ರಯತ್ನಿಸಿದರು. ಆದರೂ ಸಾಧ್ಯವಾಗಿಲ್ಲ. ಆ ಬಗ್ಗೆ ಅವರೀಗ ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

‘ಇತ್ತೀಚೆಗೆ ಒಂದು ಫೋಟೋಶೂಟ್​ ಮಾಡಲಾಯಿತು. ಸಾಮಾನ್ಯವಾಗಿ ನಮ್ಮ ಚರ್ಮದ ಸಮಸ್ಯೆಯನ್ನು ಮರೆಮಾಚುವ ಸಲುವಾಗಿ ಆ ಫೋಟೋಗಳನ್ನು ಪೋಸ್ಟ್​ ಪ್ರೊಡಕ್ಷನ್​ಗೆ ಕಳಿಸುತ್ತೇವೆ. ಆದರೆ ಈ ಬಾರಿ ಬೇರೆ ಆಲೋಚನೆ ಬಂತು. ನಾನೇಕೆ ಈ ಸಮಸ್ಯೆಯನ್ನು ಒಪ್ಪಿಕೊಳ್ಳಬಾರದು ಎನಿಸಿತು’ ಎಂದು ಯಾಮಿ ಗೌತಮ್​ ಪೋಸ್ಟ್​​ ಮಾಡಿದ್ದಾರೆ.

‘ಸತ್ಯವನ್ನು ನಿಮ್ಮೆದುರು ಒಪ್ಪಿಕೊಳ್ಳಲು ಧೈರ್ಯ ಮಾಡಿದ್ದೇನೆ. ನಾನು ಹದಿಹರೆಯದಲ್ಲಿ ಇರುವಾಗಲೇ ಈ ಸಮಸ್ಯೆ ಇರುವುದು ಗೊತ್ತಾಯಿತು. ಇನ್ನೂ ಇದು ವಾಸಿ ಆಗಿಲ್ಲ. ತುಂಬ ವರ್ಷಗಳಿಂದ ಇದನ್ನು ನಿಭಾಯಿಸುತ್ತಿದ್ದೇನೆ. ಆದರೆ ಇಂದು ನನ್ನ ನ್ಯೂನತೆಯನ್ನು ಒಪ್ಪಿಕೊಂಡು, ಭಯ ಮತ್ತು ಅಭದ್ರತೆಯನ್ನು ತೊಲಗಿಸುವ ಧೈರ್ಯ ಮಾಡಿದ್ದೇನೆ’ ಎಂದು ಯಾಮಿ ಗೌತಮ್​ ಹೇಳಿದ್ದಾರೆ.

ಇದನ್ನೂ ಓದಿ:

ಮದುವೆ ಆದ ಕೆಲವೇ ದಿನಗಳಲ್ಲಿ ನಟಿ ಯಾಮಿ ಗೌತಮ್​ಗೆ ಶಾಕ್​; ಸಮನ್ಸ್​ ನೀಡಿದ ಇಡಿ

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ