Yash Birthday: ಯಶ್​​ಗೆ ಬರ್ತ್​ಡೇ ಸಂಭ್ರಮ; ದುಬೈನಲ್ಲಿ ರಾಕಿಂಗ್ ಸ್ಟಾರ್ ಫ್ಯಾಮಿಲಿ

‘ಕೆಜಿಎಫ್ 2’ ಚಿತ್ರದಿಂದ ಯಶ್ ಖ್ಯಾತಿ ವಿಶ್ವಮಟ್ಟಕ್ಕೆ ಹಬ್ಬಿದೆ. ಯಶ್​​ಗೆ ವಿದೇಶದಲ್ಲೂ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಬರ್ತ್​ಡೇಗೆ ವಿದೇಶದಿಂದಲೂ ಶುಭಾಶಯ ಬರುತ್ತಿದೆ.

Yash Birthday: ಯಶ್​​ಗೆ ಬರ್ತ್​ಡೇ ಸಂಭ್ರಮ; ದುಬೈನಲ್ಲಿ ರಾಕಿಂಗ್ ಸ್ಟಾರ್ ಫ್ಯಾಮಿಲಿ
ಯಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 08, 2023 | 6:30 AM

ಯಶ್ (Yash) ಅವರು ಇಂದು (ಜನವರಿ 08) ಬರ್ತ್​​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಹಲವು ಬಾರಿ ಅವರು ಅಭಿಮಾನಿಗಳ ಜತೆಗೂಡಿ ಬರ್ತ್​ಡೇ ಆಚರಣೆ ಮಾಡಿದ್ದಿದೆ. ಈ ಬಾರಿ ಅವರು ಕುಟುಂಬಕ್ಕೆ ಸಮಯ ಮೀಸಲಿಟ್ಟಿದ್ದಾರೆ. ರಾಕಿಂಗ್ ಸ್ಟಾರ್ ಕುಟುಂಬ ವಿದೇಶಕ್ಕೆ ಹಾರಿದೆ. ದುಬೈನಲ್ಲಿ ಇವರು ಬರ್ತ್​ಡೇ (Yash Birthday) ಆಚರಿಸಿಕೊಳ್ಳುತ್ತಿದ್ದಾರೆ. ಆ ಫೋಟೋಗಳನ್ನು ಯಶ್ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಯಶ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ‘ಮೊಗ್ಗಿನ ಮನಸು’ ಚಿತ್ರದ ಮೂಲಕ ಹೀರೋ ಆಗಿ ಬಣ್ಣದ ಲೋಕಕ್ಕೆ ಬಂದರು. ಈ ಸಿನಿಮಾ ಸೂಪರ್​ ಹಿಟ್ ಆಯಿತು. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಯಶ್​ಗೆ ಹಲವು ಆಫರ್​​ಗಳು ಬಂದವು. ‘ಕಿರಾತಕ’ ಸಿನಿಮಾ ಯಶ್​ ವೃತ್ತಿಜೀವನಕ್ಕೆ ಮೈಲೇಜ್ ನೀಡಿತು. 2013ರಲ್ಲಿ ಯಶ್ ಡಬಲ್ ಹಿಟ್ ನೀಡಿದರು. ಅವರ ‘ಗೂಗ್ಲಿ’ ಹಾಗೂ ‘ರಾಜಾಹುಲಿ’ ಚಿತ್ರಗಳು ಯಶಸ್ಸು ಕಂಡವು. ‘ಮಿಸ್ಟರ್​ ಆ್ಯಂಡ್ ಮಿಸಸ್​ ರಾಮಾಚಾರಿ’, ‘ಮಾಸ್ಟರ್​ ಪೀಸ್​’ ಚಿತ್ರಗಳು ಕೂಡ ಗೆದ್ದವು.

2017ರಿಂದ ಇಲ್ಲಿಯವರೆಗೆ ಯಶ್ ನಟನೆಯ ಎರಡು ಸಿನಿಮಾಗಳು ಮಾತ್ರ ತೆರೆಗೆ ಬಂದಿವೆ. ಅದು ‘ಕೆಜಿಎಫ್’ (2018) ಹಾಗೂ ‘ಕೆಜಿಎಫ್ 2’ (2022). ಇದರಿಂದ ಯಶ್ ಖ್ಯಾತಿ ಸಾಕಷ್ಟು ಹೆಚ್ಚಿದೆ. ‘ಕೆಜಿಎಫ್ 2’ ಚಿತ್ರದಿಂದ ಯಶ್ ಖ್ಯಾತಿ ವಿಶ್ವಮಟ್ಟಕ್ಕೆ ಹಬ್ಬಿದೆ. ಯಶ್​​ಗೆ ವಿದೇಶದಲ್ಲೂ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಬರ್ತ್​ಡೇಗೆ ವಿದೇಶದಿಂದಲೂ ಶುಭಾಶಯ ಬರುತ್ತಿದೆ.

ಸಾಮಾಜಿಕ ಕೆಲಸ

ಯಶ್ ಅವರು ಸಾಕಷ್ಟು ಜನಕ್ಕೆ ಸ್ಫೂರ್ತಿ. ಫ್ಯಾನ್ಸ್ ಕೂಡ ಯಶ್​​ನ ಸ್ಫೂರ್ತಿಯಾಗಿಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ಇಂದು ಫ್ಯಾನ್ಸ್ ಹಲವು ಬಗೆಯ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ. ರಕ್ತದಾನ, ಅನ್ನದಾನ ಸೇರಿ ಅನೇಕ ಕೆಲಸಗಳು ಫ್ಯಾನ್ಸ್ ಕಡೆಯಿಂದ ಆಗುತ್ತಿವೆ.

ಯಶ್ ಮುಂದಿನ ಸಿನಿಮಾ ಬಗ್ಗೆ ಕುತೂಹಲ

ಯಶ್ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಿಗೆ ಇದೆ. ಇಂದು ಯಶ್ ಜನ್ಮದಿನ. ಇಂದು ಈ ಬಗ್ಗೆ ಘೋಷಣೆ ಆಗಬಹುದು ಎಂಬುದು ಫ್ಯಾನ್ಸ್ ನಿರೀಕ್ಷೆಯಾಗಿತ್ತು. ಅದಕ್ಕೆ ಇಂದು ಉತ್ತರ ಸಿಗಲಿದೆ. ಈಗಾಗಲೇ ಯಶ್ ಅವರು ‘ನನಗಾಗಿ ಇನ್ನಷ್ಟು ಕಾಯಿರಿ’ ಎಂದು ಹೇಳಿದ್ದಾರೆ. ಹೀಗಾಗಿ, ಯಶ್ ಹೊಸ ಸಿನಿಮಾ ಘೋಷಣೆಗೆ ಮತ್ತಷ್ಟು ಕಾಯಬೇಕಾಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ