AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಮಲ್ಟಿಸ್ಟಾರರ್ ಸಿನಿಮಾದಲ್ಲಿ ಯಶ್? ಹೈ ಬಜೆಟ್ ಚಿತ್ರಕ್ಕೆ ನಿರ್ದೇಶಕರು ಇವರೇ

ಯಶ್ ಹಾಗೂ ರಾಮ್ ಚರಣ್ ಒಟ್ಟಾಗಿ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ. ಈ ಚಿತ್ರಕ್ಕೆ ಆ್ಯಕ್ಷನ್​ಕಟ್ ಹೇಳುತ್ತಿರುವುದು ಖ್ಯಾತ ನಿರ್ದೇಶಕ ನರ್ತನ್.

Yash: ಮಲ್ಟಿಸ್ಟಾರರ್ ಸಿನಿಮಾದಲ್ಲಿ ಯಶ್? ಹೈ ಬಜೆಟ್ ಚಿತ್ರಕ್ಕೆ ನಿರ್ದೇಶಕರು ಇವರೇ
ಯಶ್
TV9 Web
| Edited By: |

Updated on: Sep 14, 2022 | 4:35 PM

Share

ಯಶ್ (Yash) ನಟನೆಯ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಐದು ತಿಂಗಳು ಕಳೆದಿದೆ. ಯಶ್ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಆದರೆ, ಈ ವರೆಗೆ ಆ ಬಗ್ಗೆ ಅಪ್​ಡೇಟ್ ಸಿಕ್ಕಿಲ್ಲ. ಅವರ ಹೊಸ ಸಿನಿಮಾ ಆದಷ್ಟು ಬೇಗ  ಘೋಷಣೆ ಆಗಲಿ ಎಂದು ಎಲ್ಲರೂ ಕಾಯುತ್ತಿದ್ದಾರೆ. ಅದಕ್ಕೂ ಮೊದಲು ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ವದಂತಿಗಳು ಹುಟ್ಟಿಕೊಂಡಿವೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಕೇಳಿ ಫ್ಯಾನ್ಸ್ ಸಾಕಷ್ಟು ಖುಷಿಪಟ್ಟಿದ್ದಾರೆ. ಅದು ನಿಜವಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಯಶ್ ಹಾಗೂ ರಾಮ್ ಚರಣ್ ಒಟ್ಟಾಗಿ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ. ಈ ಚಿತ್ರಕ್ಕೆ ಆ್ಯಕ್ಷನ್​ಕಟ್ ಹೇಳುತ್ತಿರುವುದು ಖ್ಯಾತ ನಿರ್ದೇಶಕ ನರ್ತನ್. ಈಗಾಗಲೇ ಎರಡು ಸ್ಟಾರ್​​ಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಅವರು ಗೆದ್ದು ತೋರಿಸಿದ್ದಾರೆ. ‘ಮಫ್ತಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಶ್ರೀಮುರಳಿ ಪಾತ್ರಗಳನ್ನು ಬ್ಯಾಲೆನ್ಸ್ ಮಾಡಿ ತೆಗೆದುಕೊಂಡು ಹೋಗಿದ್ದರು. ಈ ಚಿತ್ರ ಗೆದ್ದಿತ್ತು. ಈಗ ನರ್ತನ್ ಅದೇ ಮಾದರಿಯ ಸಾಹಸಕ್ಕೆ ಮುಂದಾಗುತ್ತಿದ್ದಾರೆ ಎನ್ನಲಾಗಿದೆ.

ಯಶ್ ಹಾಗೂ ನರ್ತನ್ ಸಿನಿಮಾ ಮಾಡುತ್ತಾರೆ ಎಂಬ ವಿಚಾರ ಈ ಮೊದಲಿನಿಂದಲೂ ಸುದ್ದಿಯಲ್ಲಿದೆ. ಆದರೆ, ಇದನ್ನು ಏಕೆ ಘೋಷಿಸಿಲ್ಲ ಎಂಬ ಬಗ್ಗೆ ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿತ್ತು. ಈ ಸಿನಿಮಾ ಸೆಟ್ಟೇರುವುದಿಲ್ಲ ಎಂಬ ಮಾತುಗಳು ಕೂಡ ಹರಿದಾಡಿದವು. ಆದರೆ, ಈ ಸಿನಿಮಾ ಘೋಷಣೆ ಆಗದಿರಲು ಕಾರಣ ಬೇರೆಯದೇ ಇತ್ತು ಎಂಬ ವಿಚಾರ ಈಗ ಗೊತ್ತಾಗಿದೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಈ ಚಿತ್ರದಲ್ಲಿ ನಟಿಸಲು ರಾಮ್ ಚರಣ್​ ಅವರಿಗೆ ಆಫರ್ ನೀಡಲಾಗಿತ್ತು. ಈ ಸಿನಿಮಾದ ಸ್ಕ್ರಿಪ್ಟ್​​ಅನ್ನು ಚಿರಂಜೀವಿ ಓದಿರಲಿಲ್ಲ. ಈಗ ಸಿನಿಮಾ ಕಥೆಯನ್ನು ಕೇಳಿರುವ ಚಿರಂಜೀವಿ ಅವರು ಮುಂದುವರಿಯಲು ಓಕೆ ಎಂದಿದ್ದಾರೆ ಎಂದು ವರದಿ ಆಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗಲಿದೆ.

ಇದನ್ನೂ ಓದಿ: Yash: ಯಶ್​ ಗೆಟಪ್​ ಕಾಪಿ ಮಾಡಿದ್ರಾ ಸಲ್ಮಾನ್​ ಖಾನ್​; ಬಿ-ಟೌನ್​ ತುಂಬ ಹಬ್ಬಿದೆ ಈ ಮಾತು

ಇದು ಹೈ ಬಜೆಟ್ ಸಿನಿಮಾ ಆಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ‘ಕೆಜಿಎಫ್ 2’ ಚಿತ್ರದಿಂದ ಯಶ್ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ‘ಆರ್​ಆರ್​ಆರ್’ ಚಿತ್ರದಿಂದ ದೊಡ್ಡ ಯಶಸ್ಸು ಕಂಡಿದ್ದಾರೆ ರಾಮ್ ಚರಣ್. ಇಬ್ಬರೂ ಒಟ್ಟಾಗಿ ನಟಿಸಿದರೆ ಸಿನಿಮಾ ಸಖತ್ ಹೈಪ್​ ಪಡೆದುಕೊಳ್ಳಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ