AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ಪರದೆಯಲ್ಲಿ ಮತ್ತೆ ಕೆಜಿಎಫ್ 1, ಕೆಜಿಎಫ್ 2

ನಟ ಯಶ್​ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಯಾವುದೇ ಅದ್ದೂರಿ, ಆಡಂಬರ ಬೇಡ ಎಂದು ಯಶ್ ಈಗಾಗಲೇ ಹೇಳಿದ್ದಾರೆ. ಯಶ್ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅದಕ್ಕೆ ಕಾರಣ ಆದ ‘ಕೆಜಿಎಫ್​: ಚಾಪ್ಟರ್ 1’ ಮತ್ತು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ.

ಯಶ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ಪರದೆಯಲ್ಲಿ ಮತ್ತೆ ಕೆಜಿಎಫ್ 1, ಕೆಜಿಎಫ್ 2
Yash
ಮದನ್​ ಕುಮಾರ್​
|

Updated on: Jan 07, 2025 | 6:23 PM

Share

ಜನವರಿ 8 ಎಂದರೆ ಯಶ್ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ. ಕನ್ನಡ ಚಿತ್ರರಂಗವನ್ನು ಬೇರೆ ಹಂತಕ್ಕೆ ತೆಗೆದುಕೊಂಡ ಹೋದ ಯಶ್​ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಡಗರ. ವಿವಿಧ ರೀತಿಯ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಫ್ಯಾನ್ಸ್​ ಆಚರಿಸುತ್ತಾರೆ. ಇನ್ನು, ಸಿನಿಮಾ ಮೂಲಕವೂ ಯಶ್ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮಿಸಲಿದ್ದಾರೆ. ಜನವರಿ 8ರಂದು ದೊಡ್ಡ ಪರದೆ ಮೇಲೆ ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾವನ್ನು ನೋಡುವ ಅವಕಾಶ ಸಿಗುತ್ತಿದೆ.

ಯಶ್ ಅವರು ‘ಕೆಜಿಎಫ್ 1’ ಸಿನಿಮಾದಲ್ಲಿ ನಟಿಸುವ ತನಕ ಕೇವಲ ಕರ್ನಾಟಕಕ್ಕೆ ಸೀಮಿತವಾಗಿದ್ದರು. ‘ಕೆಜಿಎಫ್​: ಚಾಪ್ಟರ್​ 1’ ಬಿಡುಗಡೆ ಆದಾಗ ಬೇರೆ ಬೇರೆ ರಾಜ್ಯಗಳಲ್ಲಿ ಅವರ ಹೆಸರು ಚಿರಪರಿಚಿತವಾಯಿತು. ಪ್ಯಾನ್ ಇಂಡಿಯಾ ಸ್ಟಾರ್​ ಆಗಿ ಅವರು ಹೊರಹೊಮ್ಮಿದರು. ‘ಕೆಜಿಎಫ್​: ಚಾಪ್ಟರ್​ 2’ ರಿಲೀಸ್ ಆದಾಗ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಯಿತು. ಆ ಸಿನಿಮಾಗಳ ಹವಾ ಈಗಲೂ ಇದೆ.

ಇದನ್ನೂ ಓದಿ: ಫ್ಲೆಕ್ಸ್, ಬ್ಯಾನರ್ ಆಡಂಬರ ಬೇಡ: ಯಶ್ ಹುಟ್ಟುಹಬ್ಬಕ್ಕೆ ಮುಖ್ಯವಾದ ಸಂದೇಶ

ಯಶ್ ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಕೆಲವು ಚಿತ್ರಮಂದಿರಗಳಲ್ಲಿ ‘ಕೆಜಿಎಫ್ ಚಾಪ್ಟರ್​ 1’ ಮತ್ತು ‘ಕೆಜಿಫ್​ ಚಾಪ್ಟರ್​ 2’ ಸಿನಿಮಾವನ್ನು ರೀ-ರಿಲೀಸ್ ಮಾಡಲಾಗಿದೆ. ಬುಕಿಂಗ್ ಕೂಡ ಆರಂಭ ಆಗಿದೆ. ಈ ಮೊದಲು ಚಿತ್ರಮಂದಿರಗಳಲ್ಲಿ ಮಿಸ್ ಮಾಡಿಕೊಂಡಿದ್ದವರು ಈಗ ಈ ಸಿನಿಮಾಗಳನ್ನು ನೋಡಬಹುದು. ಈಗಾಗಲೇ ನೋಡಿದ್ದರೂ ಕೂಡ ಮತ್ತೊಮ್ಮೆ ದೊಡ್ಡ ಪರದೆಯಲ್ಲಿ ಮನರಂಜನೆ ಪಡೆಯಬೇಕು ಎಂಬ ಅಭಿಮಾನಿಗಳಿಗೂ ಇದು ಅಪರೂಪದ ಚಾನ್ಸ್.

‘ಕೆಜಿಎಫ್​ 2’ ತೆರೆಕಂಡು ಎರಡೂ ಮುಕ್ಕಾಲು ವರ್ಷ ಕಳೆದಿದೆ. ಹಾಗಾಗಿ ಬಿಗ್ ಸ್ಕ್ರೀನ್​ನಲ್ಲಿ ಯಶ್ ಅವರನ್ನು ಫ್ಯಾನ್ಸ್ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಹಾಗಾಗಿ ಅವರು ಫ್ಯಾನ್ಸ್ ಜೊತೆ ಈ ಬಾರಿಯ ಜನ್ಮದಿನವನ್ನು ಸೆಲೆಬ್ರೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಅಭಿಮಾನಿಗಳಿಗೆ ಅವರು ನಿರಾಸೆ ಮಾಡುತ್ತಿಲ್ಲ. ಜನವರಿ 8ರಂದು ಟಾಕ್ಸಿಕ್ ಸಿನಿಮಾದ ಟೀಸರ್​ ಬಿಡುಗಡೆ ಆಗಲಿದೆ. ಅದರ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರಕ್ಕೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ