AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನರು ಫ್ರೀ ಆಗಿ ನೋಡೋದಾಗಿದ್ರೆ ಮನಬಂದಂತೆ ಸಿನಿಮಾ ಮಾಡ್ತಿದ್ದೆ’; ‘Yash19’ ವಿಳಂಬಕ್ಕೆ ಕಾರಣ ಕೊಟ್ಟ ಯಶ್

ಯಶ್​ ದೇಶ-ವಿದೇಶ ಸುತ್ತುತ್ತಾ ಟೈಮ್ ಪಾಸ್ ಮಾಡುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳು ವ್ಯಕ್ತವಾಗಿದೆ. ಆದರೆ, ಇದಕ್ಕೆಲ್ಲ ಯಶ್ ತಲೆಕೆಡಿಸಿಕೊಂಡಿಲ್ಲ. ಈಗ ಸಿನಿಮಾ ವಿಳಂಬಕ್ಕೆ ಕಾರಣ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Jun 21, 2023 | 2:27 PM

Share

‘Yash19’ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದನ್ನು ಯಾರು ನಿರ್ದೇಶನ ಮಾಡುತ್ತಿದ್ದಾರೆ? ಈ ಚಿತ್ರ ಎಷ್ಟು ಭಾಷೆಯಲ್ಲಿ ಮೂಡಿಬರಲಿದೆ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈಗ ಯಶ್ (Yash) ಅವರು ಈ ಕುರಿತು ಮಾತನಾಡಿದ್ದಾರೆ. ಇಂದು (ಜೂನ್ 21) ಯಶ್ ಅವರು ಕುಟುಂಬ (Yash Family) ಸಮೇತ ಮೈಸೂರಿನ ನಂಜನಗೂಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಮಾಧ್ಯಮದ ಜೊತೆ ಮಾತನಾಡಿದರು. 19ನೇ ಸಿನಿಮಾ ಕುರಿತು ಅವರು ಮಾತನಾಡಿದ್ದಾರೆ.

‘ಕೆಜಿಎಫ್ 2’ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅವರು ದೇಶ-ವಿದೇಶ ಸುತ್ತುತ್ತಾ ಟೈಮ್ ಪಾಸ್ ಮಾಡುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳು ವ್ಯಕ್ತವಾಗಿದೆ. ಆದರೆ, ಇದಕ್ಕೆಲ್ಲ ಯಶ್ ತಲೆಕೆಡಿಸಿಕೊಂಡಿಲ್ಲ. ಏನೋ ದೊಡ್ಡದನ್ನು ಮಾಡೋಕೆ ಅವರು ರೆಡಿ ಆಗಿದ್ದಾರೆ. ಈ ಕುರಿತು ಅವರು ಒಂದು ಹಿಂಟ್ ನೀಡಿದ್ದಾರೆ.

‘ಯಶ್ 19 ಬಗ್ಗೆ ಹೇಳಿ’ ಎಂದು ಯಶ್ ಅವರನ್ನು ಕೇಳಲಾಯಿತು. ಇದಕ್ಕೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೀಗೆಲ್ಲಾ ಅದನ್ನು ಅನೌನ್ಸ್ ಮಾಡೋಕೆ ಆಗುತ್ತಾ? ಜನ ನನಗೆ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಅವರು ಕೊಡೋ ದುಡ್ಡಿಗೆ ವ್ಯಾಲ್ಯೂ ಇರಬೇಕು. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಇಡೀ ದೇಶ ಜಗತ್ತು ನೋಡುತ್ತಾ ಇದೆ. ಆದಷ್ಟು ಬೇಗ ಹೇಳ್ತೀವಿ’ ಎಂದರು ಯಶ್​.

ಇದನ್ನೂ ಓದಿ: Yash: ನಂಜನಗೂಡಿಗೆ ‘ರಾಕಿಂಗ್ ಸ್ಟಾರ್’ ಎಂಟ್ರಿ; ಯಶ್ ನೋಡಲು ಜನಸಾಗರ

ಜನರು ದುಡ್ಡುಕೊಟ್ಟು ಸಿನಿಮಾ ನೋಡುತ್ತಾರೆ. ಅವರು ಕೊಡುವ ಹಣಕ್ಕೆ ಬೆಲೆ ಕೊಡಬೇಕು ಅನ್ನೋದು ಯಶ್ ಅಭಿಪ್ರಾಯ. ‘ಬಹಳ ದಿನಗಳಿಂದ ಕೆಲಸ ಮಾಡ್ತಾ ಇದೀವಿ. ಜನರು ಫ್ರೀ ನೋಡ್ತಾರೆ ಎಂದಾಗಿದ್ರೆ ಮನ ಬಂದಂತೆ ಕೆಲಸ ಮಾಡ್ತಾ ಇದ್ದೆ. ಆದರೆ, ಅವರು ಹಣ ಕೊಟ್ಟು ಸಿನಿಮಾ ನೋಡ್ತಾರೆ. ಅವರೇ ನನ್ನನ್ನು ಬೆಳೆಸಿದ್ದು. ನನ್ನ ಮೇಲೆ ಜವಾಬ್ದಾರಿ ಇದೆ. ನಾನು ಒಂದು ದಿನ, ಒಂದು ಕ್ಷಣಾನೂ ವೇಸ್ಟ್ ಮಾಡ್ತಾ ಇಲ್ಲ. ಆದಷ್ಟು ಬೇಗ ಬರ್ತೀವಿ’ ಎಂದರು ಯಶ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:11 pm, Wed, 21 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು