AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್; ಕ್ರೇಜಿಯಾಗಿದೆ ‘Yash19’ ಶೀರ್ಷಿಕೆ

Yash 19: ಯಶ್ ಹೊಸ ಸಿನಿಮಾ ಬಗ್ಗೆ ತಿಳಿಯಲು ಅಭಿಮಾನಿಗಳು ಹಲವು ಸಮಯದಿಂದ ಕಾದಿದ್ದರು. ಅದಕ್ಕೆ ಮುಹೂರ್ತ ಕೂಡಿಬಂದಿದೆ. ಇಂದು ಟೈಟಲ್ ರಿವೀಲ್ ಆಗಿದೆ.

ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್; ಕ್ರೇಜಿಯಾಗಿದೆ ‘Yash19’ ಶೀರ್ಷಿಕೆ
ರಾಜೇಶ್ ದುಗ್ಗುಮನೆ
| Edited By: |

Updated on:Dec 08, 2023 | 11:59 AM

Share

ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘Yash 19’ಗಾಗಿ ಫ್ಯಾನ್ಸ್ ಕಾಯುತ್ತಲೇ ಇದ್ದರು. ಕೊನೆಗೂ ಈ ವಿಚಾರ ರಿವೀಲ್ ಆಗಿದೆ. ‘Yash 19 ಚಿತ್ರಕ್ಕೆ ‘ಟಾಕ್ಸಿಕ್’ (Toxic) ಎಂದು ಟೈಟಲ್ ಇಡಲಾಗಿದೆ. ಈ ಟೈಟಲ್ ನೊಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರೋ ಕಾರಣಕ್ಕೆ ಈ ಚಿತ್ರಕ್ಕೆ ಟೈಟಲ್ ಸೂಕ್ತ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಯಶ್ ಅವರ ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್​ನಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಂಡವು. ನರ್ತನ್ ಅವರು ‘ಯಶ್ 19’ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ನಡೆಯಲಿಲ್ಲ. ಈಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ‘ಕೆಜಿಎಫ್ 2’ ರಿಲೀಸ್ ಆಗಿ ಒಂದೂವರೆ ವರ್ಷದ ಬಳಿಕ ಯಶ್ ಹೊಸ ಚಿತ್ರದ ಟೈಟಲ್ ಘೋಷಣೆ ಆಗಿದೆ.

‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್ ದಿನಾಂಕವನ್ನೂ ರಿವೀಲ್ ಮಾಡಲಾಗಿದೆ. 10-4-2025ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಲಿದೆ.

ಟ್ವಿಟರ್​ನಲ್ಲಿ ಸದ್ಯ #Toxic ಹ್ಯಾಶ್​ಟ್ಯಾಗ್ ಟ್ರೆಂಡ್ ಆಗುತ್ತಿದೆ. ಅಭಿಮಾನಿಗಳು ಹಬ್ಬ ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಅದಕ್ಕೆ ಸೂಕ್ತ ಆಗುವಂಥ ಟೈಟಲ್​ನ ಫೈನಲ್ ಮಾಡಲಾಗಿದೆ. ಗೀತು ಮೋಹನ್​ದಾಸ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:00 am, Fri, 8 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ