ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್​

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಂಕಾಕ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಾವಿನ ಬಳಿಕ ಯಶ್​ ಅವರು ಶೂಟಿಂಗ್​ಗೆ ಬ್ರೇಕ್​ ಹಾಕಿದ್ದಾರೆ. ಚಿತ್ರೀಕರಣವನ್ನು ನಿಲ್ಲಿಸಿ ಅವರು ಸಾಂತ್ವನ ಹೇಳಲು ಬಂದಿದ್ದಾರೆ.

ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಿದ ಯಶ್​
ಸಾಂತ್ವನ ಹೇಳಿದ ಯಶ್​
Follow us
| Updated By: ಮದನ್​ ಕುಮಾರ್​

Updated on:Jan 08, 2024 | 7:08 PM

ನಟ ಯಶ್​ ಜನ್ಮದಿನದ (Yash Birthday) ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ಮೂವರು ಅಭಿಮಾನಿಗಳು ನಿಧನರಾದ (Yash Fans Death) ಘಟನೆ ತೀವ್ರ ನೋವುಂಟು ಮಾಡಿದೆ. ಮೃತ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಸ್ವತಃ ಯಶ್​ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಆಗಮಿಸಿದ್ದಾರೆ. ವಿದ್ಯುತ್​ ಶಾಕ್​ನಿಂದ ಅಭಿಮಾನಿಗಳಾದ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಮತ್ತು ನವೀನ್ (19) ಮೃತಪಟ್ಟಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಯಶ್​ (Yash) ಆಗಮನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೂರಣಗಿಯಲ್ಲಿ ಭದ್ರತೆಗಾಗಿ ಲಕ್ಷ್ಮೇಶ್ವರ ಪಿಎಸ್ಐ ನೇತೃತ್ವದಲ್ಲಿ 2 ಡಿಎಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಂಕಾಕ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಆದರೆ ಅಭಿಮಾನಿಗಳ ಸಾವಿನ ಬಳಿಕ ಯಶ್​ ಅವರು ಶೂಟಿಂಗ್​ಗೆ ಬ್ರೇಕ್​ ಹಾಕಿದ್ದಾರೆ. ಚಿತ್ರೀಕರಣವನ್ನು ನಿಲ್ಲಿಸಿ ಅವರು ಸಾಂತ್ವನ ಹೇಳಲು ಬಂದಿದ್ದಾರೆ. ಅಭಿಮಾನಿಗಳ ನಿಧನದ ಬಳಿಕ ಯಶ್​ ಬರಲೇಬೇಕು ಎಂದು ಗ್ರಾಮದ ಜನರು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಯಶ್​ ಅವರು ಸೂರಣಗಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಯಶ್ ಹುಟ್ಟುಹಬ್ಬ ದುರಂತ: ಮೃತ ಮೂವರು ದುರ್ದೈವಿಗಳ ಅಂತಿಮಸಂಸ್ಕಾರ ಒಟ್ಟಿಗೆ ನೆರವೇರಿಸಿದ ಸೂರಣಗಿ ಗ್ರಾಮಸ್ಥರು

ಸೂರಣಗಿ ಗ್ರಾಮಕ್ಕೆ ಜನಸಾಗರ ಹರಿದು ಬಂದಿದೆ. ಯಶ್​ ಅವರ ಆಗಮನದ ಹಿನ್ನೆಲೆಯಲ್ಲಿ‌ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಅಕ್ಕಪಕ್ಕದ ಗ್ರಾಮಸ್ಥರು ಯಶ್ ಅವರನ್ನು ನೋಡಲು ಆಗಮಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಹಾಸಪಟ್ಟಿದ್ದಾರೆ.

2019ರಲ್ಲೂ ನಡೆದಿತ್ತು ದುರಂತ:

ರಾಕಿಂಗ್​ ಸ್ಟಾರ್​ ಯಶ್ ಅವರು 2019ರಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವಾಗಲೂ ಒಬ್ಬ ಅಭಿಮಾನಿ ಪ್ರಾಣ ಕಳೆದುಕೊಂಡಿದ್ದ. ಯಶ್​ ಅವರನ್ನು ನೋಡಲು ಬಿಡದ ಕಾರಣ ಪೆಟ್ರೋಲ್ ಸುರಿದುಕೊಂಡು ರವಿ ಎಂಬ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದ. ಹೊಸಕೆರೆಹಳ್ಳಿಯ ಯಶ್​ ಅವರ ನಿವಾಸದ ಬಳಿ ಈ ಘಟನೆ ನಡೆದಿತ್ತು. ಆತನನ್ನ ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮರುದಿನ ಆತ ಮೃತಪಟ್ಟಿದ್ದ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 pm, Mon, 8 January 24

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್