AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್

ಎಷ್ಟೇ ಪ್ರಯತ್ನಿಸಿದರೂ ಯಾಮಿ ಗೌತಮ್ ಅವರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಗಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ.

ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್
ಗಣೇಶ್​, ಯಾಮಿ ಗೌತಮ್​
TV9 Web
| Edited By: |

Updated on: Oct 05, 2021 | 12:12 PM

Share

ನಟಿ ಯಾಮಿ ಗೌತಮ್​ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ ಚಿತ್ರ ಯಶಸ್ವಿ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಇಷ್ಟೆಲ್ಲ ಫೇಮಸ್​ ಆಗಿರುವ ಅವರು ಮೊದಲು ಬಣ್ಣ ಹಚ್ಚಿದ್ದು ಕನ್ನಡದ ಸಿನಿಮಾದಲ್ಲಿ. ಗಣೇಶ್​ ನಟನೆಯ ‘ಉಲ್ಲಾಸ ಉತ್ಸಾಹ’ ಚಿತ್ರವೇ ಯಾಮಿ ಗೌತಮ್​ ನಟನೆಯ ಮೊದಲ ಸಿನಿಮಾ. ಕೆಲವೇ ದಿನಗಳ ಹಿಂದೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈಗ ಯಾಮಿ ಗೌತಮ್​ ಅವರು ತಮ್ಮ ವೈಯಕ್ತಿಕ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ವಾಸಿ ಮಾಡಲು ಸಾಧ್ಯವಿಲ್ಲದಂತಹ ಚರ್ಮದ ಸಮಸ್ಯೆಯಿಂದ ತಾವು ಬಳಲುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅದಕ್ಕೆ ಫೋಟೋ ಸಾಕ್ಷಿಯನ್ನೂ ನೀಡಿದ್ದಾರೆ.

ಕೆರಟೋಸಿಸ್ ಪಿಲಾರಸ್​ (Keratosis-Pilaris) ಎಂಬ ಚರ್ಮದ ಸಮಸ್ಯೆ ಯಾಮಿ ಗೌತಮ್​ ಅವರನ್ನು ಕಾಡುತ್ತಿದೆ. ಇದೇನೂ ಗಂಭೀರ ಸಮಸ್ಯೆ ಅಲ್ಲ. ಆದರೆ ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್​ ಲಕ್ಷಣ. ಹದಿಹರೆಯಲ್ಲಿ ಇದ್ದಾಗಲೇ ಯಾಮಿ ಗೌತಮ್​ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿತು. ಅಂದಿನಿಂದ ಇದನ್ನು ಮುಚ್ಚಿಟ್ಟುಕೊಂಡೇ ಬಂದಿದ್ದ ಅವರು ಈಗ ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ.

ನಟಿಯರು ಚರ್ಮದ ಬಗ್ಗೆ ಸಖತ್​ ಕಾಳಜಿ ವಹಿಸುತ್ತಾರೆ. ಹಾಗಾಗಿ ಅವರು ಸ್ವಸ್ಥವಾದ ಚರ್ಮ ಹೊಂದಬೇಕಾಗಿರುವುದು ಅನಿವಾರ್ಯ. ಹಾಗಾಗಿ ಕೆರಟೋಸಿಸ್ ಪಿಲಾರಸ್​ ಸಮಸ್ಯೆಯಿಂದ ಮುಕ್ತಿ ಪಡೆಯಲು ಯಾಮಿ ಗೌತಮ್​ ಸಾಕಷ್ಟು ಪ್ರಯತ್ನಿಸಿದರು. ಆದರೂ ಸಾಧ್ಯವಾಗಿಲ್ಲ. ಆ ಬಗ್ಗೆ ಅವರೀಗ ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

‘ಇತ್ತೀಚೆಗೆ ಒಂದು ಫೋಟೋಶೂಟ್​ ಮಾಡಲಾಯಿತು. ಸಾಮಾನ್ಯವಾಗಿ ನಮ್ಮ ಚರ್ಮದ ಸಮಸ್ಯೆಯನ್ನು ಮರೆಮಾಚುವ ಸಲುವಾಗಿ ಆ ಫೋಟೋಗಳನ್ನು ಪೋಸ್ಟ್​ ಪ್ರೊಡಕ್ಷನ್​ಗೆ ಕಳಿಸುತ್ತೇವೆ. ಆದರೆ ಈ ಬಾರಿ ಬೇರೆ ಆಲೋಚನೆ ಬಂತು. ನಾನೇಕೆ ಈ ಸಮಸ್ಯೆಯನ್ನು ಒಪ್ಪಿಕೊಳ್ಳಬಾರದು ಎನಿಸಿತು’ ಎಂದು ಯಾಮಿ ಗೌತಮ್​ ಪೋಸ್ಟ್​​ ಮಾಡಿದ್ದಾರೆ.

‘ಸತ್ಯವನ್ನು ನಿಮ್ಮೆದುರು ಒಪ್ಪಿಕೊಳ್ಳಲು ಧೈರ್ಯ ಮಾಡಿದ್ದೇನೆ. ನಾನು ಹದಿಹರೆಯದಲ್ಲಿ ಇರುವಾಗಲೇ ಈ ಸಮಸ್ಯೆ ಇರುವುದು ಗೊತ್ತಾಯಿತು. ಇನ್ನೂ ಇದು ವಾಸಿ ಆಗಿಲ್ಲ. ತುಂಬ ವರ್ಷಗಳಿಂದ ಇದನ್ನು ನಿಭಾಯಿಸುತ್ತಿದ್ದೇನೆ. ಆದರೆ ಇಂದು ನನ್ನ ನ್ಯೂನತೆಯನ್ನು ಒಪ್ಪಿಕೊಂಡು, ಭಯ ಮತ್ತು ಅಭದ್ರತೆಯನ್ನು ತೊಲಗಿಸುವ ಧೈರ್ಯ ಮಾಡಿದ್ದೇನೆ’ ಎಂದು ಯಾಮಿ ಗೌತಮ್​ ಹೇಳಿದ್ದಾರೆ.

ಇದನ್ನೂ ಓದಿ:

ಮದುವೆ ಆದ ಕೆಲವೇ ದಿನಗಳಲ್ಲಿ ನಟಿ ಯಾಮಿ ಗೌತಮ್​ಗೆ ಶಾಕ್​; ಸಮನ್ಸ್​ ನೀಡಿದ ಇಡಿ

ಎಷ್ಟು ಕೋಟಿ ಕೊಟ್ಟರೂ ಈ ಮದುಮಗಳು ಧರಿಸಿದ ಸೀರೆಗೆ ಬೆಲೆ ಕಟ್ಟೋಕಾಗಲ್ಲ; ಏನಿದರ ವಿಶೇಷ?

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು