AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ನಿರ್ದೇಶಕಿ ಜೊತೆ ಕೈ ಜೋಡಿಸಿದ ಯಶ್? ತಿಂಗಳೊಳಗೆ ಸಿಗಲಿದೆ ಅಧಿಕೃತ ಮಾಹಿತಿ

Yash 19 Update: ಕಳೆದ ಒಂದು ವರ್ಷಗಳಿಂದ ಯಶ್ ಹೆಸರು ಅನೇಕ ನಿರ್ದೇಶಕರ ಜೊತೆ ತಳುಕು ಹಾಕಿಕೊಂಡಿದೆ. ಈಗ ಅವರು ಗೀತು ಮೋಹನ್​ದಾಸ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಮಲಯಾಳಂ ನಿರ್ದೇಶಕಿ ಜೊತೆ ಕೈ ಜೋಡಿಸಿದ ಯಶ್? ತಿಂಗಳೊಳಗೆ ಸಿಗಲಿದೆ ಅಧಿಕೃತ ಮಾಹಿತಿ
ಯಶ್-ಗೀತು
ರಾಜೇಶ್ ದುಗ್ಗುಮನೆ
|

Updated on:Apr 15, 2023 | 12:52 PM

Share

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಕಳೆದಿದೆ. ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್​ಗೆ ಈ ಬಗ್ಗೆ ಅಭಿಮಾನಿಗಳು ನಿರಂತರವಾಗಿ ಬೇಡಿಕೆ ಇಡುತ್ತಲೇ ಇದ್ದಾರೆ. ಆದರೆ ಯಶ್ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಹೀಗಿರುವಾಗಲೇ ಯಶ್ (Yash) ಹೊಸ ಸಿನಿಮಾ ಬಗ್ಗೆ ಅಪ್​​​ಡೇಟ್ ಒಂದು ಸಿಕ್ಕಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ (Geetu Mohandas) ಜೊತೆ ಅವರು ಸಿನಿಮಾ ಮಾಡಲಿದ್ದಾರೆ ಎಂದು ವರದಿ ಆಗಿದೆ. ಈ ವಿಚಾರದಲ್ಲಿ ಯಶ್ ಅಭಿಮಾನಿಗಳು ಅಧಿಕೃತ ಮಾಹಿತಿ ಸಿಗಲಿ ಎಂದು ಕಾಯುತ್ತಿದ್ದಾರೆ.

ಕಳೆದ ಒಂದು ವರ್ಷಗಳಿಂದ ಯಶ್ ಹೆಸರು ಅನೇಕ ನಿರ್ದೇಶಕರ ಜೊತೆ ತಳುಕು ಹಾಕಿಕೊಂಡಿದೆ. ಮೊದಲು ನರ್ತನ್ ಜೊತೆ ಅವರು ಸಿನಿಮಾ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಯಿತು. ‘ಬ್ರಹ್ಮಾಸ್ತ್ರ 2’ ಚಿತ್ರದಲ್ಲಿ ನಟಿಸಲು ಯಶ್​​ಗೆ ಆಫರ್ ಬಂದಿದೆ ಎಂದು ಹೇಳಲಾಗಿತ್ತು. ಆದರೆ, ಆ ಬಗ್ಗೆ ಯಾವುದೇ ಬೆಳವಣಿಗೆ ಆಗಿಲ್ಲ. ಈಗ ಅವರು ಗೀತು ಮೋಹನ್​ದಾಸ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ವಿಚಾರ ಗೊತ್ತಾಗಿದೆ.

ಯಶ್ ಹಾಗೂ ಗೀತು ಮಧ್ಯೆ ಕಳೆದ ಒಂದು ವರ್ಷದಿಂದ ಮಾತುಕತೆ ನಡೆಯುತ್ತಿತ್ತು. ಗೀತು ಹೇಳಿದ ಕಥೆಗೆ ಯಶ್ ಫಿದಾ ಆಗಿದ್ದಾರೆ ಎಂದು ತಿಳಿದು ಬಂದಿದೆ. ಯಶ್ ದೊಡ್ಡ ನಿರ್ದೇಶಕರ ಜೊತೆ ಕೆಲಸ ಜೋಡಿಸಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಯಶ್ ಪ್ರಮುಖವಾಗಿ ಸ್ಕ್ರಿಪ್ಟ್​ ಕಡೆ ಗಮನ ಹರಿಸುತ್ತಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಚಿತ್ರೀಕರಣ ಮಾಡಲು ಅನುಮತಿ ಪಡೆದ ಯಶ್, 19ನೇ ಸಿನಿಮಾಕ್ಕೆ ಭಾರಿ ಯೋಜನೆ

‘ಕೆಜಿಎಫ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿದೆ. ಈ ಕಾರಣಕ್ಕೆ ಯಶ್ ಮೇಲೆ ನಿರೀಕ್ಷೆ ಹೆಚ್ಚಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶ್ ಖ್ಯಾತಿ ಹಬ್ಬಿದೆ. ಹೀಗಿರುವಾಗ ಅವರು ಗೀತು ಜೊತೆ ಕೈ ಜೋಡಿಸುತ್ತಾರೆ ಎನ್ನುವ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ಮುಂದಿನ 30 ದಿನಗಳಲ್ಲಿ ಅವರ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೇಗಿತ್ತು ರಾಕಿ-ರಾಧಿಕಾ ಪಂಡಿತ್ ಭೇಟಿ; ಹಳೆಯ ವಿಡಿಯೋ ಹಂಚಿಕೊಂಡ ಯಶ್ ಪತ್ನಿ

2014ರಲ್ಲಿ ಬಂದ ‘ಲೈಯರ್ಸ್​ ಡೈಸ್’ ಸಿನಿಮಾ ಮೂಲಕ ಗೀತಾ ಮೋಹನ್​ದಾಸ್ ಫೇಮಸ್ ಆದರು. ಈ ಸಿನಿಮಾಗೆ ಎರಡು ರಾಷ್ಟ್ರಪ್ರಶಸ್ತಿ ಸಿಕ್ಕಿದೆ. ಇದರ ಜೊತೆಗೆ ಇನ್ನೂ ಕೆಲ ಅವಾರ್ಡ್​ ಸಿನಿಮಾಗೆ ಲಭಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:52 pm, Sat, 15 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?