AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್; ಕಾಡಿತ್ತು ಆ ಒಂದು ಭಯ

‘ಕೆಜಿಎಫ್ 2’ ಚಿತ್ರದ ಯಶ್ ಮತ್ತು ಶ್ರೀನಿಧಿ ಶೆಟ್ಟಿ ಬಾಲಿವುಡ್ ರಾಮಾಯಣದಲ್ಲಿ ಒಟ್ಟಿಗೆ ನಟಿಸುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಶ್ರೀನಿಧಿ ಅವರಿಗೆ ಸೀತೆಯ ಪಾತ್ರ ನೀಡುವ ಯೋಜನೆ ಇತ್ತು. ಆದರೆ ಅದು ಫಲಿಸಲಿಲ್ಲ. ಬಳಿಕ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ. ಶ್ರೀನಿಧಿ ಅವರು ಈಗ 'ಹಿಟ್ 3' ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಕೆಜಿಎಫ್ 2’ ಜೋಡಿನ ಬಾಲಿವುಡ್​ನಲ್ಲಿ ಒಟ್ಟಿಗೆ ತರಲು ನಡೆದಿತ್ತು ಪ್ಲ್ಯಾನ್; ಕಾಡಿತ್ತು ಆ ಒಂದು ಭಯ
ಶ್ರೀನಿಧಿ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Apr 25, 2025 | 6:58 AM

Share

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ (Yash) ಅವರು ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ರಾಕಿಭಾಯ್​ನ ಪತ್ನಿ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದರು. ಈ ಜೋಡಿಯನ್ನು ಮತ್ತೆ ತೆರೆಮೇಲೆ ಒಂದು ಮಾಡುವ ಪ್ಲ್ಯಾನ್ ಬಾಲಿವುಡ್​ನಲ್ಲಿ ನಡೆದಿತ್ತು. ಹಾಗಂತ ಅಲ್ಲಿಯೂ ಇವರನ್ನು ಹೀರೋ-ಹೀರೋಯಿನ್ ಆಗಿ ಮಾಡುವ ಆಲೋಚನೆ ಇರಲಿಲ್ಲ. ಯಶ್ ನೆಗೆಟಿವ್ ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಅವರದ್ದು ಹೀರೋಯಿನ್ ಪಾತ್ರ. ಆದರೆ, ಪ್ಲ್ಯಾನ್ ಸಕ್ಸಸ್ ಆಗಲೇ ಇಲ್ಲ. ಹಾಗಾದರೆ ಯಾವುದು ಆ ಸಿನಿಮಾ? ‘ರಾಮಾಯಣ’.

ಶ್ರೀನಿಧಿ ಶೆಟ್ಟಿ ಅವರು ‘ಹಿಟ್ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 1ರಂದು ಚಿತ್ರ ತೆರೆಗೆ ಬರಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಇದೆ. ಈ ಚಿತ್ರಕ್ಕೆ ನಾನಿ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಸೀತಾ ಮಾತೆಯ ಪಾತ್ರದ ಆಫರ್ ಮೊದಲು ಹೋಗಿದ್ದು ಶ್ರೀನಿಧಿ ಶೆಟ್ಟಿಗೆ ಅನ್ನೋದು ವಿಶೇಷ.

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಅವರ ಪರ್ಫಾರ್ಮೆನ್ಸ್​ನ ಬಾಲಿವುಡ್ ಮಂದಿ ನೋಡಿದ್ದಾರೆ. ಯಶ್ ಅವರು ರಾವಣನ ಪಾತ್ರ ಮಾಡುತ್ತಾರೆ ಎಂದಾಗ, ಶ್ರೀನಿಧಿ ಶೆಟ್ಟಿಗೆ ಸೀತೆಯ ಪಾತ್ರ ಕೊಡುವ ಬಗ್ಗೆ ಚರ್ಚೆ ನಡೆದಿದೆ. ಶ್ರೀನಿಧಿ ಶೆಟ್ಟಿ ಅವರು ಆಡಿಷನ್ ಕೊಟ್ಟು, ಸ್ಕ್ರೀನ್ ಟೆಸ್ಟ್​ನಲ್ಲೂ ಭಾಗಿ ಆದರು. ಮೂರು ದೃಶ್ಯಗಳಿಗೆ ಅವರು ತಯಾರಿ ಮಾಡಿಕೊಂಡಿದ್ದರು. ಅವರ ಸ್ಕ್ರೀನ್ ಟೆಸ್ಟ್ ನೋಡಿ ತಂಡದವರು ಖುಷಿ ಆಗಿದ್ದರು. ಆದರೆ, ಅವರಿಗೆ ಒಂದು ಭಯ ಕಾಡಿತ್ತು.

ಇದನ್ನೂ ಓದಿ
Image
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

‘ಕೆಜಿಎಫ್ 2’ ಚಿತ್ರದಲ್ಲಿ ನಟಿಸಿದ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಜೋಡಿ ಪ್ರೇಕ್ಷಕರಿಗೆ ಸಾಕಷ್ಟು ಇಷ್ಟ ಆಯಿತು. ಈಗ ‘ರಾಮಾಯಣ’ ಚಿತ್ರದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ ನಿಜ. ಆದರೆ, ವೈರಿಗಳಾಗಿ. ಇದನ್ನು ತಂಡದವರು ಒಪ್ಪಿಕೊಳ್ಳುವ ಸಾಧ್ಯತೆ ಕಡಿಮೆ. ಹೀಗಾಗಿ, ಸಿನಿಮಾ ತಂಡದವರು ಈ ಆಲೋಚನೆಯನ್ನು ಕೈ ಬಿಟ್ಟರು ಎನ್ನಲಾಗಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಬಳಿಕ ಶ್ರೀನಿಧಿ ಶೆಟ್ಟಿ ಸೈಲೆಂಟ್; ಈಗ ಕನ್ನಡದ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ

ಆ ಬಳಿಕ ಸಿನಿಮಾ ತಂಡದವರು ಸಾಯಿ ಪಲ್ಲವಿ ಅವರನ್ನು ಅಪ್ರೋಚ್ ಮಾಡಿದರು. ಅವರ ಸ್ಕ್ರಿನ್ ಟೆಸ್ಟ್​ನಲ್ಲಿ ಪಾಸ್ ಆದರು. ಶ್ರೀನಿಧಿ ಕೂಡ ಸಾಯಿ ಪಲ್ಲವಿ ಅವರ ಆಯ್ಕೆಯನ್ನು ಬಾಯ್ತುಂಬ ಹೊಗಳಿದ್ದಾರೆ. ‘ಹಿಟ್ 3’ ಮೂಲಕ ಶ್ರೀನಿಧಿ ಟಾಲಿವುಡ್​​ಗೆ ಕಾಲಿಟ್ಟಿದ್ದು ಗೆಲ್ಲುವ ಭರವಸೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ