AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash19: ‘ಡಿಸೆಂಬರ್ 8ಕ್ಕೆ ಟೈಟಲ್ ಅನೌನ್ಸ್ ಮಾಡ್ತೀವಿ’; ದೊಡ್ಡ ಸುದ್ದಿ ಕೊಟ್ಟ ಯಶ್

ಯಶ್ ಮುಂದಿನ ಸಿನಿಮಾ ಕುರಿತು ಹರಿದಾಡಿದ ಸುದ್ದಿಗಳು ಒಂದೆರಡಲ್ಲ. ಈಗ ಈ ಎಲ್ಲಾ ವದಂತಿಗಳಿಗೆ ತೆರೆ ಬೀಳುವ ಸಮಯ. ಈ ಎಲ್ಲಾ ಅನುಮಾನಗಳಿಗೆ, ಪ್ರಶ್ನೆಗಳಿಗೆ ಡಿಸೆಂಬರ್ 8ರಂದು ಉತ್ತರ ಸಿಗಲಿದೆ.

Yash19: ‘ಡಿಸೆಂಬರ್ 8ಕ್ಕೆ ಟೈಟಲ್ ಅನೌನ್ಸ್ ಮಾಡ್ತೀವಿ’; ದೊಡ್ಡ ಸುದ್ದಿ ಕೊಟ್ಟ ಯಶ್
ಯಶ್
TV9 Web
| Edited By: |

Updated on:Dec 04, 2023 | 11:12 AM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರ ಹೊಸ ಸಿನಿಮಾ ಘೋಷಣೆ ಆಗೋದು ಯಾವಾಗ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಆ ಬಗ್ಗೆ ಹೊಸ ಹೊಸ ಸುದ್ದಿ ಹರಿದಾಡಿತ್ತು. ಈ ಎಲ್ಲಾ ಅನುಮಾನಗಳಿಗೆ, ಪ್ರಶ್ನೆಗಳಿಗೆ ಡಿಸೆಂಬರ್ 8ರಂದು ಉತ್ತರ ಸಿಗಲಿದೆ. ಯಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅಂದು ಸಿನಿಮಾದ ಟೈಟಲ್ ರಿವೀಲ್ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಸದ್ಯ ಅಭಿಮಾನಿಗಳ ಎದುರು ಅವರು ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇಟ್ಟಿದ್ದಾರೆ.

2022ರ ಏಪ್ರಿಲ್ 14ರಂದು ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರ ಮುಂದಿನ ಪ್ರಾಜೆಕ್ಟ್ ಯಾವುದು ಎನ್ನುವ ಪ್ರಶ್ನೆ ಮೂಡಿತು. ಯಶ್ ಮುಂದಿನ ಸಿನಿಮಾ ಕುರಿತು ಹರಿದಾಡಿದ ಸುದ್ದಿಗಳು ಒಂದೆರಡಲ್ಲ. ಈಗ ಈ ಎಲ್ಲಾ ವದಂತಿಗಳಿಗೆ ತೆರೆ ಬೀಳುವ ಸಮಯ.

‘ಈಗ ಸಮಯ ಬಂದಿದೆ. ಡಿಸೆಂಬರ್ 8ರಂದು ಮುಂಜಾನೆ 9:55ಕ್ಕೆ ಟೈಟಲ್ ಅನೌನ್ಸ್ ಆಗಲಿದೆ’ ಎಂದು ಯಶ್ ಹೇಳಿದ್ದಾರೆ. ಯಶ್ ಮುಂದಿನ ಸಿನಿಮಾಗೆ ಕೆವಿಎನ್​ ಪ್ರೊಡಕ್ಷನ್ ಬಂಡವಾಳ ಹೂಡಲಿದೆ ಎಂಬುದನ್ನು ಕೂಡ ಯಶ್ ರಿವೀಲ್ ಮಾಡಿದ್ದಾರೆ. ಪೋಸ್ಟರ್​ನಲ್ಲಿ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ. ಈ ಪೋಸ್ಟರ್​ ಸಾಕಷ್ಟು ವೈರಲ್ ಆಗಿದೆ. ಯಶ್ ಅಭಿಮಾನಿಗಳು, ಸಿನಿಪ್ರಿಯರು ಇದನ್ನು ರೀಟ್ವೀಟ್ ಮಾಡುತ್ತಿದ್ದಾರೆ.

Yash

ಇದನ್ನೂ ಓದಿ: ‘ಅವನೊಂದು ಸಿಗ್ನಲ್ ಕಳ್ಸಿದ್ದಾನೆ’: ಯಶ್ ನೀಡಿರುವ ಸಿಗ್ನಲ್ ಏನು?

‘ಯಶ್ 19’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. ಹಾಲಿವುಡ್ ತಂತ್ರಜ್ಞರು ಕೂಡ ಈ ಚಿತ್ರಕ್ಕಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಈ ಸಿನಿಮಾನ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಈ ಎಲ್ಲಾ ಪ್ರಶ್ನೆಗೆ ಡಿಸೆಂಬರ್ 8ರಂದು ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:04 am, Mon, 4 December 23

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?