AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಅಭಿಮಾನಿಗಳು ತಲೆ ತಗ್ಗಿಸೋ ಕೆಲಸ ಯಾವಾಗಲೂ ಮಾಡಲ್ಲ’; ಯಶ್ ಹಳೆಯ ವಿಡಿಯೋ ವೈರಲ್

ಯಶ್ ಅವರು ಪ್ಯಾನ್ ಇಂಡಿಯಾ ಹೀರೋ ಆಗಿದ್ದಾರೆ. ಈ ಕಾರಣಕ್ಕೆ ಅವರು ಮೊದಲಿನಷ್ಟು ಅಭಿಮಾನಿಗಳಿಗೆ ಲಭ್ಯವಿಲ್ಲ. ಹಾಗಂತ ಅವರಿಗೆ ಅಭಿಮಾನಿಗಳ ಮೇಲೆ ಇರೋ ಗೌರವ, ಪ್ರೀತಿ ಕಡಿಮೆ ಆಗಿಲ್ಲ. ಯಾರಾದರೂ ಅಭಿಮಾನಿಗಳು ಸಿಕ್ಕರೆ ಯಶ್ ಪ್ರೀತಿಯಿಂದ ಫೋಟೋಗೆ ಪೋಸ್ ಕೊಡುತ್ತಾರೆ.

‘ನನ್ನ ಅಭಿಮಾನಿಗಳು ತಲೆ ತಗ್ಗಿಸೋ ಕೆಲಸ ಯಾವಾಗಲೂ ಮಾಡಲ್ಲ’; ಯಶ್ ಹಳೆಯ ವಿಡಿಯೋ ವೈರಲ್
ಯಶ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jun 15, 2024 | 9:30 AM

ಅಶ್ಲೀಲ ಸಂದೇಶ ಕಳುಹಿಸಿ ಕೊಲೆಯಾದ ರೇಣುಕಾ ಸ್ವಾಮಿ (Renuka Swamy) ಕೇಸ್​ನಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟಹಾಕಿದೆ. ಅವರಿಂದಾಗಿ ಸ್ಯಾಂಡಲ್​ವುಡ್ ತಲೆ ತಗ್ಗಿಸುವಂತೆ ಆಗಿದೆ. ಕೊಲೆ ಕೇಸ್​ನಲ್ಲಿ ದರ್ಶನ್ ಬಂಧನಕ್ಕೆ ಒಳಗಾದರೂ ಅವರ ಫ್ಯಾನ್ಸ್ ಬೆಂಬಲ ಸೂಚಿಸುತ್ತಿದ್ದಾರೆ. ಈ ಕಾರಣಕ್ಕೆ ಅವರು ಟೀಕೆಗೆ ಒಳಗಾಗುತ್ತಿದ್ದಾರೆ. ಈ ಮಧ್ಯೆ ಯಶ್ ಅಭಿಮಾನಿಗಳು ಅವರು ಈ ಮೊದಲು ಹೇಳಿದ ಹೇಳಿಕೆಯೊಂದರ ವಿಡಿಯೋನ ವೈರಲ್ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ಯಶ್ ಅವರು ಅಭಿಮಾನಿಗಳ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದರು. ಅಷ್ಟೇ ಅಲ್ಲ, ಅಭಿಮಾನಿಗಳು ತಲೆ ತಗ್ಗಿಸೋ ಕೆಲಸ ಮಾಡಲ್ಲ ಎಂದಿದ್ದರು. ಈ ಮಾತನ್ನು ಅವರು ಈಗಲೂ ಉಳಿಸಿಕೊಂಡು ಬರುತ್ತಿದ್ದಾರೆ.

ಯಶ್ ಅವರು ಪ್ಯಾನ್ ಇಂಡಿಯಾ ಹೀರೋ ಆಗಿದ್ದಾರೆ. ಈ ಕಾರಣಕ್ಕೆ ಅವರು ಮೊದಲಿನಷ್ಟು ಅಭಿಮಾನಿಗಳಿಗೆ ಲಭ್ಯವಿಲ್ಲ. ಹಾಗಂತ ಅವರಿಗೆ ಅಭಿಮಾನಿಗಳ ಮೇಲೆ ಇರೋ ಗೌರವ, ಪ್ರೀತಿ ಕಡಿಮೆ ಆಗಿಲ್ಲ. ಯಾರಾದರೂ ಅಭಿಮಾನಿಗಳು ಸಿಕ್ಕರೆ ಯಶ್ ಪ್ರೀತಿಯಿಂದ ಫೋಟೋಗೆ ಪೋಸ್ ಕೊಡುತ್ತಾರೆ. ತಪ್ಪು ಮಾಡಿದಾಗ ತಿದ್ದಿ ಹೇಳುತ್ತಾರೆ. ಯಶ್ ಎಲ್ಲರಿಗೂ ಮಾದರಿ ಎಂದು ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ.

‘ನನ್ನ ಫೇವರಿಟ್ ಹೀರೋ ಯಶ್ ಎಂದು ಅನೇಕರು ಹೇಳುತ್ತಾರೆ. ಅವರು ಯಾವಾಗಲೂ ತಲೆ ತಗ್ಗಿಸಬಾರದು’ ಎಂದು ಯಶ್ ಈ ಮೊದಲು ಹೇಳಿದ್ದರು. ‘ನೀವು ತಲೆ ತಗ್ಗಿಸೋ ಕೆಲಸ ಯಾವಾಗಲೂ ಮಾಡಲ್ಲ. ಯಶ್ ಅಭಿಮಾನಿಗಳು ಎಂದರೆ ತಲೆ ಎತ್ತಿಕೊಂಡು ಓಡಾಡಬೇಕು. ಹಾಗೆ ಬದುಕುತ್ತೇನೆ’ ಎಂದು ಯಶ್ ಈ ಮೊದಲು ಭರವಸೆ ನೀಡಿದ್ದರು. ಈ ಭರವಸೆಯನ್ನು ಅವರು ಉಳಿಸಿಕೊಂಡು ಹೋಗುತ್ತಿದ್ದಾರೆ.

ಇದನ್ನೂ ಓದಿ: Yash: ಚಿತ್ರರಂಗ ಬೇಡ ಎಂದು ಹೊರಟಿದ್ದ ಚಿಕ್ಕಣ್ಣ; ಇದನ್ನು ತಡೆದಿದ್ದು ಯಶ್

ಇನ್ನು, ಸ್ಟಾರ್ಸ್ ವಾರ್ ವಿಚಾರದಲ್ಲೂ ದರ್ಶನ್ ಹಾಗೂ ಯಶ್ ಹೇಳಿಕೆಯನ್ನು ಹೋಲಿಕೆ ಮಾಡಲಾಗುತ್ತಿದೆ. ‘ಸ್ಟಾರ್​ವಾರ್ ಎಂದರೆ ಎರಡು ಕೈ ಸೇರಿದರೆ ಮಾತ್ರ ಆಗೋದು’ ಎಂದು ದರ್ಶನ್ ಹೇಳಿದ್ದರು. ಆದರೆ, ಯಶ್ ಅವರು ಈ ವಿಚಾರದಲ್ಲಿ ನೀಡಿದ ಹೇಳಿಕೆ ಗಮನ ಸೆಳೆದಿತ್ತು. ‘ಮತ್ತೋರ್ವ ಹೀರೋಗೆ ಬಯ್ಯಬಾರದು. ನನ್ನ ಫ್ಯಾನ್​ ಆಗಿ ಅವರು ಆ ರೀತಿ ಮಾಡುತ್ತಾರೆ ಎಂದರೆ ಅವುರ ನನ್ನ ಅಭಿಮಾನಿಯೇ ಅಲ್ಲ’ ಎಂದು ಯಶ್ ನೇರ ಮಾತುಗಳಲ್ಲಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ