AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ವರದಿ ಆಗಿದೆ.

ರಾವಣನ ಪಾತ್ರಕ್ಕೆ ಯಶ್ ಲುಕ್ ಟೆಸ್ಟ್ ಮಾಡಿಸಿದ್ದು ನಿಜ? ಬಾಲಿವುಡ್ ಅಂಗಳದಲ್ಲಿ ಕೇಳಿಬಂತು ಹೊಸ ಸುದ್ದಿ
ಯಶ್
ರಾಜೇಶ್ ದುಗ್ಗುಮನೆ
|

Updated on: Aug 24, 2023 | 11:31 AM

Share

ನಟ ಯಶ್ (Yash) ಅವರ ಹೊಸ ಸಿನಿಮಾ ಬಗ್ಗೆ ಹುಟ್ಟಿಕೊಂಡಿರೋ ವದಂತಿಗಳು ಒಂದೆರಡಲ್ಲ. ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ಅವರ ಸಿನಿಮಾ ಕುರಿತು ನಿತ್ಯ ಒಂದಿಲ್ಲೊಂದು ಹೊಸ ಸುದ್ದಿ ಹುಟ್ಟಿಕೊಳ್ಳುತ್ತಲೇ ಇವೆ. ಬಾಲಿವುಡ್​ನಲ್ಲಿ ಸಿದ್ಧವಾಗಲಿರೋ ‘ರಾಮಾಯಣ’ (Ramayana) ಸಿನಿಮಾದಲ್ಲಿ ನಟಿಸಲು ಯಶ್ ಅವರಿಗೆ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಈ ಮೊದಲು ಹರಿದಾಡಿತ್ತು. ಯಶ್ ಲುಕ್ ಟೆಸ್ಟ್​ಗೆ ಹೋಗಿದ್ದು ನಿಜ ಎನ್ನುತ್ತಿವೆ ಮೂಲಗಳು. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಯಾವುದೇ ಪ್ರಮುಖ ಪಾತ್ರ ಫೈನಲ್ ಮಾಡುವುದಕ್ಕೂ ಮೊದಲು ಲುಕ್ ಟೆಸ್ಟ್ ಮಾಡಲಾಗುತ್ತದೆ. ಅಂದರೆ, ಅವರು ಪಾತ್ರಕ್ಕೆ ಹೊಂದಿಕೆ ಆಗುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಲಾಗುತ್ತದೆ. ಒಂದೊಮ್ಮೆ ಪಾತ್ರಕ್ಕೆ ಹೊಂದಿಕೆ ಆದರೆ ಕಲಾವಿದನನ್ನು ಫೈನಲ್ ಮಾಡಲಾಗುತ್ತದೆ. ಇಲ್ಲವಾದರೆ ಬೇರೊಬ್ಬ ಕಲಾವಿದನ ಹುಡುಕಲಾಗುತ್ತದೆ. ಈಗ ನಿತೇಶ್ ತಿವಾರಿ ಕೂಡ ಯಶ್ ಅವರ ಲುಕ್ ಟೆಸ್ಟ್ ಮಾಡಿದ್ದಾರೆ ಎಂದು ‘ಬಾಲಿವುಡ್ ಹಂಗಾಮ’ ವರದಿ ಮಾಡಿದೆ.

ಈ ವರದಿಯ ಪ್ರಕಾರ ಯಶ್ ಅವರು ರಾವಣನ ಪಾತ್ರಕ್ಕೆ ಲುಕ್ ಟೆಸ್ಟ್ ಮಾಡಿಸಿದ್ದಾರಂತೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಅವರಿಗೆ ಆಫರ್ ನೀಡಿದ್ದು ನಿಜವಂತೆ. ಆದರೆ, ಸೀತೆಯ ಪಾತ್ರಕ್ಕೆ ಆಲಿಯಾ ಅವರನ್ನು ಸಂಪರ್ಕಿಸಿಲ್ಲ ಎಂದು ಬಾಲಿವುಡ್ ಹಂಗಾಮ ವರದಿ ಹೇಳಿದೆ. ಯಶ್ ಅವರ ಆಯ್ಕೆ ವಿಚಾರದಲ್ಲಿ ನಿರ್ದೇಶಕರು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.

ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರವನ್ನು ಮೂರು ಭಾಗಗಳಲ್ಲಿ ತೆರೆಗೆ ತರಲು ನಿರ್ಧರಿಸಿದ್ದಾರೆ. ಒಂದೇ ಭಾಗದಲ್ಲಿ ಎಲ್ಲವನ್ನೂ ಹೇಳಲು ಅಸಾಧ್ಯ. ಈ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಒಂದೊಮ್ಮೆ ಯಶ್ ಅವರು ಈ ಸಿನಿಮಾ ಒಪ್ಪಿಕೊಂಡರೆ ಈ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ನೀಡಬೇಕಾಗುತ್ತದೆ. ಇದರ ಜೊತೆ ಅವರು ‘ಕೆಜಿಎಫ್ 3’ ಕೆಲಸಗಳಲ್ಲೂ ಭಾಗಿ ಆಗಬೇಕಿದೆ.

ಇದನ್ನೂ ಓದಿ: ಚಂದ್ರನ ಮೇಲೆ ಹೆಜ್ಜೆಯಿಟ್ಟ ಇಸ್ರೋ ಸಾಧನೆಗೆ ಸೆಲೆಬ್ರಿಟಿಗಳ ಅಭಿನಂದನೆ; ಯಶ್​, ಅಕ್ಷಯ್​ ಕುಮಾರ್​ ಹೇಳಿದ್ದೇನು?

ಯಶ್ ಮುಂದಿನ ಚಿತ್ರದ ಬಗ್ಗೆ ಹುಟ್ಟಿಕೊಂಡ ವದಂತಿಗಳು ಹಲವು. ಯಾವುದೂ ಅಧಿಕೃತ ಆಗಿಲ್ಲ. ಹೀಗಾಗಿ, ‘ರಾಮಾಯಣ’ ವಿಚಾರ ನಿಜವೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಯಶ್ ಕಡೆಯಿಂದಲೇ ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು