AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡಿದೆ. ಭಾರತದಲ್ಲೂ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಚಿತ್ರರಂಗಕ್ಕೆ ಈ ಸಿನಿಮಾದಿಂದ ಹೊಸ ಹುರುಪು ಸಿಕ್ಕಿದೆ.

ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್
ಮೋದಿ ಔತಣಕೂಟದಲ್ಲಿ ಯಶ್-ರಿಷಬ್
ರಾಜೇಶ್ ದುಗ್ಗುಮನೆ
|

Updated on: Feb 13, 2023 | 7:10 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ರಾತ್ರಿ (ಫೆಬ್ರವರಿ 12) ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದಿನಿಂದ (ಫೆಬ್ರವರಿ 13) ಐದು ದಿನಗಳ ಕಾಲ ನಡೆಯುವ ವೈಮಾನಿಕ ಪ್ರದರ್ಶನ 2023ರಲ್ಲಿ ಭಾಗಿ ಆಗಲಿದ್ದಾರೆ. ವಿಶೇಷ ಎಂದರೆ ನಟ ಯಶ್(Yash), ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ರಾಜಭವನದಲ್ಲಿ ನಡೆದ ಮೋದಿ ಅವರ ಔತಣಕೂಟದಲ್ಲಿ ಹಾಜರಿ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡಿದೆ. ಭಾರತದಲ್ಲೂ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಚಿತ್ರರಂಗಕ್ಕೆ ಈ ಸಿನಿಮಾದಿಂದ ಹೊಸ ಹುರುಪು ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಿಂದ ಯಶಸ್ಸು ಕಂಡಿದ್ದಾರೆ. ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’​ ಮೂಲಕ ಒಳ್ಳೊಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ. ಈ ಕಾರಣಕ್ಕೆ ಇವರೆಲ್ಲರಿಗೂ ಔತಣಕೂಟಕ್ಕೆ ಆಹ್ವಾನ ಸಿಕ್ಕಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಎನ್ನಲಾಗಿದೆ.

ರಾಜಭವನದ ಹೊರ ಭಾಗದಲ್ಲಿ ಯಶ್ ಹಾಗೂ ರಿಷಬ್ ಶೆಟ್ಟಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ಅಭಿಮಾನಿಗಳ ಜತೆ ಅವರು ಪೋಸ್ ನೀಡಿದ್ದಾರೆ. ಈ ಫೋಟೋಗೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ. ಇವರ ಜತೆ ಕೆಲ ಕ್ರಿಕೆಟರ್​ಗಳು ಕೂಡ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕೆಂದೇನೂ ಇಲ್ಲ’; ಚುನಾವಣೆಗೆ ನಿಲ್ಲೋ ಬಗ್ಗೆ ರಿಷಬ್ ಶೆಟ್ಟಿ ಮಾತು
Image
ಶಿವರಾತ್ರಿಗೆ ಗುಡ್​ನ್ಯೂಸ್ ಕೊಡಲಿದ್ದಾರೆ ನರ್ತನ್​; ಯಶ್ ಜತೆಗಿನ ಸಿನಿಮಾ ಯಾವಾಗ?
Image
ಫ್ಯಾನ್ಸ್ ಭೇಟಿ ಮಾಡಿದ ಯಶ್​; ಅಭಿಮಾನಿಗಳ ಕಡೆಯಿಂದ ಸಿಕ್ತು ಸಿದ್ದೇಶ್ವರ ಸ್ವಾಮೀಜಿ ಪೋಟೋ

ಇದನ್ನೂ ಓದಿ: ಶಿವರಾತ್ರಿಗೆ ಗುಡ್​ನ್ಯೂಸ್ ಕೊಡಲಿದ್ದಾರೆ ನರ್ತನ್​; ಯಶ್ ಜತೆಗಿನ ಸಿನಿಮಾ ಯಾವಾಗ?

ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗದ ಬಗ್ಗೆ ಆಗಾಗ ಗಮನ ಹರಿಸುತ್ತಿರುತ್ತಾರೆ. ಕೆಲ ವರ್ಷಗಳ ಹಿಂದೆ ಅವರು ಬಾಲಿವುಡ್​ ಮಂದಿಯನ್ನು ಆಹ್ವಾನಿಸಿ ಔತಣಕೂಟ ನಡೆಸಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಗಲಿದ ಚಿತ್ರರಂಗದ ಅನೇಕರಿಗೆ ಅವರು ಸಂತಾಪ ಸೂಚಿಸಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!