ಯಶ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ಪರದೆಯಲ್ಲಿ ಮತ್ತೆ ಕೆಜಿಎಫ್ 1, ಕೆಜಿಎಫ್ 2

ನಟ ಯಶ್​ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಯಾವುದೇ ಅದ್ದೂರಿ, ಆಡಂಬರ ಬೇಡ ಎಂದು ಯಶ್ ಈಗಾಗಲೇ ಹೇಳಿದ್ದಾರೆ. ಯಶ್ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅದಕ್ಕೆ ಕಾರಣ ಆದ ‘ಕೆಜಿಎಫ್​: ಚಾಪ್ಟರ್ 1’ ಮತ್ತು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ.

ಯಶ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ಪರದೆಯಲ್ಲಿ ಮತ್ತೆ ಕೆಜಿಎಫ್ 1, ಕೆಜಿಎಫ್ 2
Yash
Follow us
ಮದನ್​ ಕುಮಾರ್​
|

Updated on: Jan 07, 2025 | 6:23 PM

ಜನವರಿ 8 ಎಂದರೆ ಯಶ್ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ. ಕನ್ನಡ ಚಿತ್ರರಂಗವನ್ನು ಬೇರೆ ಹಂತಕ್ಕೆ ತೆಗೆದುಕೊಂಡ ಹೋದ ಯಶ್​ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಡಗರ. ವಿವಿಧ ರೀತಿಯ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಫ್ಯಾನ್ಸ್​ ಆಚರಿಸುತ್ತಾರೆ. ಇನ್ನು, ಸಿನಿಮಾ ಮೂಲಕವೂ ಯಶ್ ಜನ್ಮದಿನವನ್ನು ಅಭಿಮಾನಿಗಳು ಸಂಭ್ರಮಿಸಲಿದ್ದಾರೆ. ಜನವರಿ 8ರಂದು ದೊಡ್ಡ ಪರದೆ ಮೇಲೆ ‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾವನ್ನು ನೋಡುವ ಅವಕಾಶ ಸಿಗುತ್ತಿದೆ.

ಯಶ್ ಅವರು ‘ಕೆಜಿಎಫ್ 1’ ಸಿನಿಮಾದಲ್ಲಿ ನಟಿಸುವ ತನಕ ಕೇವಲ ಕರ್ನಾಟಕಕ್ಕೆ ಸೀಮಿತವಾಗಿದ್ದರು. ‘ಕೆಜಿಎಫ್​: ಚಾಪ್ಟರ್​ 1’ ಬಿಡುಗಡೆ ಆದಾಗ ಬೇರೆ ಬೇರೆ ರಾಜ್ಯಗಳಲ್ಲಿ ಅವರ ಹೆಸರು ಚಿರಪರಿಚಿತವಾಯಿತು. ಪ್ಯಾನ್ ಇಂಡಿಯಾ ಸ್ಟಾರ್​ ಆಗಿ ಅವರು ಹೊರಹೊಮ್ಮಿದರು. ‘ಕೆಜಿಎಫ್​: ಚಾಪ್ಟರ್​ 2’ ರಿಲೀಸ್ ಆದಾಗ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಯಿತು. ಆ ಸಿನಿಮಾಗಳ ಹವಾ ಈಗಲೂ ಇದೆ.

ಇದನ್ನೂ ಓದಿ: ಫ್ಲೆಕ್ಸ್, ಬ್ಯಾನರ್ ಆಡಂಬರ ಬೇಡ: ಯಶ್ ಹುಟ್ಟುಹಬ್ಬಕ್ಕೆ ಮುಖ್ಯವಾದ ಸಂದೇಶ

ಯಶ್ ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಕೆಲವು ಚಿತ್ರಮಂದಿರಗಳಲ್ಲಿ ‘ಕೆಜಿಎಫ್ ಚಾಪ್ಟರ್​ 1’ ಮತ್ತು ‘ಕೆಜಿಫ್​ ಚಾಪ್ಟರ್​ 2’ ಸಿನಿಮಾವನ್ನು ರೀ-ರಿಲೀಸ್ ಮಾಡಲಾಗಿದೆ. ಬುಕಿಂಗ್ ಕೂಡ ಆರಂಭ ಆಗಿದೆ. ಈ ಮೊದಲು ಚಿತ್ರಮಂದಿರಗಳಲ್ಲಿ ಮಿಸ್ ಮಾಡಿಕೊಂಡಿದ್ದವರು ಈಗ ಈ ಸಿನಿಮಾಗಳನ್ನು ನೋಡಬಹುದು. ಈಗಾಗಲೇ ನೋಡಿದ್ದರೂ ಕೂಡ ಮತ್ತೊಮ್ಮೆ ದೊಡ್ಡ ಪರದೆಯಲ್ಲಿ ಮನರಂಜನೆ ಪಡೆಯಬೇಕು ಎಂಬ ಅಭಿಮಾನಿಗಳಿಗೂ ಇದು ಅಪರೂಪದ ಚಾನ್ಸ್.

‘ಕೆಜಿಎಫ್​ 2’ ತೆರೆಕಂಡು ಎರಡೂ ಮುಕ್ಕಾಲು ವರ್ಷ ಕಳೆದಿದೆ. ಹಾಗಾಗಿ ಬಿಗ್ ಸ್ಕ್ರೀನ್​ನಲ್ಲಿ ಯಶ್ ಅವರನ್ನು ಫ್ಯಾನ್ಸ್ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಹಾಗಾಗಿ ಅವರು ಫ್ಯಾನ್ಸ್ ಜೊತೆ ಈ ಬಾರಿಯ ಜನ್ಮದಿನವನ್ನು ಸೆಲೆಬ್ರೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಅಭಿಮಾನಿಗಳಿಗೆ ಅವರು ನಿರಾಸೆ ಮಾಡುತ್ತಿಲ್ಲ. ಜನವರಿ 8ರಂದು ಟಾಕ್ಸಿಕ್ ಸಿನಿಮಾದ ಟೀಸರ್​ ಬಿಡುಗಡೆ ಆಗಲಿದೆ. ಅದರ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರಕ್ಕೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದು, ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ