AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಜನವರಿ 8ಕ್ಕೆ ರಾಕಿಂಗ್ ‌ಸ್ಟಾರ್ ಫ್ಯಾನ್ಸ್​ಗೆ ಕಾದಿದೆ ಬಿಗ್ ಸರ್​ಪ್ರೈಸ್: ಯಶ್ 19ಗೆ‌‌ ಡೈರೆಕ್ಟರ್ ಫಿಕ್ಸ್?

Narthan Birthday: ಇಂದು ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ನರ್ತನ್ ಅವರ ಹುಟ್ಟುಹಬ್ಬ. ಇವರ ಜನ್ಮದಿನಕ್ಕೆ ಕೆವಿಎನ್ ಪ್ರೊಡಕ್ಷನ್ ಹೌಸ್ ತಮ್ಮ ಸೋಸಿಯಲ್ ‌ಮೀಡಿಯಾ ಪೇಜ್​ನಲ್ಲಿ ನರ್ತನ್​ಗೆ ಕೆವಿನ್ ವಿಶ್ ಮಾಡಿದೆ.

Yash: ಜನವರಿ 8ಕ್ಕೆ ರಾಕಿಂಗ್ ‌ಸ್ಟಾರ್ ಫ್ಯಾನ್ಸ್​ಗೆ ಕಾದಿದೆ ಬಿಗ್ ಸರ್​ಪ್ರೈಸ್: ಯಶ್ 19ಗೆ‌‌ ಡೈರೆಕ್ಟರ್ ಫಿಕ್ಸ್?
Narthan and Yash
TV9 Web
| Updated By: Vinay Bhat|

Updated on:Dec 30, 2022 | 10:55 AM

Share

ಕೇವಲ ಸ್ಯಾಂಡಲ್​ವುಡ್ (Sandalwood) ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವೇ ರಾಕಿಂಗ್ ಸ್ಟಾರ್ ಯಶ್ (Yash) ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲದಲ್ಲಿದೆ. ಯಶ್ 19ನೇ ಸಿನಿಮಾದ ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಲೇ ಇವೆ. ಯಶ್ 19ನೇ ಚಿತ್ರದ ನಿರ್ದೇಶನ ಯಾರು ಮಾಡುತ್ತಾರೆ, ಸಿನಿಮಾ ಯಾವಾಗ ಶುರುವಾಗಲಿದೆ ಎನ್ನುವ ಬಗ್ಗೆ ಹಲವು ಸುದ್ದಿಗಳು ಹಬ್ಬಿವೆ. ಆದರೆ, ಕೆವಿಎನ್ (KVN) ಪ್ರೊಡಕ್ಷನ್ ಹೌಸ್ ಯಶ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲಿದೆ ಎಂಬ ಸುದ್ದಿ ಬಹುದಿನಗಳಿಂದ ಹರಿದಾಡುತ್ತಿದೆ. ಇದರ ಜೊತೆಗೆ ನರ್ತನ್ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಕೂಡ ಇದೆ. ಇದಕ್ಕೀಗ ಮತ್ತಷ್ಟು ಪುಷ್ಠಿ ಸಿಕ್ಕಿದೆ.

ಇಂದು ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ನರ್ತನ್ ಅವರ ಹುಟ್ಟುಹಬ್ಬ. ಇವರ ಜನ್ಮದಿನಕ್ಕೆ ಕೆವಿಎನ್ ಪ್ರೊಡಕ್ಷನ್ ಹೌಸ್ ತಮ್ಮ ಸೋಸಿಯಲ್ ‌ಮೀಡಿಯಾ ಪೇಜ್​ನಲ್ಲಿ ನರ್ತನ್​ಗೆ ಕೆವಿನ್ ವಿಶ್ ಮಾಡಿದೆ. ಇದರಲ್ಲಿ ನಮ್ಮ ಡೈರೆಕ್ಟರ್ ಎಂದು ಬರೆದಿರುವುದು ಕುತೂಹಲ ಕೆರಳಿಸಿದೆ. ಈ ಮೂಲಕ ಯಶ್ 19 ಬಗ್ಗೆ ಚಿಕ್ಕ ಸುಳಿವು ನೀಡಿರುವ ಕೆವಿಎನ್ ಜನವರಿ 8 ಕ್ಕೆ ಯಶ್ ಹುಟ್ಟುಹಬ್ಬದ ದಿನ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ
Image
‘ಮೇಡಂ ಕೆಳಗಿನ ಬಟ್ಟೆ ಎಲ್ಲಿ?’ ಹಾಟ್ ಫೋಟೋಶೂಟ್ ಮಾಡಿಸಿ ಟ್ರೋಲ್ ಆದ ನಟಿ ಅನನ್ಯಾ ಪಾಂಡೆ
Image
Shah Rukh Khan: ‘ಪಠಾಣ್​’ ಚಿತ್ರಕ್ಕೆ ಸೆನ್ಸಾರ್​ ಸಂಕಷ್ಟ; ಹಲವು ಬದಲಾವಣೆ ಮಾಡುವಂತೆ ಅಧಿಕಾರಿಗಳಿಂದ ಸೂಚನೆ
Image
‘ಪದವಿ ಪೂರ್ವ’, ‘ಜಮಾಲಿಗುಡ್ಡ’ ಜತೆ ಬರ್ತಿವೆ ಹಲವು ಸಿನಿಮಾ; ವರ್ಷದ ಕೊನೇ ವಾರವೂ ಸಖತ್​ ಪೈಪೋಟಿ
Image
Vallabhaneni Janardhan: ‘ಮಾನಸ ಸರೋವರ’ ಚಿತ್ರವನ್ನು ತೆಲುಗಿನಲ್ಲಿ ರಿಮೇಕ್​ ಮಾಡಿ ಗೆದ್ದಿದ್ದ ವಲ್ಲಭನೇನಿ ಜನಾರ್ಧನ್​ ನಿಧನ

ಬಿಗ್ ಬಾಸ್​ನಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ ನೋಡಿ ಮನೆ ಮಂದಿ ಹೇಳಿದ್ದು ಒಂದೇ ಮಾತು

ಶಿವರಾಜ್​ ಕುಮಾರ್ ಹಾಗೂ ಶ್ರೀಮುರಳಿ ನಟನೆಯ ‘ಮಫ್ತಿ’ ಸಿನಿಮಾ ನಿರ್ದೇಶನ ಮಾಡುವ ಮೂಲಕ ನರ್ತನ್ ಅವರು ಸಾಕಷ್ಟು ಗಮನ ಸೆಳೆದರು. ಅವರಿಗೆ ಈ ಚಿತ್ರ ಸಾಕಷ್ಟು ಖ್ಯಾತಿ ನೀಡಿತು. ಈಗ ಅವರು ನಿರ್ದೇಶನ ಮಾಡಲಿರುವ ಮುಂದಿನ ಚಿತ್ರ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲೂ ಕಾಡುತ್ತಿದೆ. ಯಶ್ 19ನೇ ಚಿತ್ರಕ್ಕೆ ನರ್ತನ್​ ಅವರೇ ಡೈರೆಕ್ಷನ್ ಮಾಡುತ್ತಾರಾ ಅಥವಾ ಬೇರೆ ಚಿತ್ರವನ್ನು ಅವರು ಘೋಷಣೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಕೆಲವೇ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.

ಸೈಫೈ- ಆಕ್ಷನ್ ಚಿತ್ರ?:

ಇತ್ತೀಚೆಗಷ್ಟೆ ಫಿಲ್ಮ್ ಕಂಪಾನಿಯನ್ ತಮ್ಮ 2ನೇ ಆನಿವರ್ಸರಿ ವಿಶೇಷವಾಗಿ ಯಶ್ ಸಂದರ್ಶನ ಮಾಡಿತ್ತು. ರಾಕಿಂಗ್ ಸ್ಟಾರ್: ಗೇಮ್‌ ಚೇಂಜರ್ ಆಫ್ ಇಂಡಿಯನ್ ಸಿನಿಮಾ ಹೆಸರಿನಲ್ಲಿ ನಡೆದ ಈ ಸಂವಾದ ಕಾರ್ಯಕ್ರಮದಲ್ಲಿ ಯಶ್ ಕೆಲ ವಿಚಾರ ಹಂಚಿಕೊಂಡಿದ್ದಾರೆ. ಕಥೆಯ ಬಗ್ಗೆ ಯಾವುದೇ ವಿಚಾರವನ್ನು ಯಶ್ ಹೇಳಿಲ್ಲ. ಆದರೆ ಸೈನ್‌ಫಿಕ್ಷನ್ ಅಥವಾ ಆಕ್ಷನ್ ಸಿನಿಮಾ ಮಾಡುವ ಒಲವು ವ್ಯಕ್ತಪಡಿಸಿದ್ದಾರೆ. ಯಶ್ ತಮ್ಮ ಮುಂದಿನ ಚಿತ್ರವನ್ನು ಹಾಲಿವುಡ್ ಸಿನಿಮಾಗಳ ರೇಂಜ್‌ನಲ್ಲಿ ತೆರೆಗೆ ತರುವ ಮನಸ್ಸು ಮಾಡಿರುವುದಾಗಿ ಹೇಳಿದ್ದಾರೆ. ಇದಕ್ಕಾಗಿ ಸಾಕಷ್ಟು ಜನರನ್ನು ಭೇಟಿ ಮಾಡುತ್ತಿದ್ದಾರಂತೆ. ಕನ್ನಡದಲ್ಲೇ ಈ ಸಿನಿಮಾ ಮೂಡಿ ಬರುತ್ತದೆ ಎನ್ನುವ ಸುಳಿವು ಕೊಟ್ಟಿದ್ದಾರೆ. ಯಶ್ ಕೆಲ ದಿನಗಳ ಹಿಂದೆ ಹಾಲಿವುಡ್ ನಟ, ನಿರ್ದೇಶಕ ಜೆಜೆ ಪೆರ್ರಿ ಅವರನ್ನು ಭೇಟಿ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:55 am, Fri, 30 December 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ