AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್- ರಾಧಿಕಾ ಮನೆಯಲ್ಲಿ ಹಬ್ಬದ ಸಡಗರ ಜೋರು; ಪುಟಾಣಿ ಆಯ್ರಾ ಹಾಗೂ ಯಥರ್ವ್ ಸಂಭ್ರಮ ನೋಡಿ

ಸ್ಯಾಂಡಲ್​ವುಡ್​ನ ಸ್ಟಾರ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ಸಡಗರದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಪುಟಾಣಿ ಯಥರ್ವ್ ಹಾಗೂ ಆಯ್ರಾರನ್ನು ನೋಡಿ ಅಭಿಮಾನಿಗಳು ಮನಸೋತಿದ್ದಾರೆ.

ಯಶ್- ರಾಧಿಕಾ ಮನೆಯಲ್ಲಿ ಹಬ್ಬದ ಸಡಗರ ಜೋರು; ಪುಟಾಣಿ ಆಯ್ರಾ ಹಾಗೂ ಯಥರ್ವ್ ಸಂಭ್ರಮ ನೋಡಿ
ಹಬ್ಬದ ಸಂದರ್ಭದಲ್ಲಿ ಆಯ್ರಾ, ರಾಧಿಕಾ ಪಂಡಿತ್ ಹಾಗೂ ಯಥರ್ವ್ (ಕೃಪೆ: ರಾಧಿಕಾ ಪಂಡಿತ್/ ಇನ್ಸ್ಟಾಗ್ರಾಂ)
Follow us
TV9 Web
| Updated By: shivaprasad.hs

Updated on: Aug 21, 2021 | 11:34 AM

ಚಂದನವನದ ತಾರಾ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಹಬ್ಬದ ಸಡಗರದ ಚಿತ್ರವನ್ನು ಸಂಭ್ರಮದಿಂದ ಹಂಚಿಕೊಂಡಿರುವ ರಾಧಿಕಾ ಪಂಡಿತ್, ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಹಬ್ಬದ ಕುರಿತು ಸುಂದರ ಕ್ಯಾಪ್ಶನ್ ಕೂಡಾ ನೀಡಿರುವ ಅವರು, ಹಬ್ಬಗಳು ಎಲ್ಲರೂ ಒಟ್ಟಾಗಿ ಸೇರುವ, ಪ್ರಾರ್ಥಿಸುವ, ಸಡಗರದಿಂದ ಪಾಲ್ಗೊಳ್ಳುವ ಒಂದು ಕಾರ್ಯಕ್ರಮ. ಖುಷಿಯಿಂದ ದಿನ ಕಳೆಯುವ ಇಂತಹ ಸಂದರ್ಭವನ್ನು ನೀವೂ ಆಚರಿಸಿದ್ದೀರಿ ಎಂದು ಭಾವಿಸುತ್ತೇನೆ. ಎಂದು ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಇದರೊಂದಿಗೆ ಅವರು, ಸಡಗರದ ಚಿತ್ರಗಳನ್ನೂ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಹಂಚಿಕೊಂಡಿರುವ ಚಿತ್ರಗಳಲ್ಲಿ ಯಶ್, ರಾಧಿಕಾ ಹಾಗೂ ಅವರ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಸಂಭ್ರಮದಿಂದ ಹಬ್ಬ ಆಚರಿಸುತ್ತಿರುವ ಚಿತ್ರಗಳಿವೆ. ಆಯ್ರಾ ಹಾಗೂ ಯಥರ್ವ್ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿಕೊಂಡು ಮುದ್ದುಮುದ್ದಾಗಿ ಕಾಣಿಸಿಕೊಂಡಿರುವುದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ರಾಧಿಕಾ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ವರಮಹಾಲಕ್ಷ್ಮಿ ಹಬ್ಬದಂದು ಗುಡ್ ನ್ಯೂಸ್ ಕೊಟ್ಟಿದ್ದ ಹೊಂಬಾಳೆ ಫಿಲ್ಮ್ಸ್ ಹಾಗೂ ಯಶ್:

ಹಬ್ಬದ ದಿನದಂದು (ಆಗಸ್ಟ್ 20) ಹೊಂಬಾಳೆ ಫಿಲ್ಮ್ಸ್ ಭಭರ್ಜರಿ ನ್ಯೂಸ್ ಕೊಟ್ಟಿತ್ತು. ಕೆಜಿಎಫ್ 2 ಚಿತ್ರದ ಸ್ಯಾಟಲೈಟ್ ಹಕ್ಕನ್ನು ಜೀ ಸಂಸ್ಥೆಗೆ ನೀಡಿದ ಚಿತ್ರವನ್ನು ಹಂಚಿಕೊಂಡಿದ್ದ ಸಂಸ್ಥೆ, ದಕ್ಷಿಣ ಭಾರತದ ಎಲ್ಲಾ ಭಾಷೆಗಳ ಸ್ಯಾಟಲೈಟ್ ಹಕ್ಕುಗಳು ಜೀ ಪಾಲಾಗಿವೆ ಎಂದು ತಿಳಿಸಿತ್ತು. ಇದನ್ನು ಯಶ್ ಸಂಭ್ರಮದಿಂದ ಹಂಚಿಕೊಂಡಿದ್ದರು. ಬಲ್ಲ ಮೂಲಗಳ ಪ್ರಕಾರ ಸ್ಯಾಟಲೈಟ್ ಹಕ್ಕನ್ನು ದಾಖಲೆಯ ಮೊತ್ತ ನೀಡಿ ಜೀ ಖರೀದಿಸಿದೆ ಎನ್ನಲಾಗಿದೆ.

ಚಿತ್ರದ ಸ್ಯಾಟಲೈಟ್ ಹಕ್ಕು ಬಿಡುಗಡೆಯ ಘೋಷಣೆಯಾದ ತಕ್ಷಣ ಅಭಿಮಾನಿಗಳಿಗೆ ಗೊಂದಲವಾಗಿದ್ದು, ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆಯೇ ಎಂಬ ಪ್ರಶ್ನೆ ಎತ್ತಿದ್ದರು. ಆದರೆ ವಾಸ್ತವವಾಗಿ ಸ್ಯಾಟಲೈಟ್ ಹಕ್ಕು ಎನ್ನುವುದು ಚಿತ್ರವನ್ನು ಟಿವಿಯಲ್ಲಿ ಪ್ರಸಾರ ಮಾಡಲು ಪಡೆದುಕೊಳ್ಳುವ ಹಕ್ಕು. ಆ ಹಕ್ಕನ್ನು ಜೀ ಪಡೆದುಕೊಂಡಿದೆ. ಚಿತ್ರದ ಒಟಿಟಿ ಹಕ್ಕನ್ನು ನಿರ್ಮಾಣ ಸಂಸ್ಥೆ ಇನ್ನೂ ಯಾರಿಗೂ ನೀಡಿಲ್ಲ ಮತ್ತು ಈ ಕುರಿತು ಯಾವುದೇ ಘೋಷಣೆಯನ್ನೂ ಹೊರಡಿಸಿಲ್ಲ. ಬಲ್ಲ ಮೂಲಗಳ ಪ್ರಕಾರ ಎಲ್ಲವೂ ಅಂದುಕೊಂಡಂತೆ ನಡೆದರೆ ‘ಕೆಜಿಎಫ್ 2 ’ ಚಿತ್ರಮಂದಿರಗಳಲ್ಲಿಯೇ ಬಿಡುಗಡೆಯಾಗಲಿದೆ.

ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ಯಶ್, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್, ರವೀನಾ ಟಂಡನ್ ಮೊದಲಾದವರು ಅಭಿನಯಿಸಿದ್ದಾರೆ. ಪ್ಯಾನ್ ಇಂಡಿಯಾ ಮಾದರಿಯ ಈ ಚಿತ್ರಕ್ಕೆ ಈಗಾಗಲೇ ದೇಶದಾದ್ಯಂತ ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ:

ಸೊನಾಲಿ ಬೇಂದ್ರೆಗೆ ರಾತ್ರಿ ಕರೆ ಮಾಡಿ ‘ಓಡಿ ಹೋಗಿ ಮದ್ವೆ ಆಗೋಣ ಬಾ’ ಎಂದಿದ್ರಾ ಸುನೀಲ್​ ಶೆಟ್ಟಿ? ಇಲ್ಲಿದೆ ಅಸಲಿ ವಿಷಯ

ಹುಟ್ಟುಹಬ್ಬದ ಹೊಸ್ತಿಲಲ್ಲಿ ಮೆಗಾ ಸ್ಟಾರ್​ ಚಿರಂಜೀವಿಗೆ ನಿರ್ದೇಶಕರ ಮೇಲೆ ಅಸಮಾಧಾನ; ಇದಕ್ಕೆ ಕಾರಣ ಏನು?

(Yash family celebrates Vara Mahalakshmi festival and Radhika Pandit shared festive moments)

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!