AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash Boss: ‘ಬಾಸ್’​ ಸ್ಥಾನ ಪಡೆದುಕೊಂಡ ಯಶ್​; ದೇಶಾದ್ಯಂತ ಟ್ರೆಂಡ್​ ಆಗಿದೆ ಈ ಹೆಸರು

KGF Chapter 2: ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶಾದ್ಯಂತ ಯಶ್​ ಅವರಿಗೆ ಅಭಿಮಾನಿಗಳಿದ್ದಾರೆ. ಎಲ್ಲರೂ ಪ್ರೀತಿಯಿಂದ ಯಶ್​ ಬಾಸ್ ಎಂದು ಕರೆಯಲು ಆರಂಭಿಸಿದ್ದಾರೆ.

Yash Boss: ‘ಬಾಸ್’​ ಸ್ಥಾನ ಪಡೆದುಕೊಂಡ ಯಶ್​; ದೇಶಾದ್ಯಂತ ಟ್ರೆಂಡ್​ ಆಗಿದೆ ಈ ಹೆಸರು
ಯಶ್
TV9 Web
| Edited By: |

Updated on: Apr 14, 2022 | 9:08 AM

Share

ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಬಾಸ್​ ಅಂತ ಕರೆಯೋದು ವಾಡಿಕೆ. ಆದರೆ ಅದೇ ಬಾಸ್​ ಎಂಬ ವಿಚಾರವನ್ನು ಇಟ್ಟುಕೊಂಡು ಕೆಲವೊಮ್ಮೆ ಬೇರೆ ಬೇರೆ ಹೀರೋಗಳ ಫ್ಯಾನ್ಸ್​ ಕಿತ್ತಾಟ ಮಾಡಿಕೊಂಡಿದ್ದುಂಟು. ಅದೇನೇ ಇರಲಿ, ಈಗಂತೂ ನಟ ಯಶ್​ (Yash) ಅವರು ಬಾಸ್​ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಹಲವು ವರ್ಷಗಳ ಪರಿಶ್ರಮದಿಂದ ಮೂಡಿಬಂದ ಅವರ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾ ಬಿಡುಗಡೆ ಆಗಿದೆ. ವಿಶ್ವಾದ್ಯಂತ ಈ ಚಿತ್ರ ಹವಾ ಮಾಡುತ್ತಿದೆ. ಈ ಗೆಲುವಿನಿಂದ ಖುಷಿ ಆಗಿರುವ ಅಭಿಮಾನಿಗಳು ‘ಯಶ್​ ಬಾಸ್​’ (Yash Boss) ಎಂದು ಜೈಕಾರ ಹಾಕುತ್ತಿದ್ದಾರೆ. ಟ್ವಿಟರ್​ನಲ್ಲಿ ಇಂದು (ಏ.14) ಬರೀ ಯಶ್​ ಅವರದ್ದೇ ಆರ್ಭಟ. ಈ ಸಿನಿಮಾಗೆ ಸಂಬಂಧಿಸಿದ ಅನೇಕ ವಿಚಾರಗಳು ಟ್ರೆಂಡ್​ ಆಗುತ್ತಿವೆ. ಆ ಪೈಕಿ #YashBoss ಎಂಬ ಹ್ಯಾಶ್​ ಟ್ಯಾಗ್​ ದೇಶಾದ್ಯಂತ ಗಮನ ಸೆಳೆಯುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಯಶ್​ ಮಾಡಿದ ಸಾಧನೆಗೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಒಟ್ಟಾರೆಯಾಗಿ ಅವರಿಗೆ ಈ ಸಿನಿಮಾದಿಂದ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ.

ಯಶ್​ ನಡೆದು ಬಂದು ಹಾದಿ ಸುಲಭದ್ದಾಗಿರಲಿಲ್ಲ. ಇಂದು ಅವರು ಸೂಪರ್​ ಸ್ಟಾರ್​ ಆಗಿದ್ದಾರೆ. ಆದರೆ ಆರಂಭದ ದಿನಗಳಲ್ಲಿ ಸಖತ್​ ಕಷ್ಟಪಟ್ಟಿದ್ದರು. ಅವಕಾಶಕ್ಕಾಗಿ ಅಲೆದಿದ್ದರು. ಕಿರುತೆರೆ ಧಾರಾವಾಹಿಗಳಲ್ಲಿ ಸಣ್ಣ-ಪುಟ್ಟ ಪಾತ್ರಗಳನ್ನು ಮಾಡಿದ್ದರು. ಬೆಂಗಳೂರಿನಲ್ಲಿ ಉಳಿದುಕೊಳ್ಳಲು ಜಾಗ ಇಲ್ಲದೇ ನೋವು ಅನುಭವಿಸಿದ್ದರು. ಆದರೆ ಅದೇ ಯಶ್​ ಈಗ ‘ಯಶ್​ ಬಾಸ್​’ ಎನಿಸಿಕೊಳ್ಳುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ.

ಎಲ್ಲ ಬಗೆಯ ಪಾತ್ರಗಳನ್ನೂ ಮಾಡಿ ಅವರು​ ಸೈ ಎನಿಸಿಕೊಂಡಿದ್ದಾರೆ. ವೃತ್ತಿಜೀವನದ ಈ ದೀರ್ಘ ಪಯಣದಲ್ಲಿ ಅವರು ಲವರ್​ ಬಾಯ್​ ಆಗಿ ಮಿಂಚಿದರು, ಕಾಮಿಡಿ ಸಿನಿಮಾಗಳನ್ನು ಮಾಡಿ ಗೆದ್ದರು, ಮಾಸ್​ ಹೀರೋ ಆಗಿ ಅಬ್ಬರಿಸಿದರು. ಏನೇ ಮಾಡಿದರೂ ಅದನ್ನು ಪ್ರಾಮಾಣಿಕವಾಗಿ ಮಾಡಿದರು. ಅದೇ ಅವರ ಗೆಲುವಿಗೆ ಕಾರಣ ಎಂದರೂ ತಪ್ಪಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಯಶ್​ ಅವರಿಗೆ ಇರುವ ಗುರಿ ಮತ್ತು ದೂರದೃಷ್ಟಿ ಗಮನಾರ್ಹ. ಕನ್ನಡ ಚಿತ್ರರಂಗವನ್ನು ಬೇರೊಂದು ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಅವರು ಬಹಳ ವರ್ಷಗಳ ಹಿಂದೆಯೇ ಹೇಳಿದ್ದರು. ಆಗಿನ್ನೂ ‘ಕೆಜಿಎಫ್​’ ಸಿನಿಮಾ ಅನೌನ್ಸ್​ ಕೂಡ ಆಗಿರಲಿಲ್ಲ. ಅಂದು ಆಡಿದ ಮಾತನ್ನು ಯಶ್​ ನಿಜ ಮಾಡಿ ತೋರಿಸಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಯಶ್​ ಅವರು ‘ವರ್ಲ್ಡ್​ ಈಸ್​ ಮೈ ಟೆರಿಟರಿ’ ಎಂದು ಡೈಲಾಗ್​ ಹೊಡೆದಿದ್ದಾರೆ. ಈಗ ಅವರು ಚಿತ್ರರಂಗದಲ್ಲಿ ಇಡುತ್ತಿರುವ ಹೆಜ್ಜೆಗಳನ್ನು ನೋಡಿದರೆ ರಿಯಲ್​ ಲೈಫ್​ನಲ್ಲಿಯೂ ಆ ಮಾತನ್ನು ಅವರು ಸಾಬೀತು ಮಾಡುವಂತಿದೆ. ಮೊದಲು ಕೇವಲ ಕನ್ನಡ ಚಿತ್ರರಂಗದ ಹೀರೋ ಆಗಿದ್ದ ಅವರು ಈಗ ಪ್ಯಾನ್​ ಇಂಡಿಯಾ ಹೀರೋ ಆಗಿದ್ದಾರೆ. ವಿದೇಶದಲ್ಲೂ ಅವರ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಾಣತ್ತಿದೆ. ಆ ಮೂಲಕ ಭಾರತದ ಗಡಿಯನ್ನೂ ದಾಟಿ ಅವರು ತಮ್ಮ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ.

ನಿರ್ದೇಶಕ ಪ್ರಶಾಂತ್​ ನೀಲ್​ ಮತ್ತು ನಿರ್ಮಾಪಕ ವಿಜಯ್​ ಕಿರಗಂದೂರು ಅವರ ಜೊತೆ ಸೇರಿ ಯಶ್ ಅವರು ‘ಕೆಜಿಎಫ್​: ಚಾಪ್ಟರ್​ 2’ ಮೂಲಕ​ ದೊಡ್ಡ ಗೆಲುವು ಕಂಡಿದ್ದಾರೆ. ಅವರು ನಟಿಸಲಿರುವ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಜನರಿಗೆ ನಿರೀಕ್ಷೆ ಇದೆ. ‘ಕೆಜಿಎಫ್​ 2’ ರೀತಿಯ ದೈತ್ಯ ಸಿನಿಮಾವನ್ನು ಮಾಡಿದ ಬಳಿಕ ಯಶ್​ ಇಡುವ ಮುಂದಿನ ಹೆಜ್ಜೆ ಇನ್ನೆಷ್ಟು ದೊಡ್ಡದಾಗಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಯಶ್​ ಜೊತೆ ಕೆಲಸ ಮಾಡಲು ಭಾರತೀಯ ಚಿತ್ರರಂಗದ ಅನೇಕ ಘಟಾನುಘಟಿಗಳು ಈಗ ತುದಿಗಾಲಿನಲ್ಲಿ ನಿಂತಿದ್ದಾರೆ. ಅವರ ಕಾಲ್​ಶೀಟ್​ ಪಡೆಯಲು ನಿರ್ಮಾಪಕರು ಹಾತೊರೆಯುತ್ತಿದ್ದಾರೆ.

ಇದನ್ನೂ ಓದಿ:

KGF Chapter 2 Review: ಕೆಜಿಎಫ್​ ಚಾಪ್ಟರ್​ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್​ಗೆ ಧಮಾಕ

KGF Chapter 2 Twitter Review: ಮಧ್ಯರಾತ್ರಿ ನೋಡಿದವರಿಗೆ ‘ಕೆಜಿಎಫ್​ 2’ ಇಷ್ಟ ಆಯ್ತಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್