AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್; ಕಾಡಿತ್ತು ಆ ಒಂದು ಭಯ

‘ಕೆಜಿಎಫ್ 2’ ಚಿತ್ರದ ಯಶ್ ಮತ್ತು ಶ್ರೀನಿಧಿ ಶೆಟ್ಟಿ ಬಾಲಿವುಡ್ ರಾಮಾಯಣದಲ್ಲಿ ಒಟ್ಟಿಗೆ ನಟಿಸುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಶ್ರೀನಿಧಿ ಅವರಿಗೆ ಸೀತೆಯ ಪಾತ್ರ ನೀಡುವ ಯೋಜನೆ ಇತ್ತು. ಆದರೆ ಅದು ಫಲಿಸಲಿಲ್ಲ. ಬಳಿಕ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀನಿಧಿ ಅವರು ಈಗ 'ಹಿಟ್ 3' ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್; ಕಾಡಿತ್ತು ಆ ಒಂದು ಭಯ
ಶ್ರೀನಿಧಿ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Apr 25, 2025 | 6:58 AM

Share

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ (Yash) ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ರಾಕಿಭಾಯ್​ನ ಪತ್ನಿ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದರು. ಈ ಜೋಡಿಯನ್ನು ಮತ್ತೆ ತೆರೆಮೇಲೆ ಒಂದು ಮಾಡುವ ಪ್ಲ್ಯಾನ್ ಬಾಲಿವುಡ್​ನಲ್ಲಿ ನಡೆದಿತ್ತು. ಹಾಗಂತ ಅಲ್ಲಿಯೂ ಇವರನ್ನು ಹೀರೋ-ಹೀರೋಯಿನ್ ಆಗಿ ಮಾಡುವ ಆಲೋಚನೆ ಇರಲಿಲ್ಲ. ಯಶ್ ನೆಗೆಟಿವ್ ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಅವರದ್ದು ಹೀರೋಯಿನ್ ಪಾತ್ರ. ಆದರೆ, ಪ್ಲ್ಯಾನ್ ಸಕ್ಸಸ್ ಆಗಲೇ ಇಲ್ಲ. ಹಾಗಾದರೆ ಯಾವುದು ಆ ಸಿನಿಮಾ? ‘ರಾಮಾಯಣ’.

ಶ್ರೀನಿಧಿ ಶೆಟ್ಟಿ ಅವರು ‘ಹಿಟ್ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 1ರಂದು ಚಿತ್ರ ತೆರೆಗೆ ಬರಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಇದೆ. ಈ ಚಿತ್ರಕ್ಕೆ ನಾನಿ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಸೀತಾ ಮಾತೆಯ ಪಾತ್ರದ ಆಫರ್ ಮೊದಲು ಹೋಗಿದ್ದು ಶ್ರೀನಿಧಿ ಶೆಟ್ಟಿಗೆ ಅನ್ನೋದು ವಿಶೇಷ.

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಅವರ ಪರ್ಫಾರ್ಮೆನ್ಸ್​ನ ಬಾಲಿವುಡ್ ಮಂದಿ ನೋಡಿದ್ದಾರೆ. ಯಶ್ ಅವರು ರಾವಣನ ಪಾತ್ರ ಮಾಡುತ್ತಾರೆ ಎಂದಾಗ, ಶ್ರೀನಿಧಿ ಶೆಟ್ಟಿಗೆ ಸೀತೆಯ ಪಾತ್ರ ಕೊಡುವ ಬಗ್ಗೆ ಚರ್ಚೆ ನಡೆದಿದೆ. ಶ್ರೀನಿಧಿ ಶೆಟ್ಟಿ ಅವರು ಆಡಿಷನ್ ಕೊಟ್ಟು, ಸ್ಕ್ರೀನ್ ಟೆಸ್ಟ್​ನಲ್ಲೂ ಭಾಗಿ ಆದರು. ಮೂರು ದೃಶ್ಯಗಳಿಗೆ ಅವರು ತಯಾರಿ ಮಾಡಿಕೊಂಡಿದ್ದರು. ಅವರ ಸ್ಕ್ರೀನ್ ಟೆಸ್ಟ್ ನೋಡಿ ತಂಡದವರು ಖುಷಿ ಆಗಿದ್ದರು. ಆದರೆ, ಅವರಿಗೆ ಒಂದು ಭಯ ಕಾಡಿತ್ತು.

ಇದನ್ನೂ ಓದಿ
Image
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

‘ಕೆಜಿಎಫ್ 2’ ಚಿತ್ರದಲ್ಲಿ ನಟಿಸಿದ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಜೋಡಿ ಪ್ರೇಕ್ಷಕರಿಗೆ ಸಾಕಷ್ಟು ಇಷ್ಟ ಆಯಿತು. ಈಗ ‘ರಾಮಾಯಣ’ ಚಿತ್ರದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ ನಿಜ. ಆದರೆ, ವೈರಿಗಳಾಗಿ. ಇದನ್ನು ತಂಡದವರು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಹೀಗಾಗಿ, ಸಿನಿಮಾ ತಂಡದವರು ಈ ಆಲೋಚನೆಯನ್ನು ಕೈ ಬಿಟ್ಟರು ಎನ್ನಲಾಗಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಬಳಿಕ ಶ್ರೀನಿಧಿ ಶೆಟ್ಟಿ ಸೈಲೆಂಟ್; ಈಗ ಕನ್ನಡದ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ

ಆ ಬಳಿಕ ಸಿನಿಮಾ ತಂಡದವರು ಸಾಯಿ ಪಲ್ಲವಿ ಅವರನ್ನು ಅಪ್ರೋಚ್ ಮಾಡಿದರು. ಅವರ ಸ್ಕ್ರಿನ್ ಟೆಸ್ಟ್​ನಲ್ಲಿ ಪಾಸ್ ಆದರು. ಶ್ರೀನಿಧಿ ಕೂಡ ಸಾಯಿ ಪಲ್ಲವಿ ಅವರ ಆಯ್ಕೆಯನ್ನು ಬಾಯ್ತುಂಬ ಹೊಗಳಿದ್ದಾರೆ. ‘ಹಿಟ್ 3’ ಮೂಲಕ ಶ್ರೀನಿಧಿ ಟಾಲಿವುಡ್​​ಗೆ ಕಾಲಿಟ್ಟಿದ್ದು ಗೆಲ್ಲುವ ಭರವಸೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ