AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಗುರುವಾರದಿಂದ ‘ಕೆಜಿಎಫ್ 2’ ಅಡ್ವಾನ್ಸ್ ಬುಕ್ಕಿಂಗ್ ಆರಂಭ; ಎಲ್ಲೆಲ್ಲಿ? ಇಲ್ಲಿದೆ ನೋಡಿ

Yash | KGF 2 Advance Booking: ‘ಕೆಜಿಎಫ್ 2’ ರಿಲೀಸ್ ಬಗ್ಗೆ ಚಿತ್ರತಂಡ ಪ್ರತಿದಿನವೂ ಹೊಸ ಅಪ್ಡೇಟ್ ನೀಡುತ್ತಿದೆ. ಇದೀಗ ಅಡ್ವಾನ್ಸ್ ಬುಕ್ಕಿಂಗ್ ಬಗ್ಗೆ ಮಾಹಿತಿ ನೀಡಿದೆ ಚಿತ್ರತಂಡ. ಎಲ್ಲೆಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಪ್ರಾರಂಭವಾಗಲಿದೆ? ಎಂದಿನಿಂದ? ಇಲ್ಲಿದೆ ಮಾಹಿತಿ.

KGF Chapter 2: ಗುರುವಾರದಿಂದ ‘ಕೆಜಿಎಫ್ 2’ ಅಡ್ವಾನ್ಸ್ ಬುಕ್ಕಿಂಗ್ ಆರಂಭ; ಎಲ್ಲೆಲ್ಲಿ? ಇಲ್ಲಿದೆ ನೋಡಿ
‘ಕೆಜಿಎಫ್ ಚಾಪ್ಟರ್ 2’ ಪೋಸ್ಟರ್
TV9 Web
| Edited By: |

Updated on:Apr 06, 2022 | 4:36 PM

Share

ಯಶ್ (Yash) ನಟನೆಯ ‘ಕೆಜಿಎಫ್ 2’ (KGF Chapter 2) ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗೊಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದೆ. ಈ ನಡುವೆ ಚಿತ್ರದ ರಿಲೀಸ್ ಬಗ್ಗೆ ಪ್ರತಿದಿನವೂ ಹೊಸ ಅಪ್ಡೇಟ್​ಗಳನ್ನು ಘೋಷಿಸಲಾಗುತ್ತಿದೆ. ಇದುವರೆಗೆ ವಿದೇಶಗಳಲ್ಲಿ ಚಿತ್ರ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳುತ್ತಿತ್ತು. ಬ್ರಿಟನ್​ನಲ್ಲಿ ದಾಖಲೆಯ ಮಟ್ಟದಲ್ಲಿ ಟಿಕೆಟ್ ಕೂಡ ಮಾರಾಟವಾಗಿತ್ತು. ಇದೀಗ ಭಾರತದ ಹಲವು ಭಾಗಗಳಲ್ಲಿ ಮುಂಗಡವಾಗಿ ಟಿಕೆಟ್ ಬುಕ್ಕಿಂಗ್​ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೇರಳ, ತಮಿಳುನಾಡು ಹಾಗೂ ಉತ್ತರ ಭಾರತದಲ್ಲಿ ನಾಳೆಯಿಂದ ಅಂದರೆ ಏಪ್ರಿಲ್ 7ರಿಂದ ಅಡ್ವಾನ್ಸ್ ಬುಕ್ಕಿಂಗ್ ಆರಂಭಿಸಲಾಗುವುದು ಎಂದು ಘೋಷಿಸಿದೆ.

ಬುಕ್​ಮೈಶೋ ಹಾಗೂ ಪೇಟಿಎಂ ಮೂಲಕ ನಾಳೆಯಿಂದ (ಏ.7)  ಕೇರಳ, ತಮಿಳುನಾಡು ಹಾಗೂ ಉತ್ತರ ಭಾರತದಲ್ಲಿ ಟಿಕೆಟ್​ಗಳು ಅಡ್ವಾನ್ಸ್​ ಬುಕ್ಕಿಂಗ್​ಗೆ ಲಭ್ಯವಿರುತ್ತವೆ’ ಎಂದು ಹೊಂಬಾಳೆ ಫಿಲ್ಮ್ಸ್ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಇಲ್ಲಿದೆ:

ಕರ್ನಾಟಕದಲ್ಲಿ ರಿಲೀಸ್ ಯಾವಾಗ? ಫ್ಯಾನ್ಸ್ ಪ್ರಶ್ನೆ:

‘ಕೆಜಿಎಫ್ 2’ ಚಿತ್ರತಂಡ ಇದುವರೆಗೆ ಬಹುತೇಕ ಎಲ್ಲೆಡೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವನ್ನು ಘೋಷಿಸಿದೆ. ಆದರೆ ಇನ್ನೂ ಕರ್ನಾಟಕದ ಬಗ್ಗೆ ಅಧಿಕೃತವಾಗಿ ತಿಳಿಸಿಲ್ಲ. ಅಭಿಮಾನಿಗಳು ಈ ಬಗ್ಗೆ ಕುತೂಹಲದಿಂದ ಪ್ರಶ್ನಿಸಿದ್ದಾರೆ. ‘‘ದೀರ್ಘಕಾಲದಿಂದ ಕಾಯುತ್ತಿದ್ದೇವೆ, ಆದಷ್ಟು ಬೇಗ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಮಾಡಿ’’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೋರಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಕರ್ನಾಟಕದಲ್ಲಿ ಟಿಕೆಟ್ ಬುಕ್ಕಿಂಗ್ ಆರಂಭದ ಬಗ್ಗೆ ಚಿತ್ರತಂಡ ಸದ್ಯದಲ್ಲೇ ಮಾಹಿತಿ ನೀಡುವ ನಿರೀಕ್ಷೆಗಳಿವೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಏಪ್ರಿಲ್ 14ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ಗ್ರೀಸ್​ನಲ್ಲಿ ತೆರೆಕಾಣಲಿರುವ ಮೊದಲ ದಕ್ಷಿಣ ಭಾರತೀಯ ಚಿತ್ರ ಕೆಜಿಎಫ್ 2; ರಿಲೀಸ್​ಗೂ ಮುನ್ನ ಹಲವು ದಾಖಲೆ ಬರೆದ ಯಶ್​ ಚಿತ್ರ

Gagana Nee: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ‘ಗಗನ ನೀ..’ ರಿಲೀಸ್​

Published On - 4:27 pm, Wed, 6 April 22

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು