AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Chapter 2: ಗುರುವಾರದಿಂದ ‘ಕೆಜಿಎಫ್ 2’ ಅಡ್ವಾನ್ಸ್ ಬುಕ್ಕಿಂಗ್ ಆರಂಭ; ಎಲ್ಲೆಲ್ಲಿ? ಇಲ್ಲಿದೆ ನೋಡಿ

Yash | KGF 2 Advance Booking: ‘ಕೆಜಿಎಫ್ 2’ ರಿಲೀಸ್ ಬಗ್ಗೆ ಚಿತ್ರತಂಡ ಪ್ರತಿದಿನವೂ ಹೊಸ ಅಪ್ಡೇಟ್ ನೀಡುತ್ತಿದೆ. ಇದೀಗ ಅಡ್ವಾನ್ಸ್ ಬುಕ್ಕಿಂಗ್ ಬಗ್ಗೆ ಮಾಹಿತಿ ನೀಡಿದೆ ಚಿತ್ರತಂಡ. ಎಲ್ಲೆಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಪ್ರಾರಂಭವಾಗಲಿದೆ? ಎಂದಿನಿಂದ? ಇಲ್ಲಿದೆ ಮಾಹಿತಿ.

KGF Chapter 2: ಗುರುವಾರದಿಂದ ‘ಕೆಜಿಎಫ್ 2’ ಅಡ್ವಾನ್ಸ್ ಬುಕ್ಕಿಂಗ್ ಆರಂಭ; ಎಲ್ಲೆಲ್ಲಿ? ಇಲ್ಲಿದೆ ನೋಡಿ
‘ಕೆಜಿಎಫ್ ಚಾಪ್ಟರ್ 2’ ಪೋಸ್ಟರ್
TV9 Web
| Edited By: |

Updated on:Apr 06, 2022 | 4:36 PM

Share

ಯಶ್ (Yash) ನಟನೆಯ ‘ಕೆಜಿಎಫ್ 2’ (KGF Chapter 2) ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗೊಸಿಕೊಂಡಿದೆ. ಪ್ರಸ್ತುತ ಮುಂಬೈನಲ್ಲಿರುವ ಚಿತ್ರತಂಡ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದೆ. ಈ ನಡುವೆ ಚಿತ್ರದ ರಿಲೀಸ್ ಬಗ್ಗೆ ಪ್ರತಿದಿನವೂ ಹೊಸ ಅಪ್ಡೇಟ್​ಗಳನ್ನು ಘೋಷಿಸಲಾಗುತ್ತಿದೆ. ಇದುವರೆಗೆ ವಿದೇಶಗಳಲ್ಲಿ ಚಿತ್ರ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳುತ್ತಿತ್ತು. ಬ್ರಿಟನ್​ನಲ್ಲಿ ದಾಖಲೆಯ ಮಟ್ಟದಲ್ಲಿ ಟಿಕೆಟ್ ಕೂಡ ಮಾರಾಟವಾಗಿತ್ತು. ಇದೀಗ ಭಾರತದ ಹಲವು ಭಾಗಗಳಲ್ಲಿ ಮುಂಗಡವಾಗಿ ಟಿಕೆಟ್ ಬುಕ್ಕಿಂಗ್​ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ‘ಕೆಜಿಎಫ್ 2’ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ (Hombale Films) ಟ್ವಿಟರ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಕೇರಳ, ತಮಿಳುನಾಡು ಹಾಗೂ ಉತ್ತರ ಭಾರತದಲ್ಲಿ ನಾಳೆಯಿಂದ ಅಂದರೆ ಏಪ್ರಿಲ್ 7ರಿಂದ ಅಡ್ವಾನ್ಸ್ ಬುಕ್ಕಿಂಗ್ ಆರಂಭಿಸಲಾಗುವುದು ಎಂದು ಘೋಷಿಸಿದೆ.

ಬುಕ್​ಮೈಶೋ ಹಾಗೂ ಪೇಟಿಎಂ ಮೂಲಕ ನಾಳೆಯಿಂದ (ಏ.7)  ಕೇರಳ, ತಮಿಳುನಾಡು ಹಾಗೂ ಉತ್ತರ ಭಾರತದಲ್ಲಿ ಟಿಕೆಟ್​ಗಳು ಅಡ್ವಾನ್ಸ್​ ಬುಕ್ಕಿಂಗ್​ಗೆ ಲಭ್ಯವಿರುತ್ತವೆ’ ಎಂದು ಹೊಂಬಾಳೆ ಫಿಲ್ಮ್ಸ್ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಇಲ್ಲಿದೆ:

ಕರ್ನಾಟಕದಲ್ಲಿ ರಿಲೀಸ್ ಯಾವಾಗ? ಫ್ಯಾನ್ಸ್ ಪ್ರಶ್ನೆ:

‘ಕೆಜಿಎಫ್ 2’ ಚಿತ್ರತಂಡ ಇದುವರೆಗೆ ಬಹುತೇಕ ಎಲ್ಲೆಡೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವನ್ನು ಘೋಷಿಸಿದೆ. ಆದರೆ ಇನ್ನೂ ಕರ್ನಾಟಕದ ಬಗ್ಗೆ ಅಧಿಕೃತವಾಗಿ ತಿಳಿಸಿಲ್ಲ. ಅಭಿಮಾನಿಗಳು ಈ ಬಗ್ಗೆ ಕುತೂಹಲದಿಂದ ಪ್ರಶ್ನಿಸಿದ್ದಾರೆ. ‘‘ದೀರ್ಘಕಾಲದಿಂದ ಕಾಯುತ್ತಿದ್ದೇವೆ, ಆದಷ್ಟು ಬೇಗ ಅಡ್ವಾನ್ಸ್ ಬುಕ್ಕಿಂಗ್ ಓಪನ್ ಮಾಡಿ’’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೋರಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಕರ್ನಾಟಕದಲ್ಲಿ ಟಿಕೆಟ್ ಬುಕ್ಕಿಂಗ್ ಆರಂಭದ ಬಗ್ಗೆ ಚಿತ್ರತಂಡ ಸದ್ಯದಲ್ಲೇ ಮಾಹಿತಿ ನೀಡುವ ನಿರೀಕ್ಷೆಗಳಿವೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ದೊಡ್ಡ ತಾರಾಗಣ ಇದೆ. ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ಚಿತ್ರದಲ್ಲಿ ನಟಿಸಿದ್ದಾರೆ. ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಏಪ್ರಿಲ್ 14ರಂದು ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ಗ್ರೀಸ್​ನಲ್ಲಿ ತೆರೆಕಾಣಲಿರುವ ಮೊದಲ ದಕ್ಷಿಣ ಭಾರತೀಯ ಚಿತ್ರ ಕೆಜಿಎಫ್ 2; ರಿಲೀಸ್​ಗೂ ಮುನ್ನ ಹಲವು ದಾಖಲೆ ಬರೆದ ಯಶ್​ ಚಿತ್ರ

Gagana Nee: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ‘ಗಗನ ನೀ..’ ರಿಲೀಸ್​

Published On - 4:27 pm, Wed, 6 April 22

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!