AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಥರ್ವನಿಗೆ ಭಯ ಹುಟ್ಟಿಸಿದ ಯಶ್ ಹಾಗೂ ಆಯ್ರಾ; ಇಲ್ಲಿದೆ ಫನ್ನಿ ವಿಡಿಯೋ

ಯಶ್ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಆದ್ಯತೆ ನೀಡುತ್ತಾರೆ. ಈಗ ಯಶ್ ಬ್ರೇಕ್​ನಲ್ಲಿದ್ದಾರೆ. ಹೊಸ ಸಿನಿಮಾ ಒಪ್ಪಿಕೊಳ್ಳುವುದಕ್ಕೂ ಮೊದಲು ಮಕ್ಕಳ ಜತೆ ಸಮಯ ಕಳೆಯುತ್ತಿದ್ದಾರೆ.

ಯಥರ್ವನಿಗೆ ಭಯ ಹುಟ್ಟಿಸಿದ ಯಶ್ ಹಾಗೂ ಆಯ್ರಾ; ಇಲ್ಲಿದೆ ಫನ್ನಿ ವಿಡಿಯೋ
ಯಥರ್ವನಿಗೆ ಭಯ ಹುಟ್ಟಿಸಿದ ಯಶ್ ಹಾಗೂ ಆಯ್ರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 11, 2022 | 6:10 PM

‘ಕೆಜಿಎಫ್: ಚಾಪ್ಟರ್​ 2’ (KGF: Chapter 2) ಗೆದ್ದು ಬೀಗಿದೆ. ಈ ಸಿನಿಮಾದಿಂದ ಯಶ್​ಗೆ (Yash) ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಚಿತ್ರದ ಕಲೆಕ್ಷನ್ 1200 ಕೋಟಿ ರೂಪಾಯಿ ಸಮೀಪಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಯಶ್​ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ, ಯಶ್ ಸೋಶಿಯಲ್ ಮೀಡಿಯಾದಲ್ಲಿ (Social Media) ಆ್ಯಕ್ಟೀವ್ ಆಗಿರಲು ಪ್ರಯತ್ನಿಸುತ್ತಿದ್ದಾರೆ. ಇವುಗಳ ಮಧ್ಯೆ ಕುಟುಂಬದ ಜತೆ ಅವರು ಸಮಯ ಕಳೆಯುತ್ತಾ ಹಾಯಾಗಿದ್ದಾರೆ. ಅವರು ಹೊಸ ವಿಡಿಯೋ ಶೇರ್ ಮಾಡಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಿದ್ದಾರೆ.

ಯಶ್ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಆದ್ಯತೆ ನೀಡುತ್ತಾರೆ. ‘ಕೆಜಿಎಫ್ 2’ ಪ್ರಚಾರದ ಮಧ್ಯೆಯೂ ಅವರು ಕುಟುಂಬದ ಜತೆ ಯುಗಾದಿ ಹಬ್ಬ ಆಚರಿಸಿಕೊಂಡಿದ್ದು ಇದಕ್ಕೆ ಹೊಸ ಉದಾಹರಣೆ. ಈಗ ಯಶ್ ಬ್ರೇಕ್​ನಲ್ಲಿದ್ದಾರೆ. ಹೊಸ ಸಿನಿಮಾ ಒಪ್ಪಿಕೊಳ್ಳುವುದಕ್ಕೂ ಮೊದಲು ಮಕ್ಕಳ ಜತೆ ಸಮಯ ಕಳೆಯುತ್ತಿದ್ದಾರೆ.

ಇದನ್ನೂ ಓದಿ
Image
‘ಕೆಜಿಎಫ್​ 2’ ನೋಡಿದ್ಮೇಲೆ ‘ಕೆಜಿಎಫ್​ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್​’ ಮಾತು
Image
‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ

ಯಶ್​ಗೆ ಆಯ್ರಾ ಹಾಗೂ ಯಥರ್ವ್​ ಎಂದರೆ ಅಚ್ಚುಮೆಚ್ಚು. ಮಕ್ಕಳು ಮಾಡುವ ತುಂಟಾಟದ ವಿಡಿಯೋಗಳನ್ನು ಯಶ್ ಪತ್ನಿ ರಾಧಿಕಾ ಪಂಡಿತ್ ಹಂಚಿಕೊಳ್ಳುತ್ತಿರುತ್ತಾರೆ. ಈಗ ಯಥರ್ವ್​ನನ್ನು ಯಶ್ ಹಾಗೂ ಆಯ್ರಾ ಇಬ್ಬರೂ ಭಯ ಬೀಳಿಸಿದ್ದಾರೆ. ಈ ಫನ್ನಿ ವಿಡಿಯೋವನ್ನು ಯಶ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Yash (@thenameisyash)

ಇನ್​ಸ್ಟಾಗ್ರಾಮ್​ನಲ್ಲಿ ಯಶ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯಶ್, ಯಥರ್ವ್​ ಹಾಗೂ ಆಯ್ರಾ ಇದ್ದಾರೆ. ಯಥರ್ವ್​ ‘ನಾನು ಡೈನೋಸಾರ್​’ ಎಂದು ಕೂಗಿದ್ದಾನೆ. ಇದಕ್ಕೆ ಯಶ್​, ‘ನನಗೆ ಹಾಗೂ ಆಯ್ರಾಗೆ ಭಯವಾಗುತ್ತಿದೆ’ ಎಂದು ಹೇಳಿದ್ದಾರೆ. ಮುಂದುವರಿದು ‘ನಾನು ಹುಲಿ ಆಗುತ್ತಿದ್ದೇನೆ’ ಎಂದು ಹೇಳುತ್ತಾ, ಹುಲಿಯಂತೆ ಘರ್ಜಿಸಿದ್ದಾರೆ ಯಶ್. ಇದನ್ನು ನೋಡಿ ಯಥರ್ವ್​ ಅಲ್ಲಿಂದ ಓಡಿ ಹೋಗಿದ್ದಾನೆ.

ಈ ವಿಡಿಯೋಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಯಶ್ ಅವರನ್ನು ಪಕ್ಕಾ ಫ್ಯಾಮಿಲಿ ಮ್ಯಾನ್ ಎಂದು ಹೊಗಳಿದ್ದಾರೆ. ವಿಡಿಯೋ ಹಂಚಿಕೊಂಡ ಒಂದು ಗಂಟೆಯಲ್ಲಿ 8 ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಕಲೆಕ್ಷನ್​ ನೋಡಿ ಎಲ್ಲರೂ ದಂಗಾಗಿದ್ದಾರೆ. ಹಲವು ಘಟಾನುಘಟಿ ಸ್ಟಾರ್​ ಸಿನಿಮಾಗಳನ್ನೆಲ್ಲ ಹಿಂದಿಕ್ಕಿ ಈ ಚಿತ್ರ ಧೂಳೆಬ್ಬಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ‘ಕೆಜಿಎಫ್​ 2’ ಕಲೆಕ್ಷನ್​ ಇನ್ನೂ ತಗ್ಗಿಲ್ಲ. ಬಿಡುಗಡೆಯಾಗಿ 28 ದಿನ ಕಳೆದಿದೆ. ಆದರೂ ಸಹ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ತನ್ನ ನೆಲೆಯನ್ನು ಬೇರೆ ಸಿನಿಮಾಗೆ ಬಿಟ್ಟುಕೊಟ್ಟಿಲ್ಲ. ಈವರೆಗೂ 1160 ಕೋಟಿ ರೂಪಾಯಿ ಗಳಿಸಿರುವ ಈ ಸಿನಿಮಾದಿಂದ ನಿರ್ದೇಶಕ ಪ್ರಶಾಂತ್​ ನೀಲ್​ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ‘ಕೆಜಿಎಫ್​ 2’ ಸಿನಿಮಾದ ಕಲೆಕ್ಷನ್​ 1200 ಕೋಟಿ ರೂಪಾಯಿ ಗಡಿ ಮುಟ್ಟಲಿದೆಯೇ ಎಂಬ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:43 pm, Wed, 11 May 22

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್