AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಸಿಂಗ್ ಕಾನ್ಸರ್ಟ್​ನಲ್ಲಿ ಯಶ್, ಕನ್ನಡದಲ್ಲಿ ಹಾಡಿ ಎಂದ ರಾಕಿಂಗ್ ಸ್ಟಾರ್

Yash: ಹನಿ ಸಿಂಗ್​ ಅವರ ಲೈವ್ ಕಾನ್ಸರ್ಟ್​ನಲ್ಲಿ ಶೋ ಸ್ಟಾಪರ್ ರೀತಿ ಅದ್ಧೂರಿ ಎಂಟ್ರಿ ಕೊಟ್ಟ ನಟ ಯಶ್ ವೇದಿಕೆ ಮೇಲೆ ಕನ್ನಡದಿಲ್ಲಿಯೇ ಮಾತನಾಡಿ, ಗಾಯಕ ಹನಿ ಸಿಂಗ್ ಅವರಿಗೆ ಸ್ವಾಗತ ಕೋರಿದರು. ‘ಎಲ್ಲರಿಗೂ ನಮಸ್ಕಾರ, ಮೊದಲು ಇವರಿಗೆ ಸ್ವಾಗತ ಕೋರೋಣ, ನಿಮಗೆ ಬೆಂಗಳೂರಿಗೆ ಸ್ವಾಗತ’ ಎಂದು ಹನಿಸಿಂಗ್ ಅವರಿಗೆ ಸ್ವಾಗತ ಕೋರಿದರು.

ಹನಿಸಿಂಗ್ ಕಾನ್ಸರ್ಟ್​ನಲ್ಲಿ ಯಶ್, ಕನ್ನಡದಲ್ಲಿ ಹಾಡಿ ಎಂದ ರಾಕಿಂಗ್ ಸ್ಟಾರ್
Yash Honey Singh
ಮಂಜುನಾಥ ಸಿ.
|

Updated on: Mar 23, 2025 | 9:26 AM

Share

ಲೈವ್ ಕಾನ್ಸರ್ಟ್​ಗಳು ಏಕಾ ಏಕಿ ಬೂಮ್ ಪಡೆದುಕೊಂಡಿವೆ ಭಾರತದಲ್ಲಿ. ದಿಲ್​ಜೀತ್ ದೊಸ್ಸಾಂಜ್ ಅವರಿಗೆ ದೊರೆತ ಅಭೂತಪೂರ್ವ ಯಶಸ್ಸಿನಿಂದ ಪ್ರೇರಿತರಾಗಿ ಹಲವಾರು ಸಂಗೀತ ನಿರ್ದೇಶಕರು, ಗಾಯಕರು, ರ್ಯಾಪರ್​ಗಳು ಒಂದರ ಹಿಂದೊಂದರಂತೆ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ ಮಾಡುತ್ತಿದ್ದಾರೆ. ಈ ಲೈವ್ ಕಾನ್ಸರ್ಟ್​ಗಳಿಗೆ ಖ್ಯಾತ ಸಿನಿಮಾ ನಟರನ್ನು ಅತಿಥಿಗಳಾಗಿ ವೇದಿಕೆಗೆ ಕರೆಸುವ ಪರಿಪಾಠವೂ ಇತ್ತೀಚೆಗೆ ಸೃಷ್ಟಿಯಾಗಿದೆ. ನಿನ್ನೆಯಷ್ಟೆ ಖ್ಯಾತ ರ್ಯಾಪರ್, ಗಾಯಕ ಹನಿಸಿಂಗ್ ಅವರ ಲೈವ್ ಕಾನ್ಸರ್ಟ್ ಬಲು ಅದ್ಧೂರಿಯಾಗಿ ಬೆಂಗಳೂರಿನಲ್ಲಿ ನಡೆಯಿತು. ಕಾನ್ಸರ್ಟ್​ನಲ್ಲಿ ಅತಿಥಿಯಾಗಿ ನಟ ಯಶ್ ಭಾಗವಹಿಸಿದ್ದರು.

ಹನಿ ಸಿಂಗ್​ ಅವರ ಲೈವ್ ಕಾನ್ಸರ್ಟ್​ನಲ್ಲಿ ಶೋ ಸ್ಟಾಪರ್ ರೀತಿ ಅದ್ಧೂರಿ ಎಂಟ್ರಿ ಕೊಟ್ಟ ನಟ ಯಶ್ ವೇದಿಕೆ ಮೇಲೆ ಕನ್ನಡದಿಲ್ಲಿಯೇ ಮಾತನಾಡಿ, ಗಾಯಕ ಹನಿ ಸಿಂಗ್ ಅವರಿಗೆ ಸ್ವಾಗತ ಕೋರಿದರು. ‘ಎಲ್ಲರಿಗೂ ನಮಸ್ಕಾರ, ಮೊದಲು ಇವರಿಗೆ ಸ್ವಾಗತ ಕೋರೋಣ, ನಿಮಗೆ ಬೆಂಗಳೂರಿಗೆ ಸ್ವಾಗತ’ ಎಂದು ಹನಿಸಿಂಗ್ ಅವರಿಗೆ ಸ್ವಾಗತ ಕೋರಿದರು. ಬಳಿಕ ಹನಿ ಸಿಂಗ್ ಅವರಿಗೆ, ‘ನೀವು ಕನ್ನಡದಲ್ಲಿಯೂ ಹಾಡು ಹಾಡಬೇಕು’ ಎಂದು ಒತ್ತಾಯಿಸಿದರು. ಅದಕ್ಕೆ ಹನಿ ಸಿಂಗ್, ‘ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡು ಹಾಡುವುದಾಗಿ’ ಹೇಳಿದರು.

ಇದನ್ನೂ ಓದಿ:ಮೂವರ ಸ್ಫೋಟಕ ಅರ್ಧಶತಕ… ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಬೌಲರ್​ಗೆ..!

ನಟ ಯಶ್, ಅವರು ಹನಿ ಸಿಂಗ್ ಕಾನ್ಸರ್ಟ್​ಗೆ ಬಂದಿದ್ದು ಅಲ್ಲಿ ನೆರೆದಿದ್ದವರಿಗೆ ಅಚ್ಚರಿ ಮೂಡಿಸಿತು. ಯಶ್, ಹನಿ ಸಿಂಗ್ ಕಾನ್ಸರ್ಟ್​ನಲ್ಲಿ ಭಾಗಿ ಆಗುತ್ತಾರೆ ಎಂಬ ಯಾವುದೇ ಮುನ್ಸೂಚನೆ ಇರಲಿಲ್ಲ. ಈಗ ಯಶ್, ಅವರು ಹನಿಸಿಂಗ್ ಅವರ ಕಾನ್ಸರ್ಟ್​ಗೆ ನ ವೇದಿಕೆಗೆ ಬಂದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಹಿಂದಿ ಹಾಡುಗಳ ಕಾನ್ಸರ್ಟ್​ನಲ್ಲಿ ಕನ್ನಡದಲ್ಲಿ ಮಾತನಾಡಿದ್ದು ಮಾತ್ರವಲ್ಲದೆ, ಗಾಯಕನನ್ನು ಕನ್ನಡದ ಹಾಡುಗಳನ್ನು ಹಾಡಿ ಎಂದು ಒತ್ತಾಯಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹನಿ ಸಿಂಗ್ ಸಹ ತಮ್ಮ ಇನ್​ಸ್ಟಾಗ್ರಾಂನಲ್ಲಿ ಯಶ್​ ಅವರ ಚಿತ್ರ, ವಿಡಿಯೋಗಳನ್ನು ಹಂಚಿಕೊಂಡಿದ್ದು, ‘ನನ್ನ ಬೆಂಗಳೂರು ಕಾನ್ಸರ್ಟ್​ಗೆ ಬಂದು ಹರಸಿದ್ದಕ್ಕೆ ನನ್ನ ಸಹೋದರ ಯಶ್​ಗೆ ಧನ್ಯವಾದ’ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ದಿಲ್ಜೀತ್ ದೊಸ್ಸಾಂಜ್ ಬೆಂಗಳೂರಿನಲ್ಲಿ ಲೈವ್ ಕಾನ್ಸರ್ಟ್ ಮಾಡಿದಾಗ ದೀಪಿಕಾ ಪಡುಕೋಣೆಯನ್ನು ಸರ್ಪ್ರೈಸ್ ಅತಿಥಿಯಾಗಿ ಕರೆಸಿದ್ದರು. ದೀಪಿಕಾ ಸಹ ಅಂದು ದಿಲ್ಜೀತ್​ಗೆ ಕೆಲ ಕನ್ನಡ ಪದಗಳನ್ನು ಹೇಳಿಕೊಟ್ಟಿದ್ದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು