AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಂಕಾಕ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಾವಿನ ಬಳಿಕ ಯಶ್​ ಅವರು ಶೂಟಿಂಗ್​ಗೆ ಬ್ರೇಕ್​ ಹಾಕಿದ್ದಾರೆ. ಚಿತ್ರೀಕರಣವನ್ನು ನಿಲ್ಲಿಸಿ ಅವರು ಸಾಂತ್ವನ ಹೇಳಲು ಬಂದಿದ್ದಾರೆ.

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್​
ಸಾಂತ್ವನ ಹೇಳಿದ ಯಶ್​
TV9 Web
| Edited By: |

Updated on:Jan 08, 2024 | 7:08 PM

Share

ನಟ ಯಶ್​ ಜನ್ಮದಿನದ (Yash Birthday) ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ಮೂವರು ಅಭಿಮಾನಿಗಳು ನಿಧನರಾದ (Yash Fans Death) ಘಟನೆ ತೀವ್ರ ನೋವುಂಟು ಮಾಡಿದೆ. ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಸ್ವತಃ ಯಶ್​ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ವಿದ್ಯುತ್​ ಶಾಕ್​ನಿಂದ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಯಶ್​ (Yash) ಆಗಮನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂರಣಗಿಯಲ್ಲಿ ಭದ್ರತೆಗಾಗಿ ಲಕ್ಷ್ಮೇಶ್ವರ ಪಿಎಸ್ಐ ನೇತೃತ್ವದಲ್ಲಿ 2 ಡಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಂಕಾಕ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಾವಿನ ಬಳಿಕ ಯಶ್​ ಅವರು ಶೂಟಿಂಗ್​ಗೆ ಬ್ರೇಕ್​ ಹಾಕಿದ್ದಾರೆ. ಚಿತ್ರೀಕರಣವನ್ನು ನಿಲ್ಲಿಸಿ ಅವರು ಸಾಂತ್ವನ ಹೇಳಲು ಬಂದಿದ್ದಾರೆ. ಅಭಿಮಾನಿಗಳ ನಿಧನದ ಬಳಿಕ ಯಶ್​ ಬರಲೇಬೇಕು ಎಂದು ಗ್ರಾಮದ ಜನರು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಯಶ್​ ಅವರು ಸೂರಣಗಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಯಶ್ ಹುಟ್ಟುಹಬ್ಬ ದುರಂತ: ಮೃತ ಮೂವರು ದುರ್ದೈವಿಗಳ ಅಂತಿಮಸಂಸ್ಕಾರ ಒಟ್ಟಿಗೆ ನೆರವೇರಿಸಿದ ಸೂರಣಗಿ ಗ್ರಾಮಸ್ಥರು

ಸೂರಣಗಿ ಗ್ರಾಮಕ್ಕೆ ಜನಸಾಗರ ಹರಿದು ಬಂದಿದೆ. ಯಶ್​ ಅವರ ಆಗಮನದ ಹಿನ್ನೆಲೆಯಲ್ಲಿ‌ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಯಶ್ ಅವರನ್ನು ನೋಡಲು ಆಗಮಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

2019ರಲ್ಲೂ ನಡೆದಿತ್ತು ದುರಂತ:

ರಾಕಿಂಗ್​ ಸ್ಟಾರ್​ ಯಶ್ ಅವರು 2019ರಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವಾಗಲೂ ಒಬ್ಬ ಅಭಿಮಾನಿ ಪ್ರಾಣ ಕಳೆದುಕೊಂಡಿದ್ದ. ಯಶ್​ ಅವರನ್ನು ನೋಡಲು ಬಿಡದ ಕಾರಣ ಪೆಟ್ರೋಲ್ ಸುರಿದುಕೊಂಡು ರವಿ ಎಂಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದ. ಹೊಸಕೆರೆಹಳ್ಳಿಯ ಯಶ್​ ಅವರ ನಿವಾಸದ ಬಳಿ ಈ ಘಟನೆ ನಡೆದಿತ್ತು. ಆತನನ್ನ ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮರುದಿನ ಆತ ಮೃತಪಟ್ಟಿದ್ದ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 pm, Mon, 8 January 24

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು