AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ
ಯಶ್
ರಾಜೇಶ್ ದುಗ್ಗುಮನೆ
|

Updated on: Aug 24, 2023 | 11:31 AM

Share

ನಟ ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಹುಟ್ಟಿಕೊಂಡಿರೋ ವದಂತಿಗಳು ಒಂದೆರಡಲ್ಲ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ಅವರ ಸಿನಿಮಾ ಕುರಿತು ನಿತ್ಯ ಒಂದಿಲ್ಲೊಂದು ಹೊಸ ಸುದ್ದಿ ಹುಟ್ಟಿಕೊಳ್ಳುತ್ತಲೇ ಇವೆ. ಬಾಲಿವುಡ್​ನಲ್ಲಿ ಸಿದ್ಧವಾಗಲಿರೋ ‘ರಾಮಾಯಣ’ (Ramayana) ಸಿನಿಮಾದಲ್ಲಿ ನಟಿಸಲು ಯಶ್ ಅವರಿಗೆ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ಯಶ್ ಲುಕ್ ಟೆಸ್ಟ್​ಗೆ ಹೋಗಿದ್ದು ನಿಜ ಎನ್ನುತ್ತಿವೆ ಮೂಲಗಳು. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಒಂದೊಮ್ಮೆ ಪಾತ್ರಕ್ಕೆ ಹೊಂದಿಕೆ ಆದರೆ ಕಲಾವಿದನನ್ನು ಫೈನಲ್ ಮಾಡಲಾಗುತ್ತದೆ. ಇಲ್ಲವಾದರೆ ಬೇರೊಬ್ಬ ಕಲಾವಿದನ ಹುಡುಕಲಾಗುತ್ತದೆ. ಈಗ ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ‘ಬಾಲಿವುಡ್ ಹಂಗಾಮ’ ವರದಿ ಮಾಡಿದೆ.

ಈ ವರದಿಯ ಪ್ರಕಾರ ಯಶ್ ಅವರು ರಾವಣನ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಿಸಿದ್ದಾರಂತೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಅವರಿಗೆ ಆಫರ್ ನೀಡಿದ್ದು ನಿಜವಂತೆ. ಆದರೆ, ಸೀತೆಯ ಪಾತ್ರಕ್ಕೆ ಆಲಿಯಾ ಅವರನ್ನು ಸಂಪರ್ಕಿಸಿಲ್ಲ ಎಂದು ಬಾಲಿವುಡ್ ಹಂಗಾಮ ವರದಿ ಹೇಳಿದೆ. ಯಶ್ ಅವರ ಆಯ್ಕೆ ವಿಚಾರದಲ್ಲಿ ನಿರ್ದೇಶಕರು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರವನ್ನು ಮೂರು ಭಾಗಗಳಲ್ಲಿ ತೆರೆಗೆ ತರಲು ನಿರ್ಧರಿಸಿದ್ದಾರೆ. ಒಂದೇ ಭಾಗದಲ್ಲಿ ಎಲ್ಲವನ್ನೂ ಹೇಳಲು ಅಸಾಧ್ಯ. ಈ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಯಶ್ ಅವರು ಈ ಸಿನಿಮಾ ಒಪ್ಪಿಕೊಂಡರೆ ಈ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ನೀಡಬೇಕಾಗುತ್ತದೆ. ಇದರ ಜೊತೆ ಅವರು ‘ಕೆಜಿಎಫ್ 3’ ಕೆಲಸಗಳಲ್ಲೂ ಭಾಗಿ ಆಗಬೇಕಿದೆ.

ಇದನ್ನೂ ಓದಿ: ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಯಶ್ ಮುಂದಿನ ಚಿತ್ರದ ಬಗ್ಗೆ ಹುಟ್ಟಿಕೊಂಡ ವದಂತಿಗಳು ಹಲವು. ಯಾವುದೂ ಅಧಿಕೃತ ಆಗಿಲ್ಲ. ಹೀಗಾಗಿ, ‘ರಾಮಾಯಣ’ ವಿಚಾರ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಯಶ್ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್