AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ನಿರ್ದೇಶಕಿ ಜೊತೆ ಕೈ ಜೋಡಿಸಿದ ಯಶ್? ತಿಂಗಳೊಳಗೆ ಸಿಗಲಿದೆ ಅಧಿಕೃತ ಮಾಹಿತಿ

Yash 19 Update: ಕಳೆದ ಒಂದು ವರ್ಷಗಳಿಂದ ಯಶ್ ಹೆಸರು ಅನೇಕ ನಿರ್ದೇಶಕರ ಜೊತೆ ತಳುಕು ಹಾಕಿಕೊಂಡಿದೆ. ಈಗ ಅವರು ಗೀತು ಮೋಹನ್​ದಾಸ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಮಲಯಾಳಂ ನಿರ್ದೇಶಕಿ ಜೊತೆ ಕೈ ಜೋಡಿಸಿದ ಯಶ್? ತಿಂಗಳೊಳಗೆ ಸಿಗಲಿದೆ ಅಧಿಕೃತ ಮಾಹಿತಿ
ಯಶ್-ಗೀತು
ರಾಜೇಶ್ ದುಗ್ಗುಮನೆ
|

Updated on:Apr 15, 2023 | 12:52 PM

Share

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್​ಗೆ ಈ ಬಗ್ಗೆ ಅಭಿಮಾನಿಗಳು ನಿರಂತರವಾಗಿ ಬೇಡಿಕೆ ಇಡುತ್ತಲೇ ಇದ್ದಾರೆ. ಆದರೆ ಯಶ್ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಹೀಗಿರುವಾಗಲೇ ಯಶ್ (Yash) ಹೊಸ ಸಿನಿಮಾ ಬಗ್ಗೆ ಅಪ್​​​ಡೇಟ್ ಒಂದು ಸಿಕ್ಕಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ (Geetu Mohandas) ಜೊತೆ ಅವರು ಸಿನಿಮಾ ಮಾಡಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದಲ್ಲಿ ಯಶ್ ಅಭಿಮಾನಿಗಳು ಅಧಿಕೃತ ಮಾಹಿತಿ ಸಿಗಲಿ ಎಂದು ಕಾಯುತ್ತಿದ್ದಾರೆ.

ಕಳೆದ ಒಂದು ವರ್ಷಗಳಿಂದ ಯಶ್ ಹೆಸರು ಅನೇಕ ನಿರ್ದೇಶಕರ ಜೊತೆ ತಳುಕು ಹಾಕಿಕೊಂಡಿದೆ. ಮೊದಲು ನರ್ತನ್ ಜೊತೆ ಅವರು ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಯಿತು. ‘ಬ್ರಹ್ಮಾಸ್ತ್ರ 2’ ಚಿತ್ರದಲ್ಲಿ ನಟಿಸಲು ಯಶ್​​ಗೆ ಆಫರ್ ಬಂದಿದೆ ಎಂದು ಹೇಳಲಾಗಿತ್ತು. ಆದರೆ, ಆ ಬಗ್ಗೆ ಯಾವುದೇ ಬೆಳವಣಿಗೆ ಆಗಿಲ್ಲ. ಈಗ ಅವರು ಗೀತು ಮೋಹನ್​ದಾಸ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಯಶ್ ಹಾಗೂ ಗೀತು ಮಧ್ಯೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿತ್ತು. ಗೀತು ಹೇಳಿದ ಕಥೆಗೆ ಯಶ್ ಫಿದಾ ಆಗಿದ್ದಾರೆ ಎಂದು ತಿಳಿದು ಬಂದಿದೆ. ಯಶ್ ದೊಡ್ಡ ನಿರ್ದೇಶಕರ ಜೊತೆ ಕೆಲಸ ಜೋಡಿಸಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಯಶ್ ಪ್ರಮುಖವಾಗಿ ಸ್ಕ್ರಿಪ್ಟ್​ ಕಡೆ ಗಮನ ಹರಿಸುತ್ತಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಚಿತ್ರೀಕರಣ ಮಾಡಲು ಅನುಮತಿ ಪಡೆದ ಯಶ್, 19ನೇ ಸಿನಿಮಾಕ್ಕೆ ಭಾರಿ ಯೋಜನೆ

‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಈ ಕಾರಣಕ್ಕೆ ಯಶ್ ಮೇಲೆ ನಿರೀಕ್ಷೆ ಹೆಚ್ಚಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶ್ ಖ್ಯಾತಿ ಹಬ್ಬಿದೆ. ಹೀಗಿರುವಾಗ ಅವರು ಗೀತು ಜೊತೆ ಕೈ ಜೋಡಿಸುತ್ತಾರೆ ಎನ್ನುವ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಮುಂದಿನ 30 ದಿನಗಳಲ್ಲಿ ಅವರ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೇಗಿತ್ತು ರಾಕಿ-ರಾಧಿಕಾ ಪಂಡಿತ್ ಭೇಟಿ; ಹಳೆಯ ವಿಡಿಯೋ ಹಂಚಿಕೊಂಡ ಯಶ್ ಪತ್ನಿ

2014ರಲ್ಲಿ ಬಂದ ‘ಲೈಯರ್ಸ್​ ಡೈಸ್’ ಸಿನಿಮಾ ಮೂಲಕ ಗೀತಾ ಮೋಹನ್​ದಾಸ್ ಫೇಮಸ್ ಆದರು. ಈ ಸಿನಿಮಾಗೆ ಎರಡು ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಇದರ ಜೊತೆಗೆ ಇನ್ನೂ ಕೆಲ ಅವಾರ್ಡ್​ ಸಿನಿಮಾಗೆ ಲಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Sat, 15 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!