AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಕೇಶನ್​ ಮೂಡ್​ನಲ್ಲಿ ರಾಧಿಕಾ ಪಂಡಿತ್-ಯಶ್; ಸ್ಟಾರ್ ದಂಪತಿ ತೆರಳಿದ್ದು ಯಾವ ದೇಶಕ್ಕೆ?

Yash - Radhika Pandit: ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು.

ವೆಕೇಶನ್​ ಮೂಡ್​ನಲ್ಲಿ ರಾಧಿಕಾ ಪಂಡಿತ್-ಯಶ್; ಸ್ಟಾರ್ ದಂಪತಿ ತೆರಳಿದ್ದು ಯಾವ ದೇಶಕ್ಕೆ?
ಯಶ್-ರಾಧಿಕಾ
TV9 Web
| Edited By: |

Updated on:Jul 21, 2022 | 7:32 AM

Share

ಯಶ್ (Yash) ಅವರ ‘ಕೆಜಿಎಫ್ 2’ ತೆರೆಗೆ ಬಂದು ಮೂರು ತಿಂಗಳ ಮೇಲಾಗಿದೆ. ಅವರ ಮುಂದಿನ ಸಿನಿಮಾ ‘ಯಶ್ 19’ರ ಬಗ್ಗೆ ಅಪ್​​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ರಾಧಿಕಾ ಪಂಡಿತ್-ಯಶ್​ ವಿದೇಶಕ್ಕೆ ಹಾರಿದ್ದಾರೆ. ಯಶ್ ಜತೆ ವೆಕೇಶನ್ ಕಳೆಯುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ (Radhika Pandit) ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿದೆ. ಬ್ಯೂಟಿಫುಲ್ ಕಪಲ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು. ಇದಾದ ಬೆನ್ನಲ್ಲೇ ಅವರು ಯಶ್​ ಜತೆ ವಿದೇಶಕ್ಕೆ ಹಾರಿದ್ದಾರೆ. ಈ ದಂಪತಿ ತೆರಳಿದ್ದು ಸ್ಲೊವೇನಿಯಾ ದೇಶಕ್ಕೆ.

ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

ನರ್ತನ್ ಜತೆಗಿನ ಸಿನಿಮಾ ವಿಳಂಬ ಆಗುತ್ತಿದ್ದು, ಯಶ್ ಅವರು ‘ಕೆಜಿಎಫ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಇಲ್ಲ. ಈಗ ಅವರು ಗಡ್ಡಕ್ಕೆ ಕತ್ತರಿ ಹಾಕಿಲ್ಲ ಎಂಬ ವಿಚಾರದಿಂದ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Yash: ಯಶ್​ ಹೀರೋ ಆಗಿ ಕಳೆಯಿತು 14 ವರ್ಷ; ‘ರಾಕಿಂಗ್​ ಸ್ಟಾರ್​’ ಪಾಲಿಗೆ ಜುಲೈ 18 ಸ್ಪೆಷಲ್​ ದಿನ

ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಈ ಮೊದಲು ಹಲವು ಕಡೆಗಳಲ್ಲಿ ವೆಕೇಶನ್​ಗೆ ತೆರಳಿದ್ದರು. ಕೆಲ ವರ್ಷಗಳ ಹಿಂದೆ ಈ ದಂಪತಿ ಮಾಲ್ಡೀವ್ಸ್​​ಗೆ ಭೇಟಿ ನೀಡಿದ್ದರು. ‘ಕೆಜಿಎಫ್ 2’ ತೆರೆಕಂಡ ನಂತರ ಯಶ್ ಹಾಗೂ ರಾಧಿಕಾ ಪಂಡಿತ್ ಗೋವಾಗೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

Published On - 9:22 pm, Wed, 20 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ