AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್​ ಬರ್ತ್​ಡೇ ಮಾಡಲು ರಜೆ ಕೊಡಿ’; ಪತ್ರ ಬರೆದು ಪ್ರಾಂಶುಪಾಲರಿಗೆ ಮನವಿ ಮಾಡಿದ ವಿದ್ಯಾರ್ಥಿ

‘ನಾನು ಯಶ್​ ಅವರ ಕಟ್ಟಾ ಅಭಿಮಾನಿ. ಹಾಗಾಗಿ ಪ್ರಾಂಶುಪಾಲರಿಗೆ ನಾನು ಲೆಟರ್​ ಬರೆದಿದ್ದೆ. ಅವರು ರಜೆ ಕೊಟ್ಟರೆ ಮನೆಯಲ್ಲೇ ಯಶ್​ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತೇನೆ’ ಎಂದು ಬಿ.ಕಾಂ 3ನೇ ಸೆಮ್​ ವಿದ್ಯಾರ್ಥಿ ಶಿವಕುಮಾರ್​ ಹೇಳಿದ್ದಾನೆ.

‘ಯಶ್​ ಬರ್ತ್​ಡೇ ಮಾಡಲು ರಜೆ ಕೊಡಿ’; ಪತ್ರ ಬರೆದು ಪ್ರಾಂಶುಪಾಲರಿಗೆ ಮನವಿ ಮಾಡಿದ ವಿದ್ಯಾರ್ಥಿ
ಯಶ್​ ಜನ್ಮದಿನಕ್ಕೆ ರಜೆ ಕೋರಿ ಅಭಿಮಾನಿ ಬರೆದ ಪತ್ರ ವೈರಲ್​
TV9 Web
| Edited By: |

Updated on: Jan 06, 2022 | 12:53 PM

Share

ನಟ ಯಶ್​ (Yash) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಿಡುಗಡೆಗಾಗಿ ಎಲ್ಲರೂ ಕಾದಿದ್ದಾರೆ. ಕೊವಿಡ್​ ಕಾರಣದಿಂದ ಅಭಿಮಾನಿಗಳ ಜೊತೆ ಬೆರೆಯಲು ಯಶ್​ಗೆ ಸಾಧ್ಯವಾಗುತ್ತಿಲ್ಲ. ಕಳೆದೆರಡು ವರ್ಷದಿಂದ ಅವರು ಬರ್ತ್​ಡೇ  (Yash Birthday) ಆಚರಿಸಿಕೊಂಡಿಲ್ಲ. ಈ ವರ್ಷ ಕೂಡ ಯಶ್​ ಹುಟ್ಟುಹಬ್ಬವನ್ನು (ಜ.8) ಅಭಿಮಾನಿಗಳ ಜತೆ ಸೇರಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೂ ಸಹ ‘ರಾಕಿಂಗ್​ ಸ್ಟಾರ್​’ ಜನ್ಮದಿನದ ಬಗ್ಗೆ ಫ್ಯಾನ್ಸ್​ ತುಂಬ ಎಗ್ಸೈಟ್​ ಆಗಿದ್ದಾರೆ. ಎಷ್ಟರಮಟ್ಟಿಗೆಂದರೆ, ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ರಜೆ ಬೇಕು ಎಂದು ಬಳ್ಳಾರಿಯಲ್ಲಿ ವಿದ್ಯಾರ್ಥಿಯೊಬ್ಬ ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾನೆ. ಆ ಲೆಟರ್​ ಈಗ ವೈರಲ್​ ಆಗಿದೆ.

ಬಿ.ಕಾಂ ಮೂರನೇ ಸೆಮ್​ನಲ್ಲಿ ಓದುತ್ತಿರುವ ಕೆ. ಶಿವಕುಮಾರ್​ ಎಂಬ ವಿದ್ಯಾರ್ಥಿ ಈ ರೀತಿ ಪತ್ರ ಬರೆದಿದ್ದಾನೆ. ‘ಯಶ್​ ಬಾಸ್​ ಹುಟ್ಟುಹಬ್ಬದ ಪ್ರಯುಕ್ತ ಜ.7ರಂದು ಟ್ವಿಟರ್​ನಲ್ಲಿ ಎಲ್ಲ ಅಭಿಮಾನಿಗಳು 24 ಗಂಟೆಗಳ ಟ್ರೆಂಡ್​ನಲ್ಲಿ ಭಾಗವಹಿಸುತ್ತಿದ್ದಾರೆ. ನಾನು ಕೂಡ ಭಾಗವಹಿಸಿ ಯಶ್​ ಅಣ್ಣನ ಜನ್ಮದಿನದ ಶುಭಾಶಯಗಳನ್ನು ತಿಳಿಸಬೇಕೆಂದು ನಿರ್ಧಾರ ಮಾಡಾಗಿದೆ. ಆದ ಕಾರಣ ನನಗೆ ಇದೇ ಜ.7ರಂದು ರಜಾ ಕೊಡಬೇಕೆಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಆತ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾನೆ.

‘ನನ್ನ ಇತರೆ ಸ್ನೇಹಿತರಿಗೂ ರಜೆ ಕೊಡಿ. ಅವರು ಕೂಡ ಯಶ್​ ಬಾಸ್​ಗೆ ವಿಶ್​ ಮಾಡಲಿದ್ದಾರೆ. ಜ.7ರ ಸಂಜೆ 7 ಗಂಟೆಯಿಂದ ಜ.8ರ ಸಂಜೆ 7 ಗಂಟೆವರೆಗೆ ನಿರಂತರ ಹುಟ್ಟುಹಬ್ಬದ ವಿಶ್​ ಮಾಡ್ತಾಯಿರಿ’ ಎಂದು ಯಶ್​ ಅಭಿಮಾನಿ ಬರೆದ ಪತ್ರ ಈಗ ವೈರಲ್​ ಆಗಿದೆ.

‘ನಾನು ಯಶ್​ ಅವರ ಕಟ್ಟಾ ಅಭಿಮಾನಿ. ಹಾಗಾಗಿ ಪ್ರಾಂಶುಪಾಲರಿಗೆ ನಾನು ಲೆಟರ್​ ಬರೆದಿದ್ದೆ. ಅವರು ರಜೆ ಕೊಟ್ಟರೆ ಮನೆಯಲ್ಲೇ ಯಶ್​ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತೇನೆ. ನನ್ನ ಸ್ನೇಹಿತರೆಲ್ಲ ಇದನ್ನು ತಮಾಷೆ ಎಂದುಕೊಂಡಿದ್ರು. ಇದು ಇಷ್ಟು ದೊಡ್ಡ ಮಟ್ಟದಲ್ಲಿ ಸೌಂಡು ಮಾಡುತ್ತೆ ಅಂತ ನಾನು ಅಂದುಕೊಂಡಿರಲಿಲ್ಲ. ಯಶ್​ ಅವರ ಎಲ್ಲ ಸಿನಿಮಾವನ್ನು ನಾನು ನೋಡಿದ್ದೇನೆ. ಗೂಗ್ಲಿ ಸಿನಿಮಾದಿಂದ ಅವರಿಗೆ ಫ್ಯಾನ್​ ಆಗಿದ್ದೇನೆ. ಪ್ರತಿ ದಿನ ನಾನು ವಾಟ್ಸಪ್​ ಸ್ಟೇಟಸ್​ ಹಾಕುತ್ತೇನೆ. ಅವರು ನನ್ನ ಆರಾಧ್ಯ ದೈವ. ನಮ್ಮ ತಾಯಿಯನ್ನು ಬಿಟ್ಟರೆ ನಾನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವುದು ಯಶ್​ ಅವರನ್ನು. ನನ್ನ ರಕ್ತದ ಕಣ ಕಣದಲ್ಲೂ ಯಶ್​ ಬಾಸ್​ ಹೆಸರು ಕೂಗಿ ಹೇಳುತ್ತೇನೆ’ ಎಂದು ಶಿವಕುಮಾರ್​ ಹೇಳಿರುವ ವಿಡಿಯೋ ಇಲ್ಲಿದೆ..

ಇದನ್ನೂ ಓದಿ:

ಯಶ್​ ಜತೆಗಿನ ಸೆಲ್ಫಿಗಾಗಿ ರಾಧಿಕಾ ಇಷ್ಟು ಕಷ್ಟಪಡಬೇಕಾ? ಇಲ್ಲಿವೆ ಫನ್ನಿ ಫೋಟೋಗಳು

‘ಕೆಜಿಎಫ್​ 2’ ಎದುರು ಸ್ಪರ್ಧೆಗೆ ಇಳಿದ ತಮಿಳು ಸ್ಟಾರ್ ನಟನ ​ ಸಿನಿಮಾ; ಗೆಲ್ಲೋದು ಯಶ್​ ಎಂದ ಫ್ಯಾನ್ಸ್​

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ