AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಬರ್ತ್​ಡೇ ದಿನ ನಡೆದ ಅವಘಡ: ಗಾಯಾಳುಗಳಿಗೂ ಆರ್ಥಿಕ ಸಹಾಯ ಮಾಡಿದ ನಟ

ಅವಘಡದಲ್ಲಿ ಮಂಜುನಾಥ, ಪ್ರಕಾಶ, ಹನುಮಂತ‌ ಹಾಗೂ ನಾಗರಾಜ್ ಗಾಯಗೊಂಡಿದ್ದರು. ಇವರಿಗೆ ಒಂದು ಲಕ್ಷ ರೂಪಾಯಿ ಸಿಕ್ಕಿದೆ. ಈ ವಿಚಾರವನ್ನು ಕುಟುಂಬದವರು ಖಚಿತಪಡಿಸಿದ್ದಾರೆ. ಯಶ್ ಅವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಗಾಯಾಳುಗಳಿಗೂ ಅವರ ಕಡೆಯಿಂದ ಸಹಾಯ ಸಿಕ್ಕಿರುವುದಕ್ಕೆ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಯಶ್ ಬರ್ತ್​ಡೇ ದಿನ ನಡೆದ ಅವಘಡ: ಗಾಯಾಳುಗಳಿಗೂ ಆರ್ಥಿಕ ಸಹಾಯ ಮಾಡಿದ ನಟ
ಯಶ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ರಾಜೇಶ್ ದುಗ್ಗುಮನೆ

Updated on: Feb 03, 2024 | 1:29 PM

ಸೂರಣಗಿ ಗ್ರಾಮದಲ್ಲಿ ಕಳೆದ ತಿಂಗಳು ದೊಡ್ಡ ದುರಂತ ನಡೆದಿತ್ತು. ಯಶ್ (Yash) ಬರ್ತ್​ಡೇಗೂ ಒಂದು ದಿನ ಮೊದಲು ಅಂದರೆ ಜನವರಿ 7ರಂದು ಹುಟ್ಟುಹಬ್ಬದ ಬ್ಯಾನರ್ ನಿಲ್ಲಿಸಲು ಹೋದ ಮೂವರು ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಯಶ್ ತಲಾ ಐದು ಲಕ್ಷ ರೂಪಾಯಿ ನೀಡಿದ್ದರು. ಈಗ ಗಾಯಗೊಂಡ ಕುಟುಂಬಕ್ಕೂ ಯಶ್ ಧನ ಸಹಾಯ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜ.7 ರಂದು ದುರಂತ ನಡೆದಿತ್ತು. ಜ.8 ರಂದು ಯಶ್ ಬರ್ತಡೇ. ಈ ಹಿನ್ನೆಲೆಯಲ್ಲಿ ಹಿಂದಿನ ರಾತ್ರಿ ಕಟೌಟ್ ನಿಲ್ಲಿಸಲು ಹೋದಾಗ ವಿದ್ಯುತ್ ಅವಘಡ ಸಂಭವಿಸಿತ್ತು. ಕಟೌಟ್​ಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲಿ ಹನುಮಂತ‌ ಹರಿಜನ, ಮುರಳಿ ನಡುವಿನಮನಿ ಹಾಗೂ ನವೀನ್ ಗಾಜಿ ಮೃತಪಟ್ಟಿದ್ದರು. ಘಟನೆಯಲ್ಲಿ ಇನ್ನುಳಿದ ನಾಲ್ಕು ಜನ ಯುವಕರಿಗೆ ಗಂಭೀರ ಗಾಯವಾಗಿತ್ತು. ಇವರಿಗೆ ಧನಸಹಾಯ ಸಿಕ್ಕಿದೆ.

ಅವಘಡದಲ್ಲಿ ಮಂಜುನಾಥ, ಪ್ರಕಾಶ, ಹನುಮಂತ‌ ಹಾಗೂ ನಾಗರಾಜ್ ಗಾಯಗೊಂಡಿದ್ದರು. ಇವರಿಗೆ ಒಂದು ಲಕ್ಷ ರೂಪಾಯಿ ಸಿಕ್ಕಿದೆ. ಈ ವಿಚಾರವನ್ನು ಕುಟುಂಬದವರು ಖಚಿತಪಡಿಸಿದ್ದಾರೆ.

ಭೇಟಿ ನೀಡಿದ್ದ ಯಶ್..

ಜನವರಿ 8ರಂದು ಸೂರಣಗಿ ಗ್ರಾಮಕ್ಕೆ ಸ್ವತಃ ಯಶ್ ಅವರೇ ಭೇಟಿ ಕೊಟ್ಟಿದ್ದರು. ಕುಟುಂಬದವರಿಗೆ ಸಾಂತ್ವನ ಹೇಳಿ ಸಹಾಯ ಮಾಡುವ ಭರವಸೆ ನೀಡಿದ್ದರು. ಆ ಬಳಿಕ ಜ.17 ರಂದು ಯಶ್ ಆಪ್ತರು ಮೃತ ಯುವಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಚೆಕ್ ವಿತರಿಸಿದರು. ಈ ವೇಳೆ ಗಾಯಾಳುಗಳ ಬ್ಯಾಂಕ್ ಮಾಹಿತಿ ಪಡೆದು ತೆರಳಿದ್ದರು. ಆ ಪ್ರಕಾರ ಗಾಯಾಳುಗಳ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ಜಮಾ ಮಾಡಲಾಗಿದೆ. ನಾಲ್ಕು ಜನ ಗಾಯಾಳುಗಳ ಕುಟುಂಬಸ್ಥರ ಬ್ಯಾಂಕ್‌ ಖಾತೆಗೆ ನೇರವಾಗಿ ಒಂದು ಲಕ್ಷ ರೂಪಾಯಿ ಜಮಾ ಮಾಡಲಾಗಿದೆ.

ಇದನ್ನೂ ಓದಿ: ಸಂಗೀತಾಗೆ ಯಶ್ ವಿಶ್ ಮಾಡಿದ ವಿಡಿಯೋ ಫೇಕ್; ವೈರಲ್ ವಿಡಿಯೋದ ಅಸಲಿಯತ್ತು ಇಲ್ಲಿದೆ..

ಎಲ್ಲರ ಮೆಚ್ಚುಗೆ

ಯಶ್ ಅವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಗಾಯಾಳುಗಳಿಗೂ ಅವರ ಕಡೆಯಿಂದ ಸಹಾಯ ಸಿಕ್ಕಿರುವುದಕ್ಕೆ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಯಶ್ ಅವರು ಸದ್ಯ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ