AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡಿದೆ. ಭಾರತದಲ್ಲೂ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಚಿತ್ರರಂಗಕ್ಕೆ ಈ ಸಿನಿಮಾದಿಂದ ಹೊಸ ಹುರುಪು ಸಿಕ್ಕಿದೆ.

ಪ್ರಧಾನಿ ಮೋದಿ ಔತಣಕೂಟದಲ್ಲಿ ಯಶ್, ರಿಷಬ್ ಶೆಟ್ಟಿ ಭಾಗಿ; ಫೋಟೋ ವೈರಲ್
ಮೋದಿ ಔತಣಕೂಟದಲ್ಲಿ ಯಶ್-ರಿಷಬ್
ರಾಜೇಶ್ ದುಗ್ಗುಮನೆ
|

Updated on: Feb 13, 2023 | 7:10 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ರಾತ್ರಿ (ಫೆಬ್ರವರಿ 12) ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದಿನಿಂದ (ಫೆಬ್ರವರಿ 13) ಐದು ದಿನಗಳ ಕಾಲ ನಡೆಯುವ ವೈಮಾನಿಕ ಪ್ರದರ್ಶನ 2023ರಲ್ಲಿ ಭಾಗಿ ಆಗಲಿದ್ದಾರೆ. ವಿಶೇಷ ಎಂದರೆ ನಟ ಯಶ್(Yash), ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ರಾಜಭವನದಲ್ಲಿ ನಡೆದ ಮೋದಿ ಅವರ ಔತಣಕೂಟದಲ್ಲಿ ಹಾಜರಿ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಯಶಸ್ಸು ಕಂಡಿದೆ. ಭಾರತದಲ್ಲೂ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿದೆ. ಚಿತ್ರರಂಗಕ್ಕೆ ಈ ಸಿನಿಮಾದಿಂದ ಹೊಸ ಹುರುಪು ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದಿಂದ ಯಶಸ್ಸು ಕಂಡಿದ್ದಾರೆ. ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ವಿಜಯ್ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್’​ ಮೂಲಕ ಒಳ್ಳೊಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ. ಈ ಕಾರಣಕ್ಕೆ ಇವರೆಲ್ಲರಿಗೂ ಔತಣಕೂಟಕ್ಕೆ ಆಹ್ವಾನ ಸಿಕ್ಕಿದೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು ಎನ್ನಲಾಗಿದೆ.

ರಾಜಭವನದ ಹೊರ ಭಾಗದಲ್ಲಿ ಯಶ್ ಹಾಗೂ ರಿಷಬ್ ಶೆಟ್ಟಿ ಕಾಣಿಸಿಕೊಂಡಿರುವ ಫೋಟೋ ವೈರಲ್ ಆಗಿದೆ. ಅಭಿಮಾನಿಗಳ ಜತೆ ಅವರು ಪೋಸ್ ನೀಡಿದ್ದಾರೆ. ಈ ಫೋಟೋಗೆ ಬಗೆಬಗೆಯ ಕಮೆಂಟ್​ಗಳು ಬರುತ್ತಿವೆ. ಇವರ ಜತೆ ಕೆಲ ಕ್ರಿಕೆಟರ್​ಗಳು ಕೂಡ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ರಾಜಕೀಯದಿಂದಲೇ ಸಮಾಜದಲ್ಲಿ ಬದಲಾವಣೆ ಬರಬೇಕೆಂದೇನೂ ಇಲ್ಲ’; ಚುನಾವಣೆಗೆ ನಿಲ್ಲೋ ಬಗ್ಗೆ ರಿಷಬ್ ಶೆಟ್ಟಿ ಮಾತು
Image
ಶಿವರಾತ್ರಿಗೆ ಗುಡ್​ನ್ಯೂಸ್ ಕೊಡಲಿದ್ದಾರೆ ನರ್ತನ್​; ಯಶ್ ಜತೆಗಿನ ಸಿನಿಮಾ ಯಾವಾಗ?
Image
ಫ್ಯಾನ್ಸ್ ಭೇಟಿ ಮಾಡಿದ ಯಶ್​; ಅಭಿಮಾನಿಗಳ ಕಡೆಯಿಂದ ಸಿಕ್ತು ಸಿದ್ದೇಶ್ವರ ಸ್ವಾಮೀಜಿ ಪೋಟೋ

ಇದನ್ನೂ ಓದಿ: ಶಿವರಾತ್ರಿಗೆ ಗುಡ್​ನ್ಯೂಸ್ ಕೊಡಲಿದ್ದಾರೆ ನರ್ತನ್​; ಯಶ್ ಜತೆಗಿನ ಸಿನಿಮಾ ಯಾವಾಗ?

ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರರಂಗದ ಬಗ್ಗೆ ಆಗಾಗ ಗಮನ ಹರಿಸುತ್ತಿರುತ್ತಾರೆ. ಕೆಲ ವರ್ಷಗಳ ಹಿಂದೆ ಅವರು ಬಾಲಿವುಡ್​ ಮಂದಿಯನ್ನು ಆಹ್ವಾನಿಸಿ ಔತಣಕೂಟ ನಡೆಸಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಗಲಿದ ಚಿತ್ರರಂಗದ ಅನೇಕರಿಗೆ ಅವರು ಸಂತಾಪ ಸೂಚಿಸಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?