AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡಿದೆ. ಭಾರತದಲ್ಲೂ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಚಿತ್ರರಂಗಕ್ಕೆ ಈ ಸಿನಿಮಾದಿಂದ ಹೊಸ ಹುರುಪು ಸಿಕ್ಕಿದೆ.

ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್
ಮೋದಿ ಔತಣಕೂಟದಲ್ಲಿ ಯಶ್-ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Feb 13, 2023 | 7:10 AM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ರಾತ್ರಿ (ಫೆಬ್ರವರಿ 12) ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದಿನಿಂದ (ಫೆಬ್ರವರಿ 13) ಐದು ದಿನಗಳ ಕಾಲ ನಡೆಯುವ ವೈಮಾನಿಕ ಪ್ರದರ್ಶನ 2023ರಲ್ಲಿ ಭಾಗಿ ಆಗಲಿದ್ದಾರೆ. ವಿಶೇಷ ಎಂದರೆ ನಟ ಯಶ್(Yash), ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ರಾಜಭವನದಲ್ಲಿ ನಡೆದ ಮೋದಿ ಅವರ ಔತಣಕೂಟದಲ್ಲಿ ಹಾಜರಿ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡಿದೆ. ಭಾರತದಲ್ಲೂ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಚಿತ್ರರಂಗಕ್ಕೆ ಈ ಸಿನಿಮಾದಿಂದ ಹೊಸ ಹುರುಪು ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಿಂದ ಯಶಸ್ಸು ಕಂಡಿದ್ದಾರೆ. ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’​ ಮೂಲಕ ಒಳ್ಳೊಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ. ಈ ಕಾರಣಕ್ಕೆ ಇವರೆಲ್ಲರಿಗೂ ಔತಣಕೂಟಕ್ಕೆ ಆಹ್ವಾನ ಸಿಕ್ಕಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಎನ್ನಲಾಗಿದೆ.

ರಾಜಭವನದ ಹೊರ ಭಾಗದಲ್ಲಿ ಯಶ್ ಹಾಗೂ ರಿಷಬ್ ಶೆಟ್ಟಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ಅಭಿಮಾನಿಗಳ ಜತೆ ಅವರು ಪೋಸ್ ನೀಡಿದ್ದಾರೆ. ಈ ಫೋಟೋಗೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ. ಇವರ ಜತೆ ಕೆಲ ಕ್ರಿಕೆಟರ್​ಗಳು ಕೂಡ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕೆಂದೇನೂ ಇಲ್ಲ’; ಚುನಾವಣೆಗೆ ನಿಲ್ಲೋ ಬಗ್ಗೆ ರಿಷಬ್ ಶೆಟ್ಟಿ ಮಾತು
Image
ಶಿವರಾತ್ರಿಗೆ ಗುಡ್​ನ್ಯೂಸ್ ಕೊಡಲಿದ್ದಾರೆ ನರ್ತನ್​; ಯಶ್ ಜತೆಗಿನ ಸಿನಿಮಾ ಯಾವಾಗ?
Image
ಫ್ಯಾನ್ಸ್ ಭೇಟಿ ಮಾಡಿದ ಯಶ್​; ಅಭಿಮಾನಿಗಳ ಕಡೆಯಿಂದ ಸಿಕ್ತು ಸಿದ್ದೇಶ್ವರ ಸ್ವಾಮೀಜಿ ಪೋಟೋ

ಇದನ್ನೂ ಓದಿ: ಶಿವರಾತ್ರಿಗೆ ಗುಡ್​ನ್ಯೂಸ್ ಕೊಡಲಿದ್ದಾರೆ ನರ್ತನ್​; ಯಶ್ ಜತೆಗಿನ ಸಿನಿಮಾ ಯಾವಾಗ?

ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗದ ಬಗ್ಗೆ ಆಗಾಗ ಗಮನ ಹರಿಸುತ್ತಿರುತ್ತಾರೆ. ಕೆಲ ವರ್ಷಗಳ ಹಿಂದೆ ಅವರು ಬಾಲಿವುಡ್​ ಮಂದಿಯನ್ನು ಆಹ್ವಾನಿಸಿ ಔತಣಕೂಟ ನಡೆಸಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಗಲಿದ ಚಿತ್ರರಂಗದ ಅನೇಕರಿಗೆ ಅವರು ಸಂತಾಪ ಸೂಚಿಸಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ